Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ ೧ ರಿಂದ ಶಾಲಾ ಪ್ರಾರಂಭೋತ್ಸವ, ದಾಖಲಾತಿ ಆಂದೋಲನ

ಸಂಭ್ರಮದ ಶಾಲಾ ಪ್ರಾರಂಭೋತ್ಸವಕ್ಕೆ ಸಕಲ ಸಿದ್ದತೆ

ಬಾಗಲಕೋಟೆ, ಮೇ,೩೦ : ಹೊಸ ಶೈಕ್ಷಣಿಕ ವರ್ಷದ ಆರಂಭದ ಹಿನ್ನಲೆಯಲ್ಲಿ ಜೂನ್ ೧ ರಿಂದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸುವ ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದೆ.
ಜಿಲ್ಲಾಧಿಕಾರಿ ಸಂಗಪ್ಪ ಅವರ ಮಾರ್ಗದರ್ಶನದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಜಿ.ಮನ್ನಿಕೇರಿ ಅವರು ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪೋಷಕರ ಸಹಭಾಗಿತ್ವದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿದ್ದು, ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಳ್ಳಲು ವಿಶೇಷ ಸಿದ್ದತೆ ಕೈಗೊಳ್ಳುತ್ತಿದೆ. ಶಾಲಾ ಆವರಣವನ್ನು ತೋರಣ, ಬಲೂನ್ ಹಾಗೂ ಬಣ್ಣ ಬಣ್ಣದ ಅಲಂಕಾರಗಳಿಂದ ಸಿಂಗರಿಸಲಾಗುತ್ತಿದ್ದು, ಮಕ್ಕಳಲ್ಲಿ ಶಾಲೆಯ ಬಗ್ಗೆ ಉತ್ಸಾಹ ಮೂಡಿಸುವ ರೀತಿಯಲ್ಲಿ ಸಜ್ಜುಗೊಳಿಸಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳೊಂದಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಉತ್ತಮ ಗುಣಮಟ್ಟದ ಶೂ ಹಾಗೂ ಸಾಕ್ಸ್‌ಗಳನ್ನು ನೀಡಲಾಗುತ್ತಿದೆ. ಈ ವರ್ಷದಿಂದ ಜಿಲ್ಲೆಯ ಎಲ್ಲ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವೀಭಾಷೆ ಕಲಿಕೆ ಪ್ರಾರಂಭಿಸಲಾಗುತ್ತಿದೆ. ಪ್ರತಿಷ್ಠಿತ ಕೆ.ಜಿ.ಎಸ್, ಪಿ.ಎಂ.ಶ್ರೀ, ಆದರ್ಶ ವಿದ್ಯಾಲಯ ಹಾಗೂ ಕೆ.ಜಿ.ಬಿ.ವಿಗಳಂತಹ ಮಾದರಿ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ಮಕ್ಕಳ ಸರ್ವಾಂಗೀನ ಅಭಿವೃದ್ದಿ ಮಾಡಲಾಗುತ್ತಿದೆ. ರಾಗಿ ಮಾಲ್ಟ, ಸಕ್ಕರೆ ಮಿಶ್ರಿತ ಹಾಲು, ರುಚಿ ಕಟ್ಟಾದ ಮಧ್ಯಾಹ್ನ ದ ಬಿಸಿಊಟ, ಮೊಟ್ಟೆ, ಬಾಳೆಹಣ್ಣುಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.
ಗ್ರಂಥಾಲಯ, ಪ್ರಯೋಗಾಲಯ, ಸ್ಮಾರ್ಟ ಕ್ಲಾಸ್‌ಗಳ ಲಭ್ಯತೆಯಿಂದ ಕಲಿಕೆ ಉತ್ತೇಜಿಸಲಾಗುತ್ತಿದೆ. ಈ ವರ್ಷದಿಂದ ಮೌಲ್ಯ ಶಿಕ್ಷಣದ ಪಠ್ಯಪುಸ್ತಕಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಮೌಲ್ಯಗಳನ್ನು ಕಲಿಸುವ ಕೆಲಸ ಮಾಡಲಾಗುತ್ತದೆ. ಪೂರ್ವ ಪ್ರಾಥಮಿಕ ಶಿಕ್ಷಣ, ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಪಾಲಕರಿಗೆ ಆರ್ಥಿಕ ಹೊರೆ ಇರುವದಿಲ್ಲ. ಆದ್ದರಿಂದ ಪಾಲಕರು ಅಥವಾ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸಲು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ ಹಾಗೂ ತಂಡದೊಂದಿಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.
ಸರ್ಕಾರಿ ಶಾಲೆಗಳ ಶೈಕ್ಷಣಿಕ ಶ್ರೇಷ್ಠತೆ ಸರ್ಕಾರಿ ಶಾಲೆಗಳಲ್ಲಿ ಸಮಾಜಿಕ ಸಮಾನತೆಯನ್ನು ಸಾರಲಾಗುತ್ತಿದ್ದು, ಬೇಧ-ಭಾವವಿಲ್ಲದ, ಭಾತೃತ್ವದ ನೆಲೆಗಟ್ಟಿನ ಶಿಕ್ಷಣ ನೀಡಿ ಮಾನವೀಯ ಮೌಲ್ಯಗಳನ್ನು ರೂಢಿಸಲಾಗುತ್ತಿದೆ. ಸರಳ ಬದುಕು, ಉನ್ನತ ಚಿಂತನೆಗಳ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಕನಸುಗಳನ್ನು ಸಾಕಾರ ಮಾಡಲಾಗುತ್ತಿದೆ. ಗ್ರಾಮೀಣ, ನಗರ ಭಾಗಗಳಲ್ಲಿ ಸರ್ವರಿಗೂ ಶಿಕ್ಷಣವನ್ನು ನೀಡಿ ಸಾಮಾಜಿಕ ಒಗ್ಗಟ್ಟನ್ನು ಮೂಡಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಓದಿದವರು ಶ್ರೇಷ್ಟ ಹುದ್ದೆಗಳಲ್ಲಿ ಹಾಗೂ ವಿವಿಧ ಸಾಮಾಜಿಕ ಸ್ಥಾನಮಾಗಳಲಿದ್ದಾರೆ.  

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ