Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶರಣರ ಅನುಭಾವದ ನುಡಿಗಳು ಬದುಕಿಗೆ ದಾರಿ : ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು

 

ಗದಗ : ಶರಣರ ಒಂದೊಂದು ವಚನದಲ್ಲಿ ಅನುಭಾವವೇ ತುಂಬಿವೆ. ಶರಣರ ಅನುಭಾವದ ನುಡಿಗಳು ಬದುಕಿಗೆ ದಾರಿ ತೋರುವ ಕೆಲಸ ಮಾಡುತ್ತವೆ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮಾತನಾಡಿದರು.

ಲಿಂಗಾಯತ ಪ್ರಗತಿಶೀಲ ಸಂಘದ ೨೭೫೭ ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಬದುಕಿಗೆ ಸುಖ ಶಾಂತಿ, ನೆಮ್ಮದಿ, ದೊರೆಯಬೇಕಾದರೆ ಶರಣರ ವಚನಗಳ ಅಧ್ಯಯನ ಅವಶ್ಯ. ಅದುವೇ ಆಧ್ಯಾತ್ಮಿಕ ವಿದ್ಯೆ. ಅವುಗಳಿಂದಲೇ ಸುಖ, ಸಂತೋ?. ಮಾನವನ ದುರ್ಗುಣಗಳನ್ನು ಕಳೆಯುವ ಶಕ್ತಿ ವಚನಗಳಿಗಿವೆ. ಬದುಕು ಬಿದ್ದು ಹೋಗದಂತೆ ಶರಣರ ವಚನಗಳು ಮಾಡುತ್ತವೆ. ಆದ್ದರಿಂದ ನಿತ್ಯ ಹತ್ತಾರು ವಚನಗಳನ್ನು ಓದುವುದರಿಂದ ಬದುಕು ಸಾರ್ಥಕವಾಗುತ್ತದೆ. ಲೌಕಿಕವಾದ ವಸ್ತುಗಳಿಂದ ಜೀವನ ಹಾಳು ಮಾಡಿಕೊಳ್ಳದೆ ವಚನಗಳ ಓದುವಿನಿಂದ ಜೀವನವನ್ನು ಹಗುರ ಮಾಡಿಕೊಳ್ಳಬಹುದು. ಶರಣರ ವಚನಗಳಲ್ಲಿ ಅಂಥ ಅದ್ಬುತ ಶಕ್ತಿ ಇದೆ ಎಂದು ತಿಳಿಸಿದರು.

ಉಪನ್ಯಾಸಕರಾಗಿ ಆಗಮಿಸಿದ ಗದಗ ಗ್ರಾಮೀಣ ಶರಣ ಸಾಹಿತ್ಯ ಪರಿ?ತ್ತಿನ ಅಧ್ಯಕ್ಷರಾದ ಎಸ್.ಎಂ. ಮರಿಗೌಡ್ರ ಕಡಗೀಲಿಲ್ಲದ ಬಂಡಿ ಹೊಡೆಗೆಡೆಯದೆ ಮಾಳ್ಬುದೆ? ಎಂಬ ವಿ?ಯ ಕುರಿತು ಮಾತನಾಡುತ್ತಾ, ಬಂಡಿ ಸುರಕ್ಷಿತವಾಗಿ ಸಾಗಬೇಕಾದರೆ ಕಡಗೀಲು ಅವಶ್ಯ. ಕಡಗೀಲು ಇಲ್ಲದಿದ್ದರೆ ಬಂಡಿ ಕಳಚಿ ಬೀಳುತ್ತದೆ. ಹಾಗೆ ಮಾನವನ ದೇಹವೆಂಬ ಬಂಡಿಗೆ ಶಿವಶರಣರ ನುಡಿಗಳು ಎಂಬ ಕಡಗೀಲು ಅವಶ್ಯ. ಬಂಡಿ, ಬಂಡಿಯ ಚಕ್ರ, ಬಂಡಿಯಲ್ಲಿ ಪ್ರಯಾಣ ಮಾಡುವವನ ಗುರಿ, ಎಲ್ಲವನ್ನು ಕಡಗೀಲು ನಿರ್ಧರಿಸುತ್ತದೆ. ಹಾಗೆ ಮಾನವನ ದೇಹ, ಗರ್ವದಿಂದ ನಡೆಯುವ ಗತಿ, ಅವನ ಗುರಿ, ಎಲ್ಲವನ್ನು ನಿರ್ಧರಿಸುವುದು ಅವನ ಮನಸ್ಸು. ಅದಕ್ಕೆ ಶಿವಶರಣರ ವಚನಗಳ ನುಡಿಗಟ್ಟುಗಳು ಕಡಗೀಲು ಇದ್ದಂತೆ ಎಂದು ತುಂಬಾ ಅರ್ಥಪೂರ್ಣವಾಗಿ ದೃ?ಂತದೊಂದಿಗೆ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಶೈಲಾ ಕೋಟೆಕಲ್ಲ ಉಪಸ್ಥಿತರಿದ್ದರು. ವಚನ ಸಂಗೀತ ಸೇವೆಯನ್ನು ಗುರುನಾಥ್ ಸುತಾರ ಹಾಗೂ ರೇವಣಸಿದ್ದಯ್ಯ ಮಂಟೂರಮಠ ನೆಡೆಸಿದರು. ಧರ್ಮಗ್ರಂಥ ಪಠಣವನ್ನು ಕುಮಾರ ಪುರು?ತ್ತಮ ಹೂಗಾರ ಮತ್ತು ವಚನ ಚಿಂತನವನ್ನು ಕುಮಾರ ವೀರೇಶ ಮದ್ಲಿ ಮಂಡಿಸಿದರು. ದಾಸೋಹ ಸೇವೆಯನ್ನು ಶ್ರೀಮತಿ ಚೆನ್ನಮ್ಮ ಚಳ್ಳಮರದ ಇವರ ಸ್ಮರಣಾರ್ಥ ಅವರ ಮಗ, ಸೊಸೆ, ಮೊಮ್ಮಕ್ಕಳು, ಹಾಗೂ ಕುಟುಂಬ ವರ್ಗದವರು ವಹಿಸಿದ್ದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ ಉಪಾಧ್ಯಕ್ಷ ಡಾ ಉಮೇಶ ಪುರದ, ವಿದ್ಯಾ ಪ್ರಭು ಗಂಜಿಹಾಳ, ಕಾರ್ಯದರ್ಶಿ ವೀರಣ್ಣ ಗೋಟಡಕಿ ಸಹಕಾರ್ಯದರ್ಶಿ ಸೋಮನಾಥ ಪುರಾಣಿಕ, ನಾಗರಾಜ್ ಹಿರೇಮಠ, ಸಂಘಟನಾ ಕಾರ್ಯದರ್ಶಿ ಮಹೇಶ್ ಗಾಣಿಗೇರ, ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರ, ಶಿವಾನುಭವ ಸಮಿತಿಯ ಚೇರ್ಮನ್ ಐ ಬಿ ಬೆನಕೊಪ್ಪ ಸಹ ಚೇರ್ಮನ್ ಶಿವಾನಂದ ಹೊಂಬಳ ಮತ್ತು ಶ್ರೀಮಠದ ಭಕ್ತರು ಉಪಸ್ಥಿತರಿದ್ದರು. ಡಾ ಉಮೇಶ ಪುರದ ಸ್ವಾಗತಿಸಿದರು. ವಿದ್ಯಾ ಪ್ರಭು ಗಂಜಿಹಾಳ ಕಾರ್ಯಕ್ರಮ ನಿರೂಪಿಸಿದರು.

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ