Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಧನಾ ಸಮಾವೇಶವಲ್ಲ, ಶೂನ್ಯ ಸಮಾವೇಶ : ಜಿ.ಸೋಮಶೇಖರ್ ರೆಡ್ಡಿ  ವಾಗ್ದಾಳಿ

ಬಳ್ಳಾರಿ:20. ಕಳೆದ 2 ವರ್ಷಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕಿ.ಮೀ.ರಸ್ತೆ ನಿರ್ಮಾಣ ಮಾಡೋಕೆ ಆಗಿಲ್ಲ, ನಮ್ಮ ಅವಧಿಯಲ್ಲಿನ ನಾನಾ ಕಾಮಗಾರಿಗಳಿಗೆ ಚಾಲನೆ ನೀಡಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ,   ಹಗರಣಗಳೇ 2 ವರ್ಷದ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಕೆಎಂಎಫ್ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ವಾಗ್ದಾಳಿ ನಡೆಸಿದರು.


ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಎಸ್ಸಿ, ಎಸ್ಟಿ ವರ್ಗದವರ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಗಳಿಗೆ ಬಳಕೆ ಮಾಡಿ, ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ನಡೆಸುತ್ತಿದೆ, ಕೈ ನಾಯಕರಿಗೆ ನಾಚಿಕೆಯಾಗಬೇಕು. ನಾನಾ ಕಾಮಗಾರಿಗಳನ್ನು ನಿರ್ವಹಿಸಿದ ಗುತ್ತಿಗೆದಾರರಿಗೆ ಹಣ ನೀಡಲು ಸರ್ಕಾರಕ್ಕೆ ಆಗುತ್ತಿಲ್ಲ, ಸಿ.ಎಂ.ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಶೇ.60 ಪರ್ಸೆಂಟ್ ಸರ್ಕಾರ ಎಂದು ಕಿಡಿಕಾರಿದರು. ಬಿಜೆಪಿ ಅವಧಿಯಲ್ಲಿನ ಕೆಲಸಗಳಿಗೆ ಕಾಂಗ್ರೆಸ್ ನವರು ತಮ್ಮ ಲೆಬಲ್ ಹಚ್ಚಿ ಪ್ರಚಾರ ಪಡಿತಿದ್ದಾರೆ. ಹಾಲಿನಿಂದ ಹಿಡಿದು, ಆಲ್ಕೊಹಾಲ್ ವರೆಗೂ ದರಗಳು ಗಗನಕ್ಕೇರಿದೆ, ಬಸ್ ದರ ಹೆಚ್ಚಳ, ಬಿತ್ತನೆ ಬೀಜದ ದರಗಳು ಹೆಚ್ಚು ಮಾಡಿದ್ದು, ಸರ್ಕಾರಕ್ಕೆ ಎಲ್ಲ ವರ್ಗದ ಜನರು ನಿತ್ಯ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣದಲ್ಲಿ ಸಿಲುಕಿದ್ದ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಜಿಲ್ಲೆಯ ಉಸ್ತುವಾರಿಯನ್ನು ಜಮೀರ್ ಅಹ್ಮದ್ ಅವರಿಗೆ ವಹಿಸಿದ್ದು, ಇಲ್ಲಿವರೆಗೂ ಜಿಲ್ಲೆಗೆ ಕಾಲಿಟ್ಟಿಲ್ಲ, ಶೀಘ್ರದಲ್ಲೇ ಸಚಿವರು ಕಾಣೆಯಾಗಿದ್ದಾರೆ, ಇವರನ್ನು ಹುಡುಕಿ ಕೊಡಿ ಎಂದು ದೂರು ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.


ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ ಅವರು ಮಾತನಾಡಿ, ಆಪರೇಶನ್ ಸಿಂಧೂರ ಯಶಸ್ವಿ ಹಿನ್ನೆಲೆ ಇಡಿ ಪ್ರಪಂಚವೇ ಭಾರತವನ್ನು ಹಾಗೂ ನಮ್ಮ ಸೈನಿಕರನ್ನು ಕೊಂಡಾಡುತ್ತಿದೆ, ಹೀಗಿರುವಾಗ ಕೈನಾಯಕರು ಅವಿವೇಕದ ಮಾತುಗಳು, ಅವಿವೇಕದ ಪ್ರಶ್ನೆಗಳನ್ನು ಮಾಡುತ್ತಿರುವುದು ಅತ್ಯಂತ ದುರಂತದ ಸಂಗತಿ, ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಿದ ಉಗ್ರರಿಗೆ ತಕ್ಕ ಪಾಠ ಹಾಗೂ ಅವರ ನೆಲೆಗಳನ್ನು ದ್ವಂಸ ಮಾಡಿದರೆ, ಅವಿವೇಕದ ಪ್ರಶ್ನೆಗಳನ್ನು ಮಾಡುತ್ತಿದ್ದು, ಕಾಂಗ್ರೆಸ್ ನವರ ಮನಸ್ಥಿತಿ ಹೇಗಿದೆ ಎಂಬುದು ಜಗತ್ತಿಗೆ ತಿಳಿದಿದೆ. ಕೇವಲ 24 ನಿಮಿಷಗಳಲ್ಲೇ ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಉಡಿಸ್ ಮಾಡಿದ್ದು, ಇಡಿ ಪ್ರಪಂಚವೇ ಕೊಂಡಾಡುತ್ತಿದೆ ಎಂದರು.


ಕಳೆದ 2 ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ, ಇವರು ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದಾರೆ, ತಿಳಿಯದಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಈ ಸರ್ಕಾರವನ್ನು ಕಿತ್ತೊಗೆಯಲು ಜನರು ತುದಿಗಾಲ ಮೇಲೆ ನಿಂತಿದ್ದಾರೆ. ಭ್ರಷ್ಟಾಚಾರ ಮುಕ್ತ ಬಳ್ಳಾರಿ ಅಂದವರು, ಪ್ರತಿ ಹಂತದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಸರ್ಕಾರದ ಈ ಸಮಾವೇಶ ಶೂನ್ಯ ಸಮಾವೇಶ ಎಂದು ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ವಕ್ತಾರ ಡಾ. ಬಿ.ಕೆ.ಸುಂದರ್, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್.ಗುರುಲಿಂಗನ ಗೌಡ್ರು, ಡಾ.ಅರುಣಾ, ಕೆ.ಆರ್.ಮಲ್ಲೇಶ್ ಕುಮಾರ್ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ