Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಯಾಮ್ ಪಿತ್ರೋಡಾ ಒಬ್ಬ 420 ಎಂದ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬೆಂಗಳೂರು,09: ದೇಶದ ಜನ ಅದರಲ್ಲೂ ಭಾರತೀಯರು ಅವಮಾನಪಡುವಂತಹ ಘಟನೆ ಕಾಂಗ್ರೆಸ್‌ನಿಂದ ಆಗಿದೆ. ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಈ ಸ್ಥಿತಿಗೆ ತಂದಿದ್ದಾರೆ. ಅವರೊಬ್ಬ 420 ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದರು.


ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಭಾರತ ಕಾಂಗ್ರೆಸ್‌ಗೆ ಅಧ್ಯಕ್ಷರು, ಪಿತ್ರೋಡಾ ಇಡೀ ಜಗತ್ತಿನ ಕಾಂಗ್ರೆಸ್​ಗೆ ಅಧ್ಯಕ್ಷ, ಇವರು ಪಿತ್ರೋಡಾ ಅಲ್ಲ, ಕಾಂಗ್ರೆಸ್ ಪಾಲಿಗೆ ತಿಥಿ ಎಂದರು.


ದೇಶವನ್ನು ಛಿದ್ರಗೊಳಿಸವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಈ ಹಿಂದೆ ಡಿ.ಕೆ.ಸುರೇಶ್ ದೇಶ ವಿಭಜನೆ ಹೇಳಿಕೆ ನೀಡಿದ್ದರು. ಈಗ ಇವರ ಜನಾಂಗೀಯ ದ್ವೇಶದಿಂದ ಸಾಕಷ್ಟು ಜನರ ಪ್ರಾಣಹಾನಿಯಾಗಿದೆ. ಗಾಂಧಿ, ನೆಲ್ಸನ್ ಮಂಡೇಲಾ ಬಂದ ನಂತರ ಇದು ಕಡಿಮೆಯಾಯಿತು. ಆದರೆ, ಕಾಂಗ್ರೆಸ್ ಡಿಎನ್ಎ ಅಲ್ಲೇ ಒಡೆದಾಳುವ ನೀತಿ ಎಂದು ಹೇಳಿದರು.


ಪಿತ್ರೋಡಾ ರಾಜೀನಾಮೆ ಕೊಟ್ಟ ತಕ್ಷಣ ಸಮಸ್ಯೆ ಬಗೆಹರಿಯಲ್ಲ. ಅವರು ಹುಟ್ಟುಹಾಕಿರುವ ಈ ಮನಸ್ಥಿತಿ ದೇಶದಲ್ಲಿ ಚರ್ಚೆಯಾಗುತ್ತಿದೆ. ದೇಶದಲ್ಲಿ ಬಣ್ಣ ಕಟ್ಟಲು ಹೋದರೆ ದಕ್ಷಿಣ ಭಾರತದವರು ಆಫ್ರಿಕಾದವರು ಎಂದಿದ್ದಾರೆ. ನಮಗೆ 5 ಸಾವಿರ ವರ್ಷದ ಇತಿಹಾಸ ಇದೆ. ರಾಮಾಯಣ, ಮಹಾಭಾರತ ಹಿನ್ನೆಲೆ ಇದೆ. ಆದರೆ, ಪಿತ್ರೋಡಾ ಏಕಾಏಕಿ ನಮ್ಮನ್ನು ಆಫ್ರಿಕಾದ ಕಾಡಿಗೆ ಬಿಟ್ಟಿದ್ದಾರೆ. ಹಾಗಾದರೆ ಕರ್ನಾಟಕದಲ್ಲಿ ವಾಸ ಮಾಡುವ ಒಕ್ಕಲಿಗ, ಲಿಂಗಾಯಿತ, ಒಬಿಸಿ, ದಲಿತರಿಗೆ ಯಾವ ಬಣ್ಣ ಹಚ್ಚುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.


ನುಡಿದಂತೆ ನಡೆಯುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯ ಐದು ಗ್ಯಾರಂಟಿ ಕೊಟ್ಟಿದ್ದಾರೆ. ಅದು ಯಾವುದೆಂದರೆ ಬಿಳಿ, ಕಪ್ಪು, ಚೈನೀಸ್, ಆಫ್ರಿಕನ್, ಅರಬ್ಭಿ ಗ್ಯಾರಂಟಿ ಕೊಟ್ಟಿದ್ದಾರೆ. ಇನ್ನು ಮುಂದೆ ಈ ಗ್ಯಾರಂಟಿಗಳನ್ನೇ ಅವರು ಹೇಳಬೇಕೆಂದು ವಾಗ್ದಾಳಿ ನಡೆಸಿದರು.


ಸೋನಿಯಾ ಗಾಂಧಿ ಇಟಲಿಯಿಂದ ಬಂದರೂ ಅವರನ್ನು ಬಣ್ಣದಿಂದ ನೋಡಲಿಲ್ಲ. ಈ ದೇಶದ ಸೊಸೆ ಎಂದು ಒಪ್ಪಿಕೊಂಡಿದ್ದೇವೆ, ರಾಹುಲ್ ಸೋತ ನಂತರ ಇಟಲಿಗೆ ಹೋಗುತ್ತಾರೆ ಎಂದು ಗೊತ್ತಿದ್ದರೂ ಅವರನ್ನು ನಾವು ಭಾರತೀಯರೆಂದು ಒಪ್ಪಿಕೊಂಡಿದ್ದೇವೆ, ಪಶ್ಚಿಮಕ್ಕೆ ಬಂದವರು ಅರಬ್ಬರು ಎನ್ನುವುದಾದರೆ ಮಹಾರಾಷ್ಟ್ರದಲ್ಲಿ ಹುಟ್ಟಿದ ಅಂಬೇಡ್ಕರ್, ಗುಜರಾತಿ​ನಲ್ಲಿ ಜನಿಸಿದ ಮಹಾತ್ಮ ಗಾಂಧಿ ಯಾರು? ಎಲ್ಲಿಯವರು? ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರು, ಅವರು ಆಫ್ರಿಕಾದವರಾ?, ಬಾಲಗಂಗಾಧರ ಶ್ರೀ, ಸಿದ್ದಗಂಗಾ ಶ್ರೀ ಇವರೆಲ್ಲ ಆಫ್ರಿಕಾದವರಾ? ಎಂದು ಗುಡುಗಿದ ಆಕ್ರೋಶ, ಪ್ರಧಾನಿ ಮೋದಿ ಹೆಸರು ಹೇಳಿದವರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿದ್ದ ಸಚಿವ ಶಿವರಾಜ್ ತಂಗಡಗಿ ಅವರೇ ಈಗ ಪಿತ್ರೊಡಾ ಅವರನ್ನು ಯಾವುದರಲ್ಲಿ ಹೊಡೆಯುತ್ತೀರಿ ಹೇಳಿ ಎಂದು ತಿರುಗೇಟು ನೀಡಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ