Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಮಾದರಿಯಲ್ಲಿ ಸಂತಿ ಬಸ್ತವಾಡ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್






 *ಬೆಳಗಾವಿ: ಬೆಳಗಾವಿ ನಗರದ ಮಾದರಿಯಲ್ಲಿ ಸಂತಿ ಬಸ್ತವಾಡ ಗ್ರಾಮ ಅಭಿವೃದ್ಧಿಯಾಗುತ್ತಿದೆ. ನಾನು ಶಾಸಕಿಯಾದ ಬಳಿಕ ಈ ಗ್ರಾಮ ಸಮಗ್ರ ಅಭಿವೃದ್ಧಿ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌


ಸಂತಿ ಬಸ್ತವಾಡ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಸಂತಿ ಬಸ್ತವಾಡ ಮೊದಲು ಹೇಗಿತ್ತು, ಈಗ ಹೇಗಾಗಿದೆ ನೀವೆ ನೋಡಿ, ದೇವಸ್ಥಾನಗಳು ಚರ್ಚ್, ಮಸೀದಿಗಳ ಅಭಿವೃದ್ಧಿಗೆ ಹಣ ನೀಡಿರುವೆ ಎಂದರು.


 ವಿಶೇಷ ಕಾಳಜಿಯಿಂದ ಸುಮಾರು 33 ಲಕ್ಷ ರೂಪಾಯಿ ವೆಚ್ಚದಲ್ಲಿ, ದೇವಸ್ಥಾನವನ್ನು ಜೀರ್ಣೋದ್ಧಾರಗೊಳಿಸಲಾಗಿದೆ. ಗ್ರಾಮಸ್ಥರ ಹಾಗೂ ಆ ದೇವರ ಆಶೀರ್ವಾದದಿಂದ ಇವತ್ತು  ಕರ್ನಾಟಕದ ಏಳೂವರೆ ಕೋಟಿ ಜನಸಂಖ್ಯೆಯಲ್ಲಿ ಒಬ್ಬಳೇ ನಾನು ಮಹಿಳಾ ಮಂತ್ರಿಯಾಗಿರುವೆ. ನನ್ನ ಇಲಾಖೆಯ ವ್ಯಾಪ್ತಿಗೆ ಬರುವ ಗೃಹಲಕ್ಷ್ಮಿ ಯೋಜನೆಗೆ ವಾರ್ಷಿಕ 30 ಸಾವಿರ ಕೋಟಿ ರೂ ನೀಡಲಾಗುತ್ತಿದೆ. ಇಂಥ ಬಹುದೊಡ್ಡ ಜವಾಬ್ದಾರಿ ಸಿಗಲು ನಿಮ್ಮೆಲ್ಲರ ಆಶೀರ್ವಾದವೇ ಕಾರಣ ಎಂದರು.


* *ಪುನರ್ಜನ್ಮ ಪಡೆದಿರುವೆ*

ಕಳೆದ ಜನವರಿ ತಿಂಗಳಲ್ಲಿ ದೊಡ್ಡ ಅಪಘಾತದಿಂದ ಪಾರಾಗಿ ಬಂದಿರುವೆ. ಆ ಪರಿಸ್ಥಿತಿ, ಆ ಗಾಡಿ ಪರಿಸ್ಥಿತಿ ನೋಡಿದರೆ ನಾನು ವಾಪಸ್ ಬಂದಿದ್ದೆ ಹೆಚ್ಚು, ಇದಕ್ಕೆ ದೇವರ ಆಶೀರ್ವಾದವೇ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌


ಈ ವೇಳೆ ಬಡೇಕೊಳ್ಳಿಮಠದ ಶ್ರೀ ನಾಗಯ್ಯ ಅಜ್ಜನವರು, ಯುವರಾಜ ಕದಂ, ಎಸಿಪಿ ಗಂಗಾಧರ್ ಮಠಪತಿ, ಆಶ್ಪಾಕ್ ತಹಶಿಲ್ದಾರ, ಶಿವಾಜಿ ಬಸ್ತವಾಡಕರ್, ಮೃಣಾಲ್ ಹೆಬ್ಬಾಳಕರ್, ದ್ಯಾಮಣ್ಣ ನಾಯಿಕ್, ಜ್ಯೋತಿಬಾ ದೆರವಶಿ, ನಾಗೇಂದ್ರ ಬುಡರಿ, ಅಜಯ ಚಿನಕುಪ್ಪಿ, ಚನ್ನವೀರ ಪೂಜೇರಿ, ಬಾಬಾಜಿ ಪಾವಸೆ, ಬಸು ಬಿರಮೂತಿ, ಗ್ರಾಮದ ನೂರಾರು ಮಹಿಳೆಯರು ಉಪಸ್ಥಿತರಿದ್ದರು.








One attachment • Scanned by Gmail


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ