Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಹುಟ್ಟೂರಿನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅಂತ್ಯಸಂಸ್ಕಾರ

ಚನ್ನಪಟ್ಟಣ: 'ಅಭಿನಯ ಸರಸ್ವತಿ' ಬಿ. ಸರೋಜಾದೇವಿ ಸೋಮವಾರ ಮುಂಜಾನೆ ತಮ್ಮ 87ನೇ ವಯಸ್ಸಿನಲ್ಲಿ ಇಹಲೋಕದ ಪಯಣ ಮುಗಿಸಿದರು. ಇಂದು ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತಿಮ ವಿಧಿ-ವಿಧಾನಗಳು ನಡೆಯಲಿವೆ. ಮಲ್ಲೇಶ್ವರಂ ನಿವಾಸದಿಂದ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮಕ್ಕೆ ನಟಿಯ ಪಾರ್ಥಿವ ಶರೀರವನ್ನು ಸಾಗಿಸಲಾಗುತ್ತಿದೆ.


ಶಾಸಕ ಸಿ.ಪಿ. ಯೋಗೇಶ್ವರ್ ಸ್ಥಳ ಪರಿಶೀಲನೆ: ದಶವಾರ ಗ್ರಾಮದ ಹೊರವಲಯದಲ್ಲಿರುವ ನಟಿಯ ಮೆಚ್ಚಿನ ತೋಟದಲ್ಲಿ‌ ಅಂತ್ಯಸಂಸ್ಕಾರ ಕಾರ್ಯಗಳು ನೆರವೇರಲಿವೆ. ತಾಯಿ ರುದ್ರಮ್ಮ ಸಮಾಧಿ ಪಕ್ಕದಲ್ಲೇ ನಟಿಯ ಅಂತಿಮ ವಿಧಿವಿಧಾನಗಳು ಜರುಗಲಿವೆ. ಈ ಹಿನ್ನೆಲೆ, ಶಾಸಕ ಸಿ.ಪಿ. ಯೋಗೇಶ್ವರ್ ಅವರು ಪೊಲೀಸ್​ ಅಧಿಕಾರಿಗಳೊಂದಿಗೆ ಭೇಟಿ ಕೊಟ್ಟು ಸ್ಥಳ ಪರಿಶೀಲಿಸಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಚರ್ಚೆ ನಡೆಸಿ, ಅಗತ್ಯ ಕ್ರಮ‌ ಕೈಗೊಳ್ಳುವಂತೆ ಸೂಚಿಸಿದರು.


ಇಂದು ಬೆಳಗ್ಗೆ ನಟಿಯ ಬೆಂಗಳೂರು ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ನಟ ಗಣೇಶ್​ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದ್ದಾರೆ. ಇನ್ನೇನು ಕೆಲ ಹೊತ್ತಲ್ಲಿ ನಟಿ ಬಿ.ಸರೋಜಾ ದೇವಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ.

ಅಭಿನಯ ಸರಸ್ವತಿ ಖ್ಯಾತಿಯ ಹಿರಿಯ ನಟಿ ಬಿ. ಸರೋಜಾ ದೇವಿ ಅವರ ಅಂತ್ಯಸಂಸ್ಕಾರ ಇಂದು ಅವರ ಹುಟ್ಟೂರಾದ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ನಡೆಯಲಿದೆ. ತಾಯಿಯ ಸಮಾಧಿ ಪಕ್ಕವೇ ಅಂತ್ಯಸಂಸ್ಕಾರ ನಡೆಸಲು ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ.


ಒಕ್ಕಲಿಗ ಸಮುದಾಯದ ಸಂಪ್ರದಾಯದಂತೆ ಅಂತ್ಯಸಂಸ್ಕಾರ: ಬಿ. ಸರೋಜಾ ದೇವಿ ಅವರ ಪ್ರೀತಿಯ ತೋಟದಲ್ಲಿನ ತಾಯಿ ಸಮಾಧಿಯ ಪಕ್ಕವೇ ನಟಿಯ ಅಂತಿಮ ವಿಧಿ-ವಿಧಾನಗಳು ನಡೆಯಲಿದ್ದು, ಬಹುತೇಕ ಕೆಲಸಗಳು ಪೂರ್ಣಗೊಂಡಿವೆ. ಒಕ್ಕಲಿಗ ಸಮುದಾಯದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ