ಗಂಗಾವತಿ :
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ಇವರ ಸಂಯೋಗದಲ್ಲಿ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನ ಸಮಿತಿ, ಬಸವ ಜಯಂತಿ ಉತ್ಸವ ಸಮಿತಿ ಹಾಗೂ ಕೊಪ್ಪಳ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮೇ 1 ರಂದು ಕಾರ್ಮಿಕ ದಿನಾಚರಣೆಯ ನಿಮಿತ್ಯ ಕಾಯಕ ದಿನಾಚರಣೆ, ಕಾಯಕಶೀಲ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮವನ್ನು ಶ್ರೀ ಕೊಟ್ಟೂರು ಬಸವೇಶ್ವರ ವೇದಿಕೆಯಲ್ಲಿ ಹಮ್ಮಿಕೊಂಡಿದ್ದಾರೆ.
ಈ ಸಮಾರಂಭದಲ್ಲಿ ಗಂಗಾವತಿ ನಿವಾಸಿಯಾದ ಖಾಜಾಬಿ ಅಲ್ಲಾಸಾಬ್ ಇವರು ಸುಮಾರು 40 ವರ್ಷಗಳಿಂದ ತಾಲೂಕ್ ಪಂಚಾಯ್ತಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನಕ್ಕೆ ತಮ್ಮದೇ ಆದಂತ ಸೇವೆ ಸಲ್ಲಿಸಿದ್ದಾರೆ. ಇವರ ನಿಷ್ಠೆ, ಪ್ರಾಮಾಣಿಕತೆ ಎಲ್ಲವೂ ಆದರ್ಶ ಹಾಗೂ ಅನುಕರಣನೀಯ. ಗುರುತಿಸಿ, ಆ ಪ್ರಯುಕ್ತ ಶರಣ ಸಾಹಿತ್ಯ ಪರಿಷತ್ ವತಿಯಿಂದ 2026ನೇ ಸಾಲಿನ ಕಾಯಕಶೀಲ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದೆ.