ಬೈಲಹೊಂಗಲ.ಪರಮ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆ ಅವರ ಹಾಗೂ ಮಾತೃಶ್ರೀ ಡಾ. ಹೇಮಾವತಿ.ವಿ. ಹೆಗ್ಗಡೆ ಅವರ ಕೃಪಾಶೀರ್ವಾದದೊಂದಿಗೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕಿನ ಕೊರವಿನಕೊಪ್ಪ ಗ್ರಾಮದ ಶ್ರೀ ಚಂದನ ಜ್ಞಾನ ವಿಕಾಸ ಕೇಂದ್ರದಲ್ಲಿ ಹಾಗೂ ಪ್ರಮೀಳಾ ಕೌಶಲ್ಯ ಅಭಿವೃದ್ಧಿ ತರಬೇತಿ ಸಂಸ್ಥೆ ಧಾರವಾಡ ಇವರ ಸಹಯೋಗದೊಂದಿಗೆ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಸವಿತಾ ಕಲಬಾವಿ ಉದ್ಘಾಟಕರಾಗಿ ಯೋಜನಾಧಿಕಾರಿಗಳಾದ ವಿಜಯಕುಮಾರ್ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಪ್ರಿಯಾ ಕೋದಂಪುರ ಹಾಗೂ ತಾಲೂಕಿನ ಜ್ಞಾನವಿಕಾಸ ಸಮನ್ವಅಧಿಕಾರಿ ಶೈಲಾ ಜಕ್ಕನವರ, ವಲಯದ ಮೇಲ್ವಿಚಾರಕರಾದ ಜಗದೀಶ ಇವರುಗಳು ಚಾಲನೆ ನೀಡಿದರು.
ಕಾರ್ಯಕ್ರಮದ ಉದ್ಘಾಟನೆ ತಾಲೂಕಾ ಅಧಿಕಾರಿಗಳಾದ ವಿಜಯಕುಮಾರ ಮಾತನಾಡಿ ಸಭೆಯನ್ನು ಉದ್ದೇಶಿಸಿ ಸ್ವ ಉದ್ಯೋಗದ ಬಗ್ಗೆ ತರಬೇತಿ ಪಡೆದುಕೊಂಡು ಸದುಪಯೋಗ ಪಡೆದುಕೊಳ್ಳುವ ಬಗ್ಗೆ ಯೋಜನೆಯಿಂದ ಸದಸ್ಯರಿಗೆ ಇರುವ ಸೌಲಭ್ಯಗಳ ಹಾಗೂ ಪೂಜ್ಯರು ಮಾಡುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಬಟ್ಟೆ ಬ್ಯಾಗ್ ತಯಾರಿ ಮನೆ ಕೆಲಸದೊಟ್ಟಿಗೆ ಮಹಿಳೆ ಆರ್ಥಿಕವಾಗಿ ಸಬಲೀಕರಣ ಹೊಂದಲು ಸ್ವ ಉದ್ಯೋಗ ಪ್ರೇರಣಾ ಶಿಬಿರ ಪ್ರೇರಣೆ ನೀಡಲಿ ನೀಡಲಿ ಎಂದು ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯವರಿಂದ ಕೆಲವು ಸದಸ್ಯರಿಗೆ ಬಟ್ಟೆ ಬ್ಯಾಗ್ ತಯಾರಿ ಬಗ್ಗೆ ತರಬೇತಿ . ಕೊಡಿಸಲಾಯಿತು. ಕೇಂದ್ರದ ಸದಸ್ಯರು ಇದರ ಸದುಪಯೋಗ ಪಡೆದುಕೊಂಡು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ನಿರೂಪಣೆ , ಸೇವಾಪ್ರತಿನಿಧಿ ನಿರ್ಮಲಾ ಹಿರೇಮಠ ,
ಸ್ವಾಗತ ಶೀಲಾ ಕಲಬಾವಿ ಕೇಂದ್ರದ ಸರ್ವ ಸದಸ್ಯರು ಉಪಸ್ಥಿತರಿದ್ದರು.
