LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗ್ಯಾರಂಟಿ ಹೆಸರಲ್ಲಿ ಕೈ ಕಾರ್ಯಕರ್ತರಿಗೆ ಸಂಬಳ: ಬಿಜೆಪಿ ಆರೋಪ; ಕಲಾಪ ಮುಂದೂಡಿಕೆ

ಬೆಂಗಳೂರು, ಮಾರ್ಚ್ 12: ಕಾಂಗ್ರೆಸ್ ಸರ್ಕಾರವು (Congress) ಗ್ಯಾರಂಟಿ (Guarantee Schemes) ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆ ಸಮಿತಿಗಳನ್ನು ರದ್ದುಗೊಳಿಸಬೇಕೆಂದು ವಿರೋಧ ಪಕ್ಷದ ಶಾಸಕರು ಮಂಗಳವಾರ ವಿಧಾನಸಭೆಯಲ್ಲಿ ಆಗ್ರಹಿಸಿದರು. ಇದರಿಂದಾಗಿ ಕಲಾಪದಲ್ಲಿ ಕೋಲಾಹಲ ಉಂಟಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಮಧ್ಯಪ್ರವೇಶದ ಹೊರತಾಗಿಯೂ ವಿರೋಧ ಪಕ್ಷದ ನಾಯಕರು ಪಟ್ಟು ಸಡಿಲಿಸಲಿಲ್ಲ. ಈ ವಿಷಯವನ್ನು ಪ್ರಸ್ತಾಪಿಸಿದ ತುರುವೇಕೆರೆ ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಮಿತಿಗಳ ಸದಸ್ಯರನ್ನಾಗಿ ಮಾಡಲಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರ ಸಂಬಳ ನೀಡಿದೆ ಎಂದು ಆರೋಪಿಸಿದರು. ಈ ಸಮಿತಿಗಳ ಸದಸ್ಯರಿಗೆ ವೇತನ ನೀಡಲು ತೆರಿಗೆದಾರರ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.









ಅಧಿವೇಶನ ಪುನರಾರಂಭವಾದಾಗ, ವಿರೋಧ ಪಕ್ಷಗಳ ಶಾಸಕರು ಸ್ಪೀಕರ್ ಪೀಠದ ಬಳಿಗೆ ನುಗ್ಗಿ ಮತ್ತೆ ಧರಣಿ ನಡೆಸಿದರು. ಕಾಂಗ್ರೆಸ್ ಸರ್ಕಾರವು ತೆರಿಗೆದಾರರ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು. ಮತ್ತೊಂದೆಡೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ವಿರೋಧ ಪಕ್ಷಗಳು ವಿರೋಧಿಸುತ್ತಿವೆ ಎಂದು ಕಾಂಗ್ರೆಸ್ ಶಾಸಕರು ಆರೋಪಿಸಿದರು. ಇದರಿಂದಾಗಿ ಸ್ಪೀಕರ್ ಸದನವನ್ನು ದಿನದ ಮಟ್ಟಿಗೆ ಮುಂದೂಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್