Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಮಟ್ಟದ ಮಾದರಿ ಅಧಿವೇಶನ ಸ್ಪರ್ಧೆಯಲ್ಲಿ ಸಂತೋಷ ಹಡಪದ ದ್ವಿತೀಯ  ಸ್ಥಾನ 

ಬೈಲಹೊಂಗಲ: ಬೆಂಗಳೂರಿನ ವಿಕಾಸಸೌಧದಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಆಯೋಜಿಸಿದ್ದ ರಾಜ್ಯಮಟ್ಟದ ಕಾನೂನು ವಿದ್ಯಾರ್ಥಿಗಳ ಮಾದರಿ ಅಧಿವೇಶನ ಸ್ಪರ್ಧೆಯಲ್ಲಿ ಬೈಲಹೊಂಗಲದ ಕೆ.ಆರ್.ಸಿ.ಎಸ್. ಸಂಸ್ಥೆಯ ಎಚ್.ವಿ. ಕೌಜಲಗಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂತೋಷ ಹಡಪದ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಮಹಾವಿದ್ಯಾಲಯ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ರಾಜ್ಯದ ವಿವಿಧ ಕಾನೂನು ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ವಿಧಾನಮಂಡಲದ ಅಧಿವೇಶನದ ಮಾದರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು, ಸಂಸದೀಯ ನಿಯಮಗಳು, ಚರ್ಚಾ ಕೌಶಲ್ಯ, ಪ್ರಶ್ನೋತ್ತರ ಅವಧಿ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡುವ ಸಾಮರ್ಥ್ಯವನ್ನು ಆಧರಿಸಿ ಸ್ಪರ್ಧಿಗಳನ್ನು ಮೌಲ್ಯಮಾಪನ ಮಾಡಲಾಯಿತು.
ಸಂತೋಷ ಹಡಪದ ಅವರು ತಮ್ಮ ವಾಗ್ಮಿತೆ, ಕಾನೂನು ಜ್ಞಾನ ಹಾಗೂ ಸಂಸದೀಯ ಪ್ರಕ್ರಿಯೆಗಳ ಮಾತುಗಾರಿಕೆಯಿಂದ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದರು, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ  ಪಿ ಎನ್ ದೇಸಾಯಿ, ಕಾನೂನು ಸಂಸದೀಯ ಸುಧಾರಣಾ ಸಂಸ್ಥೆಯ ನಿರ್ದೇಶಕರಾದ ಸಿ ಎಸ್ ಪಾಟೀಲ ಮುಖ್ಯಸ್ಥರಾದ ರೇವಯ್ಯ ಒಡೆಯರ್ ಹಾಗೂ ತೀರ್ಪುಗಾರರು ಪ್ರಶಸ್ತಿ ನೀಡಿ ಗೌರವಿಸಿದರು,
ಅವರ ಈ ಸಾಧನೆಗೆ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ.
ಈ ಸಾಧನೆಯು ಕಾನೂನು ಶಿಕ್ಷಣ ಕ್ಷೇತ್ರದಲ್ಲಿ ಮಹಾವಿದ್ಯಾಲಯದ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಿದೆ. ಸಂತೋಷ ಹಡಪದ ಅವರ ಯಶಸ್ಸು ಮಹಾವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ. ಎಂದು ಪ್ರಾಚಾರ್ಯರಾದ ಪಿ ಎನ್, ಪಾಟೀಲರು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ