LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

’ಲೋಕ’ ಅಖಾಡದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಹಂತಕನ ಪುತ್ರ ಸರಬ್ಜಿತ್ ಸಿಂಗ್

ಚಂಡೀಗಢ,ಏಪ್ರಿಲ್ 12 :  ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರನ್ನು ಹತ್ಯೆ ಮಾಡಿದ್ದಇಬ್ಬರ ಪೈಕಿ ಒಬ್ಬರ ಪುತ್ರ ಪಂಜಾಬ್‌ನ ಫರೀದ್‌ಕೋಟ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. 45 ವರ್ಷದ ಸರಬ್ಜಿತ್ ಸಿಂಗ್ ಅವರು ಪಂಜಾಬ್‌ನ ಫರೀದ್‌ಕೋಟ್ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಗುರುವಾರ ಹೇಳಿದ್ದಾರೆ.


ಫರೀದ್‌ಕೋಟ್‌ನಿಂದ ಚುನಾವಣೆಗೆ ಸ್ಪರ್ಧಿಸಲು ಅನೇಕರು ತನಗೆ ಆಫರ್ ಮಾಡಿದ್ದಾರೆ. ಆದರೆ, ನಾನು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸರಬ್ಜಿತ್ ಹೇಳಿದರು. ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಇಬ್ಬರು ಹಂತಕರಲ್ಲಿ ಒಬ್ಬರಾದ ಬಿಯಾಂತ್ ಸಿಂಗ್ ಅವರ ಮಗ. ಬಿಯಾಂತ್ ಸಿಂಗ್ ಮತ್ತು ಸತ್ವಂತ್ ಸಿಂಗ್ ಆಗಿನ ಪ್ರಧಾನಿಯ ಅಂಗರಕ್ಷಕರಾಗಿದ್ದರು.


ಅವರು 31 ಅಕ್ಟೋಬರ್ 1984 ರಂದು ಪ್ರಧಾನಿ ನಿವಾಸದಲ್ಲಿ ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಿದ್ದರು. ಸರಬ್ಜಿತ್ ಸಿಂಗ್ ಅವರು 2004 ರ ಲೋಕಸಭಾ ಚುನಾವಣೆಯಲ್ಲಿ ಬಟಿಂಡಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಆಗ ಅವರು 1.13 ಲಕ್ಷ ಮತಗಳನ್ನು ಪಡೆದುಕೊಂಡಿದ್ದರು ಎಂಬುದು ಗಮನಾರ್ಹ. 2007 ರಲ್ಲಿ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ ಬರ್ನಾಲಾದ ಭದೌರ್ ಕ್ಷೇತ್ರದಿಂದ ಸ್ಪರ್ಧಿಸಿ ಆಗಲೂ ಸೋಲು ಕಂಡಿದ್ದರು.


2014 ರ ಲೋಕಸಭಾ ಚುನಾವಣೆಯಲ್ಲಿ ಫತೇಘರ್ ಸಾಹಿಬ್ ಕ್ಷೇತ್ರದಿಂದ ಸಿಂಗ್ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗಾಗಿ ಕಣಕ್ಕಿಳಿದಿದ್ದರು. ಆದರೆ ಮತ್ತೊಮ್ಮೆ ಸೋಲು ಅನುಭವಿಸಿದರು. ಸಿಂಗ್ ಅವರ ತಾಯಿ ಬಿಮಲ್ ಕೌರ್ 1989 ರಲ್ಲಿ ರೋಪರ್ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಪಂಜಾಬ್‌ನ 13 ಲೋಕಸಭಾ ಸ್ಥಾನಗಳಿಗೆ ಜೂನ್ 1 ರಂದು ಮತದಾನ ನಡೆಯಲಿದ್ದು, ಈಗ ಮತ್ತೊಮ್ಮೆ ಕಣಕ್ಕಿಳಿದಿದ್ದಾರೆ ಸರಬ್ಜಿತ್​ ಸಿಂಗ್​.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್