Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯರಿಗೆ ಜೀವನದ ಕೊನೆಯ ಹಂತದಲ್ಲಿ ನಿರ್ಗತಿಕ ಸ್ಥಿತಿ : ಸಂದೀಪ್ ಪಾಟೀಲ್ ವಿಷಾದ

ಬೆಳಗಾವಿ : ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಸಮರ್ಪಿತವಾದ ಕಾನೂನು ಅರಿವು ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮವನ್ನು ನಗರದ ದೇವರಾಜ ಅರಸ್ ಕಾಲೋನಿಯ ವೃದ್ದಾಶ್ರಮದಲ್ಲಿ ಆಯೋಜಿಸಲಾಗಿತ್ತು. ಈ ಸಮಾರಂಭವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ, ನಾಗನೂರಿನ ಶ್ರೀ ಶಿವಬಸವೇಶ್ವರ ಟ್ರಸ್ಟ್ ವೃದ್ಧಾಶ್ರಮ, ಮಹಿಳಾ ಕಲ್ಯಾಣ ಸಂಸ್ಥೆ ಹಾಗೂ ಶ್ರೀ ಮಲ್ಲಿಕಾರ್ಜುನ ಫೌಂಡೇಶನ್ ಮುಂತಾದ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ದೇವರಾಜ ಅರಸ ಕಾಲೋನಿಯಲ್ಲಿರುವ ಶ್ರೀ ಚೆನ್ನಮ್ಮ ಬಿ. ಹಿರೇಮಠ ವೃದ್ಧಾಶ್ರಮದಲ್ಲಿ ಈ ಕಾರ್ಯಕ್ರಮ ಜರುಗಿದ್ದು, ಹಿರಿಯ ನಾಗರಿಕರಿಗೆ ಕಾನೂನು ವಿ?ಯಕ ಮಾಹಿತಿ ನೀಡುವ ಜೊತೆಗೆ ಅವರ ಕೊಡುಗೆಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದ ಭಾಗವಾಗಿ ಶ್ರೀ ಮಲ್ಲಿಕಾರ್ಜುನ ಫೌಂಡೇಶನ್ ವತಿಯಿಂದ ಶುದ್ಧ ಕುಡಿಯುವ ನೀರಿನ ಯಂತ್ರವೊಂದನ್ನು ವೃದ್ಧಾಶ್ರಮದಲ್ಲಿ ಉದ್ಘಾಟಿಸಲಾಯಿತು.

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂದೀಪ್ ಪಾಟೀಲ್ ಉದ್ಘಾಟಿಸಿ ಮಾತನಾಡುತ್ತಾ, "ಇಂದು ನಾವು ಸಮಾಜದಲ್ಲಿ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ನೋಡುತ್ತಿದ್ದೇವೆ. ಮಕ್ಕಳಿಗೆ ಸಂಸ್ಕಾರ ನೀಡುವಲ್ಲಿ ಮತ್ತು ಮನೆ ಆಸ್ತಿಯಾದ ಹಿರಿಯರನ್ನ ಉಳಿಸಿಕೊಳ್ಳುವಲ್ಲಿ ನಮ್ಮ ಹಿರಿಯರು ಹಾಗೂ ಅವರ ಮಕ್ಕಳು ಇಬ್ಬರೂ ವಿಫಲರಾಗಿದ್ದಾರೆ. ಇದರಿಂದಾಗಿ ಹಿರಿಯರು ತಮ್ಮ ಜೀವನದ ಕೊನೆಯ ಹಂತದಲ್ಲಿ ನಿರ್ಗತಿಕರಾಗುತ್ತಿದ್ದಾರೆ," ಎಂದು ವಿ?ದ ವ್ಯಕ್ತಪಡಿಸಿದರು.

ಆನಂತರ, ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಚೇತನ್ ಕುಮಾರ್ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಅವರು, "ಹಿರಿಯರ ಮನಸ್ಸು ಮಗುವಿನಂತೆಯೇ ಶುದ್ಧ. ಅವರಿಗೆ ದೊರೆಯುವ ಯಾವುದೇ ಉಪಯುಕ್ತ ವಸ್ತುವನ್ನೂ ತಮ್ಮ ಮನೆಯವರಿಗೆ ಕೊಡಲು ಇಚ್ಛಿಸುವ ಪ್ರವೃತ್ತಿಯು ಅವರ ನಿಸ್ವಾರ್ಥತೆಗೆ ಸಾಕ್ಷಿಯಾಗಿದೆ. ತಮ್ಮ ಇಲಾಖೆಯಿಂದ ಸರ್ಕಾರದ ಸಹಾಯ ಸಹಕಾರ ಸದಾ ಅವರಿಗೆ ಲಭ್ಯವಿದೆ," ಎಂದು ಭರವಸೆ ನೀಡಿದರು.

ತದನಂತರ, ಶ್ರೀಮತಿ ನಿರ್ಮಲಾ ಮ. ಪಾಟೀಲ್, ಅಧ್ಯಕ್ಷರು, ಶ್ರೀ ಮಲ್ಲಿಕಾರ್ಜುನ ಫೌಂಡೇಶನ್ ಅವರು ಮಾತನಾಡಿ, "ನಾನು ಬದುಕಿನಲ್ಲಿ ಅನುಭವಿಸಿದ ನೋವನ್ನ ಇತರ ಮಹಿಳೆಯರು ಅನುಭವಿಸಬಾರದು ಎಂಬ ನಿಟ್ಟಿನಲ್ಲಿ ಎರಡು ವ?ಗಳ ಹಿಂದೆ ಈ ಫೌಂಡೇಶನ್ ಸ್ಥಾಪಿಸಲಾಗಿದೆ. ಇಂದು ನಿಮ್ಮ ನಗು, ಧೈರ್ಯ ನಮ್ಮಲ್ಲೂ ಹೊಸ ಉತ್ಸಾಹವನ್ನ ಹುಟ್ಟುಹಾಕುತ್ತದೆ," ಎಂದು ಅವರು ತಮ್ಮ ಭಾವನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೃದ್ಧಾಶ್ರಮದ ಹಿರಿಯ ನಾಗರಿಕರು ಹಾಡು, ನೃತ್ಯ ಹಾಗೂ ಏಕಪಾತ್ರಾಭಿನಯದ ಮೂಲಕ ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿ ಅತೀಥಿಗಳ ಹಾಗೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.ಈ ವೇಳೆ, ಗೌರವಾನ್ವಿತ ಸಂದೀಪ ಪಾಟೀಲ್ (ಹಿರಿಯ ಸಿವಿಲ್ ನ್ಯಾಯಾಧೀಶರು, ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ), ಶ್ರೀಮತಿ ನಿರ್ಮಲಾ ಮ. ಪಾಟೀಲ್ (ಅಧ್ಯಕ್ಷರು, ಶ್ರೀ ಮಲ್ಲಿಕಾರ್ಜುನ ಫೌಂಡೇಶನ್ ಬೆಳಗಾವಿ), ಚೇತನ್ ಕುಮಾರ್ (ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ), ಎಂ. ಎಸ್ ಚೌಗಲಾ (ಸಂಸ್ಥಾಪಕರು, ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ), ಶ್ರೀಮತಿ ವೈಜಯಂತಿ ಚೌಗಲಾ (ಗೌರವ ಕಾರ್ಯದರ್ಶಿ, ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ) ಅವರು ಮತ್ತು ಮಹಿಳಾ ಕಲ್ಯಾಣ ಸಂಸ್ಥೆಯ ಸಿಬ್ಬಂದಿ ವರ್ಗ, ವೃದ್ಧಾಶ್ರಮದ ಹಿರಿಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ