Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೌದಿ ಅರೇಬಿಯಾ ರಾಜ ಮುಹಮ್ಮದ್ ಪಾಕಿಸ್ತಾನ ಪ್ರವಾಸ ದಿಢೀರ್ ಮುಂದೂಡಿಕೆ

ನವದೆಹಲಿ,11: ಸೌದಿ ಅರೇಬಿಯಾದ ರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರ ಬಹುನಿರೀಕ್ಷಿತ ಪಾಕಿಸ್ತಾನ ಪ್ರವಾಸ ದಿಢೀರ್ ಮುಂದೂಡಿಕೆಯಾಗಿದೆ. ಆದರೆ ಮುಂದಿನ ದಿನಾಂಕಗಳ ಬಗ್ಗೆ ಯಾವುದೇ ಅಧಿಕೃತ ಘೋಷಣೆಯೂ ಆಗಿಲ್ಲ. ಸಲ್ಮಾನ್ ಅವರ ಪಾಕ್ ಭೇಟಿ ದಿಢೀರ್ ರದ್ದುಗೊಳ್ಳುವುದಕ್ಕೆ ಸೌದಿ ಅರೇಬಿಯಾ ನಿಖರ ಕಾರಣವನ್ನೂ ತಿಳಿಸಿಲ್ಲ. ಎಲ್ಲವೂ ಅಂದುಕೊಂಡಂತೆಯೇ ನಡೆದಿದ್ದರೆ ಮೇ.19 ರಿಂದ 2 ದಿನಗಳ ಕಾಲ ಪಾಕ್ ಗೆ ಸಲ್ಮಾನ್ ಭೇಟಿ ನೀಡಬೇಕಿತ್ತು.

ಸೌದಿ ಅರೇಬಿಯಾದ ವಿದೇಶಾಂಗ ಇಲಾಖೆ ವಕ್ತಾರ ಮುಮ್ತಾಜ್ ಝೆಹ್ರಾ ಬಲೂಚ್ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಮುಂದಿನ ದಿನಾಂಕ ನಿಗದಿ ಬಗ್ಗೆ ಇಸ್ಲಾಮಾಬಾದ್-ರಿಯಾದ್ ನಡುವೆ ಮಾತುಕತೆ ನಡೆಯುತ್ತಿದ್ದು ಶೀಘ್ರವೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.




ಮಾರ್ಚ್‌ನಲ್ಲಿ ಪ್ರಧಾನಿ ಶೆಹಬಾಜ್ ಷರೀಫ್ ಸೌದಿಗೆ ಭೇಟಿ ನೀಡಿದ್ದ ನಂತರ ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ನಡುವಿನ ಇತ್ತೀಚಿನ ರಾಜತಾಂತ್ರಿಕ ಮತ್ತು ವ್ಯಾಪಾರಕ್ಕೆ ಸಂಬಂಧಿತ ಉನ್ನತ ಮಟ್ಟದ ಭೇಟಿ ನಡೆಯುವ ಸಾಧ್ಯತೆಯಿದೆ.

ಪಾಕಿಸ್ತಾನ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ನೆರವಿನ ನಿರೀಕ್ಷೆಯ ದೃಷ್ಟಿಯಿಂದ ಸೌದಿ ರಾಜ ಮುಹಮ್ಮದ್ ಬಿನ್ ಸಲ್ಮಾನ್ ಪಾಕ್ ಭೇಟಿ ಮಹತ್ವ ಪಡೆದುಕೊಂಡಿತ್ತು.








ಮುಂಬರುವ ದಿನಗಳಲ್ಲಿ ಪಾಕಿಸ್ತಾನದಲ್ಲಿ USD 5 ಶತಕೋಟಿ ಮೌಲ್ಯದ ಸೌದಿ ಹೂಡಿಕೆಗಳನ್ನು ಆಕರ್ಷಿಸಲು ಮಕ್ಕಾದಲ್ಲಿ ಎರಡೂ ದೇಶಗಳ ನಡುವಿನ ಒಪ್ಪಂದವನ್ನು ಈ ಭೇಟಿ ಕಾರ್ಯರೂಪಕ್ಕೆ ತರುವ ನಿರೀಕ್ಷೆ ಇತ್ತು.

ಈ ಹಿಂದೆ 2019 ರ ಫೆಬ್ರವರಿಯಲ್ಲಿ ಮೊಹಮ್ಮದ್ ಬಿನ್ ಸಲ್ಮಾನ್ ಪಾಕ್ ಗೆ ಭೇಟಿ ನೀಡಿದ್ದರು. 2022 ರಲ್ಲಿಯೂ ಪಾಕ್ ಭೇಟಿ ನಿಗದಿಯಾಗಿತ್ತಾದರೂ ಕೊನೆ ಕ್ಷಣದಲ್ಲಿ ರದ್ದುಗೊಂಡಿತ್ತು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ