Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಕ್ಯಾನ್ಸರ್‌ ಪೀಡಿತ ಮಕ್ಕಳಿಗೆ ಪ್ರತ್ಯೇಕ ಶಾಲೆ: ಸಚಿವ ಮಧುಬಂಗಾರಪ್ಪ

ಶಿವಮೊಗ್ಗ: "ಕ್ಯಾನ್ಸರ್​​ನಿಂದ ಬಳಲುತ್ತಿರುವ ಮಕ್ಕಳಿಗೆ ಪ್ರತ್ಯೇಕ ಶಾಲೆ ಆರಂಭಿಸುತ್ತಿದ್ದೇವೆ. ಇದನ್ನು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಬಳಿಯೇ ಪ್ರಾರಂಭಿಸಬೇಕು ಎಂದುಕೊಂಡಿದ್ದೇವೆ. ಇಲ್ಲಿ ಚಿಕಿತ್ಸೆಯ ಜೊತೆಗೆ ಶಿಕ್ಷಣವನ್ನು ಸಹ ನೀಡಲಾಗುತ್ತದೆ" ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.


ಜಿಲ್ಲಾ ಸಚಿವರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, "ಶಿಕ್ಷಣದಲ್ಲಿ ಮಕ್ಕಳಿಗೆ ಗುಣಮಟ್ಟ, ಸಮಾನತೆ ಮತ್ತು ಲಭ್ಯತೆ ಇರಬೇಕೆಂದು ಈ ಕ್ರಮ ಕೈಗೊಳ್ಳುತ್ತಿದ್ದೇವೆ. ಎನ್​ಜಿಓ ಜೊತೆ ಸೇರಿ ಈ ಯೋಜನೆ ಹಮ್ಮಿಕೊಳ್ಳುತ್ತಿದ್ದೇವೆ. ಸದ್ಯ ನಮ್ಮ ರಾಜ್ಯದಲ್ಲಿ 3,500 ಮಕ್ಕಳಿಗೆ ಕ್ಯಾನ್ಸರ್ ಇರಬಹುದು ಎಂದು ಅಂದಾಜಿಸಲಾಗಿದೆ. ನಮಗೆ 1,500 ಮಕ್ಕಳು ಸಿಗಬಹುದು ಎಂಬ ನಿರೀಕ್ಷೆ ಇದೆ. 1ರಿಂದ 10ನೇ ತರಗತಿ ವರೆಗೂ ಶಾಲೆ ಆರಂಭ ಮಾಡುತ್ತಿದ್ದೇವೆ. ಇದು ಜಾರಿಯಾದಾಗ ತೃಪ್ತಿ ಸಿಗಬಹುದು. ಇದಕ್ಕೆ ಸಿಎಂ ಸಹ ನಮಗೆ ಬೆಂಬಲ ನೀಡಿದ್ದಾರೆ. ಈ ಜುಲೈನಿಂದಲೇ ಶಾಲೆ ಪ್ರಾರಂಭಿಸಬೇಕೆಂಬ ಯೋಚನೆಯಿದೆ" ಎಂದು ಹೇಳಿದರು.


"ಇನ್ಫೋಸಿಸ್​ನವರು ಶಿವಮೊಗ್ಗ ಗ್ರಾಮಾಂತರ ಭಾಗಕ್ಕೆ 200 ಕೋಟಿ ರೂ. ನೀಡಲಿದ್ದಾರೆ. ರಾಜ್ಯದಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳನ್ನು ಹೆಚ್ಚೆಚ್ಚು ಪ್ರಾರಂಭಿಸಲಾಗುವುದು. ಇದರಿಂದ ಮುಂದೆ ಸರ್ಕಾರಿ ಶಾಲೆಗಳಿಗೆ ಪ್ರವೇಶ ಹೆಚ್ಚಾಗುತ್ತದೆ. ರಾಜ್ಯದ ಇತಿಹಾಸದಲ್ಲಿ ಎಜುಕೇಷನ್ ಕಮಿಟಿ ಮಾಡಲಾಗುತ್ತಿದೆ. ಇದರ ಮೂಲಕ ಶಾಲೆಯಲ್ಲಿ ಇರುವ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಇಲ್ಲಿ ಶಿಕ್ಷಕರು ಹಾಗೂ ಎಸ್​.ಡಿ.ಎಂ.ಸಿ. ಸದಸ್ಯರಿಗೆ ಕೆಲಸವೇನು ಎಂಬುದನ್ನು ತಿಳಿಸಿಕೊಡಲಾಗುತ್ತದೆ" ಎಂದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ