Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಸಿರಿಧಾನ್ಯ ಬೆಳೆಗಳ ಸುಧಾರಿತ ಬೇಸಾಯ ಕ್ರಮಗಳ ತರಬೇತಿ ಕಾರ್ಯಕ್ರಮ

ನೇಸರಗಿ: ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪ ಹಾಗೂ ಭಾರತೀಯ ಸಿರಿಧಾನ್ಯ ಸಂಶೋಧನಾ ಸಂಸ್ಥೆ, ಹೈದರಾಬಾದ್ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಸಿರಿಧಾನ್ಯ ಬೆಳೆಗಳ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ದಿನಾಂಕ ೨೦.೦೫.೨೦೨೫ ರಂದು ರಾಮದುರ್ಗ ತಾಲೂಕಿನ ಚನ್ನಾಪುರ ತಾಂಡಾದ ಶ್ರೀ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಿಹಾಳ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀ ಹನುಮಂತ ಬಾಳಪ್ಪ ದೇಸಾಯಿ ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಮಂಜುನಾಥ ಚೌರಡ್ಡಿಯವರು ನೆರೆವೇರಿಸಿದರು. ಉದ್ಘಾಟನಾಪರ ಭಾಷಣದಲ್ಲಿ ಇವರು ಸಿರಿಧಾನ್ಯಗಳ ಪೌಷ್ಟಿಕತೆಯ ಮಹತ್ವ ಮತ್ತು ಔಷಧೀಯ ಗುಣಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.
ಕಾರ್ಯಕ್ರಮದ ಪರಿಚಯದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಎಸ್. ಎಸ್. ಹಿರೇಮಠ ಕಾರ್ಯಕ್ರದಲ್ಲಿ ಪಾಲ್ಗೊಂಡ ಎಲ್ಲ ಗಣ್ಯರನ್ನು ಸ್ವಾಗತಿಸಿದರು. ಅದೇರೀತಿ ಶ್ರೀ ಜಿ. ಬಿ. ವಿಶ್ವನಾಥ ವಿಜ್ಞಾನಿ (ಬೇಸಾಯ ಶಾಸ್ತ್ರ) ಇವರು ಕಾರ್ಯಕ್ರಮ ಪರಿಚಯ ಮಾಡಿದರು. ಕೃಷಿ ವಿಶ್ವವಿದ್ಯಾಲಯ ಧಾರವಾಡದ ಅಖಿಲ ಭಾರತೀಯ ಸಮನ್ವಯ ಶೇಂಗಾ ಸಂಶೋಧನಾ ಯೋಜನೆಯ ಹಿರಿಯ ವಿಜ್ಞಾನಿ (ಬೇಸಾಯ ಶಾಸ್ತ್ರ) ಡಾ. ಬಸವರಾಜ ಏಣಗಿ, ಇವರು ಸಿರಿಧಾನ್ಯಗಳಾದ ಸಜ್ಜೆ, ಜೋಳ, ನವಣೆ, ಹರಗು, ಬರಗು, ಊದಲು, ಸಾವೆ, ರಾಗಿ ಮತ್ತು ಹಾರಕ ಬೆಳೆಗಳ ಸಮಗ್ರ ಬೇಸಾಯ ಕ್ರಮಗಳು, ತಳಿಗಳ ಆಯ್ಕೆ, ಗೊಬ್ಬರ ಬಳಕೆ, ನೀರು ಮತ್ತು ಪೀಡೆ ನಿರ್ವಹಣೆ ಹಾಗೂ ಕಟಾವು ಮಾಡುವ ವಿಧಾನ, ಮಹತ್ವ ಮತ್ತು ಮಾರುಕಟ್ಟೆ ಬಗ್ಗೆ ವಿಸ್ತಾರವಾಗಿ ವಿವರಿಸಿದರು.
ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಮೇವು ಬೆಳೆಗಳ ಯೋಜನೆ, ಕ್ಷೇತ್ರ ವಿಭಾಗದ ಪ್ರಾಧ್ಯಾಪಕ ಡಾ. ನಾಗಪ್ಪ ಗೊರವನಕೊಪ್ಪ ಇವರು ಸಿರಿಧಾನ್ಯಗಳು, ತಳಿಗಳ ಮಾಹಿತಿ ಮತ್ತು ಮೌಲ್ಯವರ್ಧನೆ ಹಾಗೂ ಕಟಾವಿನ ನಂತರ ಕೈಗೊಳ್ಳಬಹುದಾದ ವಿವಿಧ ಚಟುವಟಿಕೆಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ನಂದಿಹಾಳ ಗ್ರಾಮ ಪಂಚಾಯತ ಸದಸ್ಯ ಶ್ರೀ ದಾನಪ್ಪ ಕೋಬಪ್ಪ ಲಮಾಣಿ ಹಾಗೂ ರಾಮದುರ್ಗ ಸಹಾಯಕ ಕೃಷಿ ನಿರ್ದೇಶಕ ಶ್ರೀ ಎಸ್. ಎಫ್. ಬೆಳವಟಿಗಿ ಉಪಸ್ಥಿತರಿದ್ದರು.
ರಾಮದುರ್ಗ ಕೃಷಿ ಇಲಾಖೆಯ, ಆತ್ಮ ಯೋಜನೆಯ ತಾಲೂಕ ತಾಂತ್ರಿಕ ವ್ಯವಸ್ಥಾಪಕ ಗೋವಿಂದರೆಡ್ಡಿ ಜಾಯನ್ನವರ ಇವರು ಬೀಜೋಪಚಾರದ ಮಹತ್ವ ಮತ್ತು ಬೀಜೋಪಚಾರದ ಪಾತ್ಯಕ್ಷಿಕೆಯನ್ನು ಮಾಡಿ ತೋರಿಸಿದರು.
ಚನ್ನಾಪುರ ಪ್ರಗತಿಪರ ರೈತ ಶಿವಪ್ಪ ಮುರಗೆಪ್ಪ ನೀಲಾಕರಿ ಇವರು ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿ ಕೈಗೊಳ್ಳುವ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಮೌಲ್ಯವರ್ಧಿ ಸಿರಿಧಾನ್ಯ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಲಾಗಿತ್ತು. ರೈತಮಹಿಳೆಯರು ಇದರ ಸದುಪಯೋಗ ಪಡೆದುಕೊಂಡರು. ಜೊತೆಗೆ ಸಿರಿಧಾನ್ಯಗಳ ಬೇಸಾಯ ಕ್ರಮಗಳು, ಮೌಲ್ಯವರ್ಧನೆ ಕುರಿತು ಕರಪತ್ರ/ಹಸ್ತ ಪತ್ರಿಕೆಗಳನ್ನು ರೈತರಿಗೆ ಮತ್ತು ರೈತಮಹಿಳೆಯರಿಗೆ ಬಿತ್ತಿರಿಸಲಾಯಿತು.
ಕಾರ್ಯಕ್ರಮದಲ್ಲಿ ೨೦೦ ಹೆಚ್ಚು ರೈತ ಮತ್ತು ರೈತಮಹಿಳೆಯರು ಪಾಲ್ಗೊಂಡಿದ್ದರು. ಕೊನೆಯಲ್ಲಿ ರಾಮದುರ್ಗ ಕೃಷಿ ಇಲಾಖೆ, ಆತ್ಮ ಯೋಜನೆಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ರವಿ ಲಮಾಣಿ ವಂದಿಸಿದರು. ಕಾರ್ಯಕ್ರಮವನ್ನು ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಳಿಸಲಾಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ