LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶರಣರ ವಿಚಾರಗಳೇ ಬದುಕಿಗೆ ಆದರ್ಶ: ಸಾಹಿತಿ ಜಂಬುನಾಥ ಕಂಚ್ಯಾಣಿ 



ವಿಜಯಪುರ:  ೧೨ನೇ ಶತಮಾನದ ಬಸವಾದಿ ಶರಣರು ನಿತ್ಯ, ಸತ್ಯ, ಬದುಕಿನ ಶಿವಪಥವನ್ನು ಲೋಕಕ್ಕೆ ನೀಡಿದವರು. ಪರಂಪರೆ, ಸಂಸ್ಕೃತಿ, ಜಾಗೃತಿ ಹಾಗೂ ಸಮಾಜದಲ್ಲಿರುವ ಬಡ ಜನರ ಶೈಕ್ಷಣಿಕ, ಧಾರ್ಮಿಕ ಮತ್ತು ಸಾಮಾಜಿಕ ಏಳ್ಗೆಗೆ ಶ್ರಮಿಸಿದ ಕೀರ್ತಿ ಹಾನಗಲ್ ಕುಮಾರಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಸಾಹಿತಿ ಜಂಬುನಾಥ ಕಂಚ್ಯಾಣಿ ಹೇಳಿದರು.


ನಗರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಏರ್ಪಡಿಸಿದ ಶಿವಾನುಭವ ಗೋಷ್ಠಿಯಲ್ಲಿ ಪೂಜ್ಯ ಹಾನಗಲ್ ಕುಮಾರಸ್ವಾಮಿಗಳ ಅನುಭಾವ ಕುರಿತು ಮಾತನಾಡುತ್ತ ಶರಣರ ವಿಚಾರಗಳೇ ನಮಗೆ ಆದರ್ಶ ನಿತ್ಯ ಸ್ಪೂರ್ತಿ ಪೂಜ್ಯ ಹಾನಗಲ್ ಕುಮಾರಸ್ವಾಮಿಗಳು ಸ್ಥಾಪಿಸಿದ ಸಂಸ್ಥೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಂದಿನ ಹಿರಿಯರು ಸಂಸ್ಥೆಯ ಏಳ್ಗೆಗಾಗಿ ಸಾಮಾನ್ಯ ಜನರಿಗೆ ಶೈಕ್ಷಣಿಕ ಸೌಲಭ್ಯ ಉಚಿತ ಪ್ರಸಾದ ನಿಲಯಗಳನ್ನು ತೆರೆದು ಸಮಾಜದ ಒಳತಿಗಾಗಿ ಶ್ರಮಿಸಿದವರು. ಪೂಜ್ಯರ ಸ್ಮರಣೆ ವೀರಶೈವ ಲಿಂಗಾಯತ ಸಮುದಾಯಕ್ಕೆ ನ್ಯಾಯವನ್ನು ಒದಗಿಸಿದ ಮಹಾಪುರುಷರು ಎಂದರು.

ಮಹಾಸಭೆ ಜಿಲ್ಲಾಧ್ಯಕ್ಷ ವಿ.ಸಿ. ನಾಗಠಾಣ ಮಾತನಾಡಿ ಶರಣರ ಚಿಂತನೆಗಳನ್ನು ಕೇಳುವುದರಿಂದ ಆದರ್ಶಗಳ ಪರಿಚಯವಾಗುತ್ತದೆ. ಆಚಾರ, ವಿಚಾರ ಪ್ರಚಾರ ಮಾಡಿ ಒಂದಾಗುವದಕ್ಕೆ ಹೇಳಿದವರು ಪೂಜ್ಯ ಹಾನಗಲ್ ಕುಮಾರಸ್ವಾಮಿಗಳು ಅವರು ಒಬ್ಬ ಅವಧೂತ ಪುರುಷರು ಎಂದರು.

ಮಹಾಸಭೆ ನಿರ್ದೇಶಕ ವಿಠ್ಠಲ ತೇಲಿ ಮಾತನಾಡಿದರು. ಅಪ್ಪಾಸಾಹೇಬ ಕೋರಿ, ಡಾ. ವಿ.ಡಿ.ಐಹೊಳ್ಳಿ, ಮ.ಗು. ಯಾದವಾಡ, ಶಿವಲೀಲಾ ಮಠಪತಿ, ಸಹದೇವ ನಾಡಗೌಡರ, ಬಸವರಾಜ ಒಂಟಗೋಡಿ, ಡಾ. ರಮೇಶ ತೇಲಿ, ಕಾಶಿನಾಥ ಅಣೆಪ್ಪನವರ, ಈರಣ್ಣ ತೊಂಡಿಕಟ್ಟಿ, ಓಂಕಾರ ಅಥರ್ಗಾ, ದೊಡ್ಡಣ್ಣ ಭಜಂತ್ರಿ, ಮಲ್ಲಿಕಾರ್ಜುನ ಅಮರಣ್ಣವರ, ಸುಭಾಸ ಬೇಟಗೇರಿ ಉಪಸ್ಥಿತರಿದ್ದರು.

ಮಹಾಸಭೆಯ ಪ್ರದಾನ ಕಾರ್ಯದರ್ಶಿ ಬಿ.ಟಿ. ಈಶ್ವರಗೊಂಡ ಸ್ವಾಗತಿಸಿದರು. ಸಾಹಿತಿ ಸಂಗಮೇಶ ಬದಾಮಿ ಕಾರ್ಯಕ್ರಮ ನಿರೂಪಿಸಿದರು. ಎಸ್.ಎನ್. ಶಿವಣಗಿ ವಂದಿಸಿದರು. ಶರಣರು, ಶರಣೆಯರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್