LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಸ್ವ ಉದ್ಯೋಗ ಪ್ರೇರಣಾ ಕಾರ್ಯಕ್ರಮ ಸಮಾರೋಪ

 

ಮುಧೋಳ: ಸೆ. ೧೧: ತಾಲೂಕಿನ ಮಾಲಾಪೂರ ಗ್ರಾಮದಲ್ಲಿ ಸ್ವಾವಲಂಬಿ ಜೀವನ ನಡೆಸಲು ಮಹಿಳೆಯರಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ಸ್ವ ಉದ್ಯೋಗದ ಮನೋಭಾವ ಬೆಳೆಸುವ ಉದ್ದೇಶದಿಂದ ಮುಧೋಳ ವಲಯದ ಮಾಲಾಪುರ ಕಾರ್ಯಕ್ಷೇತ್ರದ ಸರಸ್ವತಿ ಜ್ಞಾನವಿಕಾಸ ಕೇಂದ್ರದಲ್ಲಿ ಎರಡು ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸೀರೆಗಳಿಗೆ ವಿವಿಧ ಬಗೆಯ ಗುಚ್ಛಗಳನ್ನು ಹಾಕುವ ಕಲೆ ಹಾಗೂ ಸೀರೆ ಫೋಲ್ಡಿಂಗ್ ಕುರಿತು ನಡೆದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸ್ನೇಹಲೋಕ ಸ್ವಾವಲಂಬಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ನೇಹಾ ಹಿರೇಮಠ ಹಾಗೂ ಗ್ರಾಮದ ಗಣ್ಯರಾದ ಹೊಳೆಬಸಯ್ಯ ಹಿರೇಮಠ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ಸ್ನೇಹಾ ಹಿರೇಮಠ, “ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸಿ, ತಮ್ಮ ಕುಟುಂಬದ ನಿರ್ವಹಣೆಯನ್ನು ಸಮರ್ಥವಾಗಿ ಮಾಡುವ ಶಕ್ತಿ ಪ್ರತಿಯೊಬ್ಬರಲ್ಲೂ ಬೆಳೆದು ಬರಬೇಕು” ಎಂದು ಹೇಳಿದರು.

ತಾಲೂಕು ವಿಚಕ್ಷಣಾಧಿಕಾರಿ ವಿನಯಕುಮಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸುವರ್ಣ ನಂದಿಕೋಲಮಠ, ಒಕ್ಕೂಟದ ಅಧ್ಯಕ್ಷೆ ಸರೋಜಿನಿ ಹಿರೇಮಠ ಹಾಗೂ ಕೇಂದ್ರದ ಸದಸ್ಯೆ ಸುಮಿತ್ರಾ ಬೊರಗಿ ಅವರು ತರಬೇತಿಯಿಂದ ಪಡೆದ ಅನುಭವ ಹಾಗೂ ಅನಿಸಿಕೆಗಳನ್ನು ಹಂಚಿಕೊಂಡರು.ತರಬೇತಿ ಶಿಕ್ಷಕಿ ಆಶ್ವಿನಿ, ಸೇವಾ ಪ್ರತಿನಿಧಿ ಹೇಮಾ ಟಿಕರಿ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹಿಳೆಯರಿಗೆ ಸ್ವ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ತರಬೇತಿ ಸಹಕಾರಿಯಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಕಲಾವಿದ ಆನಂದ ಬಡಿಗೇರ ಅವರು ಗಣೇಶ ಮೂರ್ತಿಗಳಿಗೆ ಅಂತಿಮ ರೂಪ ನೀಡುತ್ತಿರುವುದು"ಬಡಾಲ ಅಂಕಲಗಿಯಲ್ಲಿ ಕುಂಭೋತ್ಸವ, ಆರತಿ ಪೂಜೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿನೂತನ ಅಧ್ಯಕ್ಷರಾಗಿ ಶ್ರೀಶೈಲ ಗೌಡ ಪಾಟೀಲ್ ಆಯ್ಕೆಸ್ವ ಉದ್ಯೋಗ ಪ್ರೇರಣಾ ಕಾರ್ಯಕ್ರಮ ಸಮಾರೋಪಕುರುಗೋಡಿನಲ್ಲಿ ‘ನನ್ನ ಮೈತ್ರಿ ಋತು ಶಾಲಾ ಹಲೋ ಮೈತ್ರಿ ಕ್ಯಾಂಪ್': ಋತುಚಕ್ರ ನೈರ್ಮಲ್ಯ ಕುರಿತು ಜಾಗೃತಿಆರೋಗ್ಯ ಕಾರ್ಯಕ್ರಮಗಳಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಿ: ಡಾ. ಶೋಭಾ ಸೂಚನೆಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ: ಸೆಪ್ಟೆಂಬರ್ 30 ಕೊನೆಯ ದಿನಸೆ. 25ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ‘ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ’: ಮಳಿಗೆಗಳಿಗಾಗಿ ಅರ್ಜಿ ಆಹ್ವಾನಪರಿಸರ ಸ್ನೇಹಿ ಮಣ್ಣಿನ ಗಣೇಶನನ್ನೇ ಬಳಸಿ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಕರೆಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಿ: ಡಾ. ಬಸರೆಡ್ಡಿ ಕರೆ