Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜದ ಬದಲಾವಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ





ಬಳ್ಳಾರಿ,ನ10. ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಬಳಿ ಇರುವ ವೆಂಕವ ಧೂತರ ಮಠದಲ್ಲಿಎರಡು ದಿನಗಳ ವ್ಯಕ್ತಿತ್ವ ವಿಕಾಸನ ಶಿಬಿರವನ್ನು  ಆಯೋಜಿಸಲಾಗಿದೆ ಸುತ್ತಮುತ್ತಲಿನ ಹಳ್ಳಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

“ಸಮಾಜದ ಬದಲಾವಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ” ವಿಷಯದ ಗೋಷ್ಠಿಯನ್ನು ಎಐಡಿಎಸ್‌ಒ ಕರ್ನಾಟಕ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್ ಬೀಳೂರು ಅವರು ನಡೆಸಿಕೊಟ್ಟರು ಶಿಬಿರದ ವಿದ್ಯಾರ್ಥಿಗಳ ಪ್ರಶ್ನೆಗಳನ್ನು ಆಲಿಸಿದ ನಂತರ ಅವರನ್ನು ಉದ್ದೇಶಿಸಿ ಮಾತನಾಡುತ್ತಾ ,ನಮ್ಮ ಸ್ವಾತಂತ್ರ‍್ಯ ಚಳುವಳಿಯ ಆಶಯವು ಕೇವಲ ಬ್ರಿಟಿಷರನ್ನು ಒದ್ದೋಡಿಸುವುದು ಮಾತ್ರವಲ್ಲದೆ ಅಸ್ಥಿತ್ವದಲ್ಲಿದ್ದಂತಹ ಜಾತಿ,ಧರ್ಮ, ಲಿಂಗ ,ಆರ್ಥಿಕತೆಯ ಹೆಸರಿನಲ್ಲಿ ನಡೆಯುವ ಶೋಷಣೆ ಮತ್ತು ಸಾಮಾಜಿಕ ಅಸಮಾನತೆಯನ್ನು ಕೊನೆಗಾಣಿಸುವುದು ಎಂದು ತಿಳಿಸಿದರು ಹಾಗೂ ಇಂದಿಗೂ ಈ ಆಶಯಗಳು ಈಡೇರಿಲ್ಲ  ಎಂಬ ವಾಸ್ತವವನ್ನು ಮನಗಾಣಿಸಿದರು.

ಎಲ್ಲಾ ಕಾಲದಲ್ಲೂ ಮಾನವ ಸಮಾಜ ನೆಮ್ಮದಿ, ಸಮಾನತೆಯ ಹುಡುಕಾಟದಲ್ಲಿತ್ತು.  ಮೇಧಾವಿಗಳು,ಸಂತರು,ಪ್ರವಾದಿಗಳು ಈ ಹುಡುಕಾಟಕ್ಕೆ ಉತ್ತರ ಕೊಡಲು ಪ್ರಯತ್ನಿಸಿದ್ದಾರೆ. ಆ ಹುಡುಕಾಟಕ್ಕೆ ಸರಿಯಾದ ದಿಕ್ಕು ತೋರಿಸಿದ್ದು ನವೆಂಬರ್ ಕ್ರಾಂತಿಯ ಮೂಲಕ ಸಮಾಜವಾದಿ ರಷ್ಯಾ.ನಮ್ಮ ದೇಶದ ಉತ್ಕೃಷ್ಟ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್  ಮತ್ತು ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಸ್ಥಾಪನೆಗೆ ಸ್ಪೂರ್ತಿ ನೀಡಿದ ಸ್ವಾತಂತ್ರ‍್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ಮತ್ತು ಕಾರ್ಮಿಕ ವರ್ಗದ ಮಹಾನ್ ನಾಯಕರು ಶಿವದಾಸ್ ಘೋಷ್ ಅವರು ಮಾರ್ಗದರ್ಶನ ನೀಡಿದರು. ಆ ವಿಚಾರಧಾರೆಯ ಆಧಾರದ ಮೇಲೆ ಂIಆSಔ ಇಡೀ ದೇಶ ವ್ಯಾಪಿ ಶಿಕ್ಷಣ ಸಂಸ್ಕೃತಿ ಮಾನವತೆ ಉಳಿಸಿ ಎಂಬ  ಘೋಷ ವಾಕ್ಯದೊಂದಿಗೆ ಶಿಬಿರಗಳನ್ನು ,ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ. ಇಂದು ನಾವು ಶಿಕ್ಷಣ ಮತ್ತು ಸಂಸ್ಕೃತಿಯನ್ನು ಉಳಿಸದೇ ಹೋದಲ್ಲಿ ನಾಳೆ ಸಮಾಜದ ಬದಲಾವಣೆಯ ಬಾವುಟ ಎತ್ತಲು ಯಾವ ವಿದ್ಯಾರ್ಥಿಯು ಉಳಿದಿರುವುದಿಲ್ಲ,ಹಾಗಾಗಿ ಇಂದು ಸರ್ಕಾರಿ ಸಂಸ್ಥೆಗಳನ್ನು ಉಳಿಸುವ ಜವಾಬ್ದಾರಿ ಹಾಗೂ ವಿದ್ಯಾರ್ಥಿಗಳಲ್ಲಿ ಮಹಾನ್ ವ್ಯಕ್ತಿಗಳ ಆದರ್ಶವನ್ನು ಬಿತ್ತುವ ಜವಾಬ್ದಾರಿ ನಮ್ಮ ಮೇಲಿದೆ. ಈ ಕಾರ್ಯವನ್ನು ನಾವು ಪರಿಣಾಮಕಾರಿಯಾಗಿ ಮಾಡಿದಲ್ಲಿ ಸಾಮಾಜಿಕ ಬದಲಾವಣೆಗೆ ನಾವು ಯೋಗ್ಯ ಪಾತ್ರ ವಹಿಸಿದಂತಾಗುತ್ತದೆ ಹಾಗೂ ಮುಂದಿನ ಪೀಳಿಗೆಗೆ ಸರಿಯಾದ ಉದಾಹರಣೆಯನ್ನು ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಂIಆSಔ ನಾಯಕರು, ಕಾರ್ಯಕರ್ತರು ಹಾಗೂ ಸದಸ್ಯರು ಮುನ್ನುಗ್ಗಬೇಕಿದೆ.

ಇಂದು ಸಮಾಜದಲ್ಲಿ ಕಾಡುತ್ತಿರುವ ಸಮಸ್ಯೆಗಳನ್ನು ಕೊನೆಗಾಣಿಸಲು ನೀವು ಂIಆSಔ ಬಲಪಡಿಸಬೇಕೆಂದು ಕರೆ ನೀಡಿದರು.

ಜಿಲ್ಲಾ ಕಾರ್ಯದರ್ಶಿಗಳಾದ ಕಂಬಳಿ ಮಂಜುನಾಥ್ ಅವರು ಶಿಬಿರದ ಅಧ್ಯಕ್ಷತೆ ವಹಿಸಿದ್ದರು.  ಜಿಲ್ಲಾ ಅಧ್ಯಕ್ಷರಾದ ಈರಣ್ಣ, ಜಿಲ್ಲಾ ಉಪಾಧ್ಯಕ್ಷರಾದ ಶಾಂತಿ, ಸದಸ್ಯರಾದ ಸಮೀರ್ , ತಿಪ್ಪೇಸ್ವಾಮಿ, ಕಾಂತೇಶ, ಸುಹಾಸ್ , ರಂಜಿತ್,ಅರ್ಜುನ್ , ಹರೀಶ್,ಸುಮಿತ್ರಾ ಅಂಕಿತಾ, ಶಿವ, ವಿನೋದ್, ಮಂಜುನಾಥ್, ಪ್ರವೀಣ್  ಸೇರಿದಂತೆ ಶಿಬಿರಾರ್ಥಿಗಳು ಭಾಗವಹಿಸಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ