Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹದಾಯಿ ವಿಚಾರದಲ್ಲಿ ಗೋವಾ ಕ್ಯಾತೆ : ಕನ್ನಡಿಗರನ್ನು ಕೆರಳಿಸಿದ ಸಾವಂತ್​​ ಟ್ವೀಟ್

ಬೆಳಗಾವಿ: ಕಳಸಾ - ಬಂಡೂರಿ, ಮಹದಾಯಿ ವಿಚಾರದಲ್ಲಿ ಪದೇ ಪದೆ ಕ್ಯಾತೆ ತೆಗೆಯುವ ಗೋವಾ ಸರ್ಕಾರ ಈಗ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದೆ. ಗೋವಾ ಸಿಎಂ ಪ್ರಮೋದ್ ಸಾವಂತ್​​ ಟ್ವೀಟ್ ಈಗ ಕನ್ನಡಿಗರನ್ನು ಕೆರಳುವಂತೆ ಮಾಡಿದೆ.


ಹೌದು, ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಪರ ನದಿ ಪ್ರಾಧಿಕಾರ ಇದೇ ಜುಲೈ‌ 7ರಂದು ಖಾನಾಪುರ ತಾಲೂಕಿನ ಕಣಕುಂಬಿಗೆ ಭೇಟಿ ನೀಡಲಿದೆ. ಗೋವಾ ಸರ್ಕಾರದ ಆಗ್ರಹದ ಮೇರೆಗೆ ಕೇಂದ್ರ ಸರ್ಕಾರ ರಚಿಸಿರುವ ಉಭಯ ರಾಜ್ಯಗಳ ಸಂಸ್ಥೆ ಇದು.‌ ಈ ಸಂಬಂಧ ಗೋವಾ ಸಿಎಂ ಪ್ರಮೋದ್​ ಸಾವಂತ್​ ಟ್ವೀಟ್ ಮಾಡಿದ್ದು, ಕರ್ನಾಟಕ ‌ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ವನ್ಯಜೀವಿ, ಪರಿಸರ, ಅರಣ್ಯ ಇಲಾಖೆ ಅನುಮತಿ ಇಲ್ಲದೇ ಕರ್ನಾಟಕ ಕಾಮಗಾರಿ ಆರಂಭಿಸಿದೆ ಎಂದು ದೂರಿದ್ದಾರೆ.


ನದಿ ಮೇಲ್ವಿಚಾರಣೆ ಸಮಿತಿ ಎದುರು ಕರ್ನಾಟಕದ ಕೃತ್ಯ ಬಯಲು ಮಾಡುವುದಾಗಿ ಉಲ್ಲೇಖಿಸಿದ್ದಾರೆ. ಆದರೆ, ಪ್ರಮೋದ್ ಸಾವಂತ್ ಆರೋಪದಲ್ಲಿ ‌ಯಾವುದೇ ಹುರುಳಿಲ್ಲ ಎಂಬುದನ್ನು ಕರ್ನಾಟಕ ಸರ್ಕಾರ ಸಾಬೀತು ಪಡಿಸುವ ಅವಶ್ಯಕತೆಯಿದೆ. ಗೋವಾ ಸಿಎಂ ಇಷ್ಟೆಲ್ಲಾ ಮುತುವರ್ಜಿ ವಹಿಸಿದರೂ ಕರ್ನಾಟಕ ಸರ್ಕಾರ ಮೌನಕ್ಕೆ ಶರಣಾಗಿರೋದು ಈ ಭಾಗದ ಜನರ ಅಸಮಾಧಾನಕ್ಕೆ ಕಾರಣವಾಗಿದೆ.


ಐದು ದಶಕಗಳಿಂದ ಕಳಸಾ, ಬಂಡೂರಿ ನೀರು ಮಲಪ್ರಭಾ ನದಿಗೆ ಸೇರಬೇಕು ಎನ್ನುವ ಕೂಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ ಹಾಗೂ ಗದಗ ಜಿಲ್ಲೆಯ ಜನರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ಆದರೆ, ಗೋವಾ ಪ್ರತಿ ಸಲ ಒಂದಲ್ಲ ಒಂದು ರೀತಿಯಲ್ಲಿ ಕ್ಯಾತೆ ತೆಗೆಯುತ್ತಲೇ ಇದೆ. 2009ರಲ್ಲಿ ಮಹದಾಯಿ ನ್ಯಾಯಾಧೀಕರಣ ರಚನೆಯಾಗಿ, ಆಗಸ್ಟ್ 14ರ 2018ರಲ್ಲಿ ನ್ಯಾಯಾಧೀಕರಣ ತೀರ್ಪು ಬಂದಿದೆ. ಕರ್ನಾಟಕಕ್ಕೆ 13 ಟಿಎಂಸಿ ನೀರು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಕಳಸಾ ನಾಲಾದಿಂದ 1.72 ಟಿಎಂಸಿ, ಬಂಡೂರಿಯಿಂದ 2.18. ಟಿಎಂಸಿ ನೀರು, ಜಲ ವಿದ್ಯುತ್ ಯೋಜನೆಗೆ 8 ಟಿಎಂಸಿ ಬಳಸಲು ಮಹತ್ವದ ಆದೇಶ ಸಿಕ್ಕಿದೆ. ನ್ಯಾಯಾಧೀಕರಣ ಆದೇಶ ಬಂದು ಆರು ವರ್ಷ ಕಳೆದರೂ ನೀರು ಮಾತ್ರ ಸಿಕ್ಕಿಲ್ಲ.


ಕೇಂದ್ರದ ಪರಿಸರ, ವನ್ಯಜೀವಿ ಹಾಗೂ ಅರಣ್ಯ ಇಲಾಖೆಯಿಂದ ರಾಜ್ಯಕ್ಕೆ ಅನುಮತಿ ಸಿಕ್ಕಿಲ್ಲ. ಈ ಯೋಜನೆಯಿಂದ 500 ಹೆಕ್ಟೇರ್ ಪ್ರದೇಶದ ಅರಣ್ಯ ನಾಶ ಆಗುತ್ತದೆ ಎಂದು ಗೋವಾ ಆರೋಪಿಸಿದೆ. ಇನ್ನು ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಪರಿಷ್ಕೃತ ಯೋಜನಾ ವರದಿ ತಯಾರಿಸಲಾಗಿದ್ದು, ಪೈಪ್ ಲೈನ್ ಮೂಲಕ ಕಾಮಗಾರಿ ಮಾಡಿ ಕೇವಲ 64 ಹೆಕ್ಟೇರ್ ಅರಣ್ಯ ಪ್ರದೇಶ ಬಳಕೆ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಇನ್ನು ಇದಕ್ಕೆ ಪರ್ಯಾಯವಾಗಿ ಅಥಣಿ ತಾಲೂಕಿನ ತೆಲಸಂಗ ಬಳಿ ಅರಣ್ಯ ಬೆಳೆಸುವ ವಾಗ್ದಾನ ಕೂಡ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 1500 ಕೋಟಿ ಅನುದಾನ ಮೀಸಲು ಇಡಲಾಗಿದೆ. ಅರಣ್ಯ, ಪರಿಸರ, ವನ್ಯಜೀವಿ ಮಂಡಳಿ ಅನುಮತಿ ಸಿಗುವ ಮೊದಲೇ ಬಿಜೆಪಿ ಸರ್ಕಾರ ಟೆಂಡರ್ ಕೊಟ್ಟಿತ್ತು.


 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ