Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೈಲಹೊಂಗಲ ಮತಕ್ಷೇತ್ರದ ಶಾಲಾ ಸುಧಾರಣಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರ ಆಯ್ಕೆ

ಬೈಲಹೊಂಗಲ: ತಾಲೂಕಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾಗಿ, ಶಾಸಕ ಮಹಾಂತೇಶ ಕೌಜಲಗಿ ಅವರ ಶಿಫಾರಸು ಮೇರೆಗೆ ಹಾಗೂ  ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಆದೇಶದನ್ವಯ ಬೈಲಹೊಂಗಲ ಮತಕ್ಷೇತ್ರದ ಶಾಲಾ ಸುಧಾರಣಾ ಸಮಿತಿಗೆ ಸರ್ಕಾರದಿಂದ ನಾಮ ನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.


ಈ ಸಮಿತಿಗೆ ಶಂಕರ ಸಾಗರ, ಶ್ರೀಮತಿ ಸುಜಾತ ಚಿಕ್ಕಮಠ, ಸುರೇಶ ಆನಿಕಿವಿ, ಜಗದೀಶ ತೋಟಗಿ ಮತ್ತು ಹಸನ ಗೊರವನಕೊಳ್ಳ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರುವ ಉದ್ದೇಶದಿಂದ ಈ ನೇಮಕಾತಿ ಮಹತ್ವದ್ದಾಗಿದೆ ಎಂದು ತಿಳಿದುಬಂದಿದೆ.


ನಾಮ ನಿರ್ದೇಶಿತ ಸದಸ್ಯರು ಶನಿವಾರ ಶಾಸಕ ಮಹಾಂತೇಶ ಕೌಜಲಗಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು ಹಾಗೂ ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.


ಶಾಸಕ ಮಹಾಂತೇಶ ಕೌಜಲಗಿ  ಮಾತನಾಡಿ, ಸಮಿತಿಯ ಸದಸ್ಯರು ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ ಕ್ಷೇತ್ರದ ಶಿಕ್ಷಣ ಮಟ್ಟವನ್ನು ಇನ್ನಷ್ಟು ಉತ್ತೇಜಿಸಬೇಕು ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ರವಿ ಹಿರೇಮಠ, ಮುಖ್ಯೋಪಾಧ್ಯಾಯ ಬಸವರಾಜ ವಾಲಿ ಹಾಗೂ ರಾಜಶೇಖರ ಗಣಾಚಾರಿ ಸೇರಿದಂತೆ ಅನೇಕರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ