Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಆರ್ಥಿಕ ಪ್ರಗತಿಗೆ ಸಹಕಾರಿ: ಸಚಿವ ಸತೀಶ್‌ ಜಾರಕಿಹೊಳಿ




ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಆರ್ಥಿಕ ಪ್ರಗತಿಗೆ ಸಹಕಾರಿ: ಸಚಿವ ಸತೀಶ್‌ ಜಾರಕಿಹೊಳಿ


ಬೆಳಗಾವಿ: ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಹೆಮ್ಮರವಾಗಿ ಬೆಳೆದಿದ್ದು, ಆರ್ಥಿಕ ಪ್ರಗತಿಗೆ ಸಹಕಾರಿಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.


ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ ಕಾರ್ಯ ಮತ್ತು ಪಾಲನಾ ಬೆಳಗಾವಿ ನಗರ ವಿಭಾಗ ಕಚೇರಿ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಅನೇಕರಿಗೆ ಕೆಲಸ ನೀಡಿದ್ದು, ಈ ಸಂಸ್ಥೆ ಲಕ್ಷಾಂತರ ಕುಟುಂಬಗಳಿಗೆ ಜೀವನ ನಿರ್ವಹಣೆ ಮಾಡಲು ಅನುಕೂಲವಾಗಿದೆ ಎಂದು ತಿಳಿಸಿದರು.


ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಉದ್ಯಮ ಸೇರಿದಂತೆ ಗ್ರಾಹಕರಿಗೆ ಸರಿಯಾಗಿ ವಿದ್ಯುತ್‌ ಪೂರೈಸುವ ಮೂಲಕ ಆರ್ಥಿಕ ಪ್ರಗತಿಗೆ ಮುನ್ನುಡಿಯಾಗಿದೆ. ಕೆಎಸ್‌ಆರ್‌ಟಿಸಿ, ವಿದ್ಯುತ್‌ ಸಂಸ್ಥೆಗಳ ಸಮಸ್ಯೆ  ನಿವಾರಣೆ ಆಗಲು ಸಾಧ್ಯವಿಲ್ಲ. ಇನ್ನು ಸಾರ್ವಜನಿಕರಿಂದಲೂ ಈ ಎರಡು ಸಂಸ್ಥೆಗಳು ಹೆಚ್ಚು ಟೀಕೆಗೆ ಒಳಪಡುತ್ತವೆ. ಆದರೆ ಎರಡು ಸಂಸ್ಥೆಗಳು ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ಒಳ್ಳೆಯ ಸೇವೆ ಒದಗಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.


ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಸೈಯದ್‌ ಅಜೀಮಪೀರ್‌ ಎಸ್‌ ಖಾದ್ರಿ ಮಾತನಾ̧ಡಿ ಇಂದು ಬೆಳಗಾವಿ ನಗರದಲ್ಲಿ ಬೆಸ್ಕಾಂನಿಂದ ನಿರ್ಮಿಸಿದ ನೂನತ ಕಟ್ಟಡವನ್ನು ಸಚಿವ ಸತೀಶ್‌ ಜಾರಕಿಹೊಳಿ ಅವರಿಂದ ಉದ್ಘಾಟನೆಗೊಂಡಿದ್ದು ಸಂತಸ ತಂದಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಇಂಧನ ಸಚಿವ ಕೆ.ಜೆ. ಜಾರ್ಜ್‌, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಸೂಚನೆ ಮೇರೆಗೆ ನಾನು ಅಧಿಕಾರ ವಹಿಸಿಕೊಂಡ ನಂತರ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದರು.


ಬೆಸ್ಕಾಂ ಇಲಾಖೆ ಸದಾ ರೈತರ, ಗ್ರಾಹಕರ ಪರ ಇದೆ. ಬೇಸ್ಕಾಂ ಸಮರ್ಪಕ ವಿದ್ಯುತ್‌ ಕಲ್ಪಿಸಲು ಸದಾ ಸಿದ್ದವಿದೆ. ಆದ್ದರಿಂದ ಸಚಿವರಾದ ಸತೀಶ್‌ ಜಾರಕಿಹೊಳಿ ಅವರು ನಮ್ಮ ಇಲಾಖೆಗೆ ಹೆಚ್ಚಿನ ಅನುದಾನ ದೊರಕಲು ಅನುವು ಮಾಡಬೇಕೆಂದು ಮನವಿ ಮಾಡಿದರು.


ಇನ್ನು ಪವರ್‌ ಮ್ಯಾನ್‌ ಗಳು ಕಿಟ್ಟ ಧರಿಸಿ, ಸುರಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು. ಏಕೆಂದರೆ ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬನೆ ಇರುತ್ತದೆ. ಕೆಲಸ ಎಷ್ಟು ಮುಖ್ಯಯೋ ಅಷ್ಟೇ ಜೀವವು ಮುಖ್ಯ. ಇಲಾಖೆಯಲ್ಲಿ ಯಾರು ಕೂಡ ನಿರ್ಲಕ್ಷದಿಂದ ಕಾರ್ಯ ನಿರ್ವಹಿಸಬಾರದು ಎಂದು ಸಲಹೆ ನೀಡಿದರು.


ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಉದ್ಯಮ ಸೇರಿದಂತೆ ಗ್ರಾಹಕರಿಗೆ ಸರಿಯಾಗಿ ವಿದ್ಯುತ್‌ ಪೂರೈಸುವ ಮೂಲಕ ಆರ್ಥಿಕ ಪ್ರಗತಿಗೆ ಮುನ್ನುಡಿಯಾಗಿದೆ. ಬೇಸ್ಕಾಂನಿಂದ ಗ್ರಾಹಕರಿಗೆ ಇನ್ನಷ್ಟು ಸ್ನೇಹಮಹಿ ಸೇವೆ ದೊರಕಲು ಪ್ರಯತ್ನಿಸುತ್ತೇನೆಂದು ತಿಳಿಸಿದರು.


ಈ ಸಂದರ್ಭದಲ್ಲಿ ಶಾಸಕ ಆಸೀಪ್‌ (ರಾಜು) ಸೇಠ್‌ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್‌ ಹಣುನ್ನವರ್‌, ಬೆಳಗಾವಿ ಬೂಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿಯ ಹಿರಿಯ ಅಧಿಕಾರಿಗಳಾದ ಚಂದ್ರಕಾಂತ ಪಾಟೀಲ್‌, ಶಿವಾಜಿ ಖರೆ, ತಿಪ್ಪಣ್ಣ ಮಾದರ, ಬಿ.ವೈ. ಹೊಳಿಗಾರ, ವಿನೋದ ಕರೂರ, ಪ್ರವೀಣಕುಮಾರ ಕೆ. ಚಿಕಡೆ, ಆರ್ೆಸ್.‌ ಸ್ವಾಜಿ, ಮನೋಹರ ಸುತ್ತಾರ, ವಿನೋದ ಕರೂರ ಸೇರಿದಂತೆ ಹಲವರು ಇದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ