ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ ಅವಧಿ ವಿಸ್ತರಣೆ
ಬಳ್ಳಾರಿ,ಮೇ 19 ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ. ಶಾಸಕರು, ಹಲವು ಸಂಘ-ಸAಸ್ಥೆಗಳು ಸಮೀಕ್ಷೆ ವೇಳೆ ಉದ್ಭವಿಸಿರುವ ಕೆಲವೊಂದು ಸಮಸ್ಯೆಗಳನ್ನು ಸರಿಪಡಿಸಲು ಸಮೀಕ್ಷಾ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿರುವ ಹಿನ್ನಲೆಯಲ್ಲಿ ಸಮೀಕ್ಷಾ ಕಾರ್ಯದ ಅವಧಿಯನ್ನು ಈ ಕೆಳಕಂಡAತೆ ವಿಸ್ತರಿಸಲಾಗಿದೆ.
ಮನೆ-ಮನೆ ಭೇಟಿ ನೀಡಿ ಸಮೀಕ್ಷೆಯು ಮೇ 25 ರವರೆಗೆ ವಿಸ್ತರಣೆ. ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) ಮೇ 26 ರಿಂದ 28 ರವರೆಗೆ 3 ದಿನಗಳ ಕಾಲ. ಆನ್ಲೈನ್ ಮೂಲಕ ಮೇ 19 ರಿಂದ 28 ರವರೆಗೆ ಸ್ವಯಂ ಘೋಷಣೆಗೆ ಕಾಲ ನಿಗದಿಪಡಿಸಲಾಗಿದೆ.
ಮೇ 26 ರಿಂದ 28 ರವರೆಗೆ ವಿಶೇಷ ಶಿಬಿರದಲ್ಲಿ ನಡೆಸಬೇಕಾದ ಸಮೀಕ್ಷೆಯಲ್ಲಿ ಗಣತಿದಾರರು ಘೋಷಿತ ಮತಗಟ್ಟೆಗಳಲ್ಲಿ ಖುದ್ದಾಗಿ ಉಪಸ್ಥಿತರಿದ್ದು, ಮನೆ-ಮನೆ ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಶಿಬಿರಕ್ಕೆ ಆಗಮಿಸಿದಾಗ ಸುಸೂತ್ರವಾಗಿ ಸಮೀಕ್ಷೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.