LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮುಂಬೈ ದಾಳಿಕೋರರ ಸಿಂಹ ಸ್ವಪ್ನ ಸದಾನಂದ ವಸಂತ್ NIA ಡಿಜಿಯಾಗಿ ಅಧಿಕಾರ ಸ್ವೀಕಾರ

ಬೆಂಗಳೂರು ಏ.01: ಎನ್​​ಐಎ ನೂತನ ಡಿಜಿಯಾಗಿ ಸದಾನಂದ್​ ವಸಂತ್ ಅವರಿಗೆ ಸೇವೆಯಿಂದ ನಿವೃತ್ತರಾದ ದಿನಕರ್ ಗುಪ್ತಾರಿಂದ ಅಧಿಕಾರ ಹಸ್ತಾಂತರ ಮಾಡಲಾಯಿತು. ಅವರು ಜೂನ್ 30, 2026 ರಂದು ತಮ್ಮ ನಿವೃತ್ತಿಯಾಗುವವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

2008ರಲ್ಲಿ ಮುಂಬೈ ಹೋಟೆಲ್ ಮೇಲಿನ ಭಯೋತ್ಪಾದಕರ ದಾಳಿ ವೇಳೆ ಸದಾನಂದ ಅವರು ಮಹಾರಾಷ್ಟ್ರ ATS ಮುಖ್ಯಸ್ಥರಾಗಿದ್ದರು. ಉಗ್ರರನ್ನು ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2008ರಲ್ಲಿ ರಾಷ್ಟ್ರಪತಿಗಳ ಪೊಲೀಸ್ ಪದಕಕ್ಕೆ ಭಾಜನರಾಗಿದ್ದರು.ಮಹಾರಾಷ್ಟ್ರ ಕೇಡರ್‍ನ 1990-ಬ್ಯಾಚ್ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿರುವ ಸದಾನಂದ ಅವರು ಡಿಸೆಂಬರ್ 31, 2026 ರಂದು ಅವರ ನಿವೃತ್ತಿಯ ಅವಧಿಯವರೆಗೆ ಎನ್‍ಐಎಯ ಡೈರೆಕ್ಟರ್ ಜನರಲ್ (ಡಿಜಿ) ಆಗಿ ಸೇವೆ ಸಲ್ಲಿಸಲಿದ್ದಾರೆ

ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಹಿಂಸಾಪೀಡಿತ ಪ.ಬಂಗಾಳದ ಡಿಜಿಪಿ ಹಾಗೂ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಚುನಾವಣಾ ಆಯೋಗ ಎತ್ತಂಗಡಿ ಮಾಡಿದೆ. ಸಂದೇಶ್‌ಖಾಲಿ ಹಿಂಸೆಯಿಂದ ಸುದ್ದಿಯಲ್ಲಿರುವ ಪ.ಬಂಗಾಳದ ಡಿಜಿಪಿ ರಾಜೀವ್‌ ಕುಮಾರ್‌ ಅವರನ್ನು ವರ್ಗಾಯಿಸಿರುವ ಆಯೋಗ, ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ವಿವೇಕ್‌ ಸಹಾಯ್‌ರನ್ನು ನೇಮಿಸಿದೆ. ಅಲ್ಲದೆ, ಗುಜರಾತ್‌, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಗೃಹ ಕಾರ್ಯದರ್ಶಿಗಳನ್ನೂ ಸಹ ವರ್ಗಾಯಿಸಿದೆ. ಇದಲ್ಲದೆ, ಬೃಹನ್ಮುಂಬಯಿ ಪಾಲಿಕೆ ಆಯುಕ್ತರು, ಸಹಾಯಕ ಆಯುಕ್ತರು ಮತ್ತು ಉಪ ಆಯುಕ್ತರು ಸೋಮವಾರ ಸಂಜೆ 6 ಗಂಟೆ ಒಳಗೆ ಹುದ್ದೆ ಬಿಡಬೇಕು ಎಂದು ಸೂಚಿಸಿದೆ.

ನೀತಿ ಸಂಹಿತೆ ಜಾರಿಯಾದ ಬಳಿಕ ಚುನಾವಣಾ ಆಯೋಗಕ್ಕೆ ಅಧಿಕಾರಿಗಳನ್ನು ವರ್ಗಾಯಿಸುವ ಪರಮೋಚ್ಚ ಅಧಿಕಾರವಿರುತ್ತದೆ. ಈ ವೇಳೆ, ಆಯೋಗವು ಆಯಾ ರಾಜ್ಯ ಸರ್ಕಾರಗಳಿಗೆ ಹೆಚ್ಚು ನಿಷ್ಠೆ ಹೊಂದಿರುವ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ನಿಷ್ಪಕ್ಷಪಾತ ಅಧಿಕಾರಿಗಳನ್ನು ನೇಮಿಸುವುದು ಮಾಮೂಲಿ ಕ್ರಮ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್