LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಕ್ರಮ ಮರಳು ದಂಧೆ: ಹಿರಿಯ ಭೂವಿಜ್ಞಾನಿ ಆಶಾ ಹಲ್ಲೆ

ಕಾರವಾರ,25: ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದವರಿಂದ ಹಲ್ಲೆಗೊಳಗಾದ ಹಿರಿಯ ಭೂವಿಜ್ಞಾನಿ ಆಶಾ ಎಂಎಸ್ ಅವರು ಉತ್ತರ ಕನ್ನಡ ಪೊಲೀಸರಿಗೆ ಪತ್ರ ಬರೆದಿದ್ದು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯ ವಿಜ್ಞಾನಿಗಳಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಹೊನ್ನಾವರ ತಾಲೂಕಿನ ಆರೋಳಿ ಗ್ರಾಮಕ್ಕೆ ಬುಧವಾರ ಆಶಾ ಅವರು ಭೇಟಿ ನೀಡಿ ಅಕ್ರಮ ಮರಳು ದಂಧೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ್ದರು. ಆದರೆ, 12 ಮಂದಿ ಸ್ಥಳೀಯರ ತಂಡ ಆಕೆಯನ್ನು ತಡೆದು ನಿಂದಿಸಿ ಕೊಲೆ ಬೆದರಿಕೆ ಹಾಕಿದೆ.

ಅಲ್ಲಿಂದ ಹೊನ್ನಾವರಕ್ಕೆ ಹಿಂತಿರುಗಿದ ಅವರು ನೇರವಾಗಿ ಪೊಲೀಸರಿಗೆ ದೂರು ದಾಖಲಿಸಲು ತೆರಳಿದರು. ಹೊನ್ನಾವರದ ತುಂಬೊಳ್ಳಿ ನಿವಾಸಿ ಜಗದೀಶ್ ನಾಯ್ಕ್, ಹೊನ್ನಾವರ ಪಟ್ಟಣದ ಮಂಜು ಶೆಟ್ಟಿ ಮತ್ತು ಮುರಳೀಧರ ಶೆಟ್ಟಿ, ನವೀನ್ ನಾಯ್ಕ್, ಮಹೇಶ್ ನಾಯ್ಕ್, ನಾಗರಾಜ ಮೇಸ್ತ, ಜಾಕಿ ಅಲ್ಮೇಡ, ಸುಬ್ರಹ್ಮಣ್ಯ ನಾಯ್ಕ್, ಪ್ರದೀಪ್ ನಾಯ್ಕ್, ಶೇಖರ್ ಗೌಡ, ವಿಶ್ವನಾಥ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ.


ಅಕ್ರಮ ಮರಳು ಗಣಿಗಾರಿಕೆ ಕುರಿತು ಪದೇ ಪದೇ ದೂರುಗಳು ಬಂದ ಹಿನ್ನೆಲೆಯಲ್ಲಿ ಮುದಕಿನಿಯಲ್ಲಿ ತನ್ನ ಸಹೋದ್ಯೋಗಿಗಳೊಂದಿಗೆ ದಾಳಿ ನಡೆಸಿರುವುದಾಗಿ ಆಶಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಾವು ಮರಳು ಲೋಡ್ ಮತ್ತು ಅಕ್ರಮ ಮರಳು ಸಾಗಿಸುವ ವಾಹನಗಳ ದಾರಿಯನ್ನು ಕಂಡುಕೊಂಡಿದ್ದೇವೆ. ಮರಳು ತುಂಬಲು ಬಳಸುತ್ತಿದ್ದ ವಸ್ತಗಳನ್ನು ವಶಪಡಿಸಿಕೊಂಡು ಸ್ಥಳದಿಂದ ತೆರಳುತ್ತಿದ್ದೆವು. ಆ ವೇಳೆ ಆರೋಪಿಗಳು ನಮ್ಮ ವಾಹನಗಳನ್ನು ಹಿಂಬಾಲಿಸಿದರು, ಮೊಳೆಗಳನ್ನು ಎಸೆದು ನಮ್ಮ ವಾಹನವನ್ನು ಪಂಕ್ಚರ್ ಮಾಡ್ದರು. ನಂತರ ನನ್ನನ್ನು ಅವಾಚ್ಯವಾಗಿ ನಿಂದಿಸಿದರು. ಮತ್ತೆ ಬರಬೇಡಿ ಎಂದು ಎಚ್ಚರಿಸಿದರು. ಒಂದು ವೇಳೆ ನಾನು ಮತ್ತೆ ಅಲ್ಲಿಗೆ ಹೋದರೆ, ನನ್ನನ್ನು ಅಟ್ಟಾಡಿಸಿಕೊಂಡು ಹೊಡೆದು ಸಾಯಿಸುವ ಬೆದರಿಕೆ ಹಾಕಿದ್ದಾರೆ ಎಂದು ಆಶಾ ದೂರಿನಲ್ಲಿ ತಿಳಿಸಿದ್ದಾರೆ.

ನನ್ನ ದೂರಿನ ಮೇರೆಗೆ ಇದೀಗ ಎಲ್ಲಾ 12 ಮಂದಿಯನ್ನು ಬಂಧಿಸಲಾಗಿದೆ. ನಾವು ದಾಳಿ ಮಾಡಲು ಮೈದಾನಕ್ಕೆ ಹೋಗುವಾಗ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದೇನೆ ಎಂದು ಅವರು ಹೇಳಿದರು. ಆಶಾ ಮೇಲಿನ ಹಲ್ಲೆಯನ್ನು ಉತ್ತರ ಕನ್ನಡ ಡಿಸಿ, ತೀವ್ರವಾಗಿ ಖಂಡಿಸಿದ್ದು, ಆಕೆಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡುತ್ತೇನೆ ಎಂದರು.


 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್