Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ ಚುನಾವಣೆ 


ಯರಗಟ್ಟಿ,ಜು,೨೫ : ಪಟ್ಟಣದ ಕರ್ನಾಟಕ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೬-೨೭ ನೇ ಸಾಲಿನ ಶಾಲಾ ಸಂಸತ ಚುನಾವಣೆ ಜರುಗಿತು. 
ಸಂಸ್ಥೆಯ ಅಧ್ಯಕ್ಷರ, ರುದ್ರಪ್ಪ ಹಟ್ಟಿ ಮಾತನಾಡಿ ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ನೆರವಾಗಿದೆ. ಶಿಕ್ಷ ಣ ಇಲಾಖೆಯ ಈ ಕ್ರಮ ಶ್ಲಾಘನೆಗೆ ಕಾರಣವಾಗಿದೆ.
ಶಾಲೆ ಆರಂಭವಾಯಿತೆಂದರೆ ಪ್ರತೀ ಶಾಲೆಗಳಲ್ಲಿ ಶಾಲಾ ಸಂಸತ್ ಚುನಾವಣೆಗೆ ತಯಾರಿ ನಡೆಯುತ್ತದೆ. ಆಯಾ ವರ್ಷದ ವಿದ್ಯಾರ್ಥಿ ನಾಯಕನ ಆಯ್ಕೆ ಪ್ರಕ್ರಿಯೆ ಚುನಾವಣೆಯ ಮೂಲಕ ಸಾಗುತ್ತದೆ. ಶಾಲೆಗಳಲ್ಲಿ ಮಕ್ಕಳಿಗೆ ಚುನಾವಣೆಯ ಅರಿವು ಮೂಡಿಸುವ ಪ್ರಯುಕ್ತ ಶಾಲಾ ಸಂಸತ್ ರಚನೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶಿಸಿದ್ದು ಮಕ್ಕಳಿಗೆ ದೇಶದ ರಾಜಕೀಯ ವ್ಯವಸ್ಥೆಯನ್ನು ತಿಳಿಯುವಲ್ಲಿ ಸಹಕಾರಿಯಾಗಿದೆ.
ಪ್ರಧಾನ ಗುರುಗಳಾದ ವ್ಹಿ. ಎಂ. ಹಾದಿಮನಿ  ಮಾತನಾಡಿ ಶಾಲೆಗಳಲ್ಲಿ ನಡೆದ ಚುನಾವಣೆಗಳ ಅನ್ವಯ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಖಾತೆಗಳ ಹಂಚಿಕೆ ಮಾಡಿ ಆಯಾ ವರ್ಷದ ಶಾಲಾ ಜವಾಬ್ದಾರಿ ವಹಿಸಲಾಯಿತ್ತಿ. ಪ್ರಧಾನ ಮಂತ್ರಿ, ಶಿಕ್ಷಣ ಮಂತ್ರಿ, ಸ್ವಚ್ಛತಾ ಮಂತ್ರಿ, ಗ್ರಂಥಾಲಯ ಪಾಲನೆ, ರಕ್ಷಣಾ ಮಂತ್ರಿ, ಆಹಾರ ಮಂತ್ರಿ ಹೀಗೆ ನಾನಾ ಖಾತೆಗಳನ್ನು ನೀಡಿ ಮಕ್ಕಳಿಗೆ ಜವಾಬ್ದಾರಿಯನ್ನು ನೀಡುವುದರಿಂದ ವರ್ಷವಿಡೀ ಶಾಲೆಯ ನಿರ್ವಹಣೆ ಮಾಡಲು ಶಿಕ್ಷ ಕರಿಗೆ ಸುಲಭವೆನಿಸುತ್ತದೆ.
ಶಿಕ್ಷ ಣ ಇಲಾಖೆಯ ಈ ತಂತ್ರದಿಂದ ಮಕ್ಕಳಿಗೆ ದೇಶದ ರಾಜಕೀಯ ವ್ಯವಸ್ಥೆಯ ಬಗ್ಗೆ ಪ್ರಾಯೋಗಿಕ ಅನುಭವ ಸಿಗಲಿದೆ ಎಂದು ಹೇಳಿದರು.
ಈ ವೇಳೆ  ಸಂಸ್ಥೆಯ ನಿರ್ದೇಶಕರಾದ. ಅಶೋಕ ಹೊಂಗಲ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವಸಂತ ಬಡಿಗೇರ, ಪಾಲಕ ಪ್ರತಿನಿಧಿಗಳಾದ ಶಾವಲಿ ಕರ್ನಾಚಿ, ದುಂಡಯ್ಯ ಹಿರೇಮಠ, ಮಲ್ಲಿಕಾರ್ಜುನ ಶಿವಣ್ಣವರ ಸೇರಿದಂತೆ ಶಾಲೆ ಭೋದಕ-ಭೋದಕೇತರ ಸಿಬ್ಬಂದಿ  ವರ್ಗದವರು ಉಪಸ್ಥತರಿದ್ದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಶ್ರೀಮತಿ. ಸರಳಾ ಶಿವಾನಂದ ಹೇರೆಕರ ಇವರು    ಬೆಳಗಾವಿ ಶ್ರೀ ಬಸವೇಶ್ವರ ಕೋ-ಆಪರೇಟಿವ್  ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆವಿಜ್ರಂಭಣಿಯಿಂದ ಜರುಗಿದ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಅಥಣಿ, ಶ್ರೀ ಸುಧಾ ಭಜನಾ ಮಂಡಳದಿಂದ ಏಕಾದಶಿ‌ ನಿಮಿತ್ಯ ಪಲ್ಲಕ್ಕಿ ಉತ್ಸವ. ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕಾರ ಹುಣ್ಣಿಮೆಗೆ ಮೊದಲೇ ಸಜ್ಜುಗೊಂಡ ವೇದಿಕೆಯ ಪೂಜಾ ಕಾರ್ಯಕ್ರಮಶ್ರೀ ಖಾಸ್ಗತೇಶ್ವರ ಜಾತ್ರೋತ್ಸವ * ಎಲ್ಲಡೆ ಸಂಭ್ರಮ, ಸಡಗರದ ಮೆರಗುಜ್ಯೋತಿ ಬೆಳಗಿಸುವ ಮೂಲಕ ಸಾಂಸ್ಕೃತಿಕ ಕ್ರೀಡೆ, ಇ ಎಲ್ ಸಿ. ರೇಂಜರ್, ರೋವರ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ವಿಕಸಿತ್ ವೈಬ್ರಂಟ್‌ ವಿಲೇಜ್‌-2006 ವಿಶಿಷ್ಟ ಕಾರ್ಯಕ್ರಮಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ ಚುನಾವಣೆ ಸ್ವಾಸ್ಥ್ಯ ಸಂಕಲ್ಪ ಯೋಜನೆ ಕಾರ್ಯಕ್ರಮ