Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್.ಎಸ್.ಎಲ್.ಸಿ ಯಲ್ಲಿ ಶಗುಫ್ತಾ ಶಫಿಕ್ ಪಟೇಲ್ ಮಸಳಿಗೆ ೬೧೬ ಅಂಕ

ಇಂಡಿ: ಇತ್ತಿಚೆಗೆ ಜರುಗಿದ ೨೦೨೫-೨೬ನೇ ಸಾಲೀನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನ ಇಂಗಳಗಿ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ಶಗುಫ್ತಾ ಶಫಿಕ್ ಪಟೇಲ್ ಮಸಳಿ ೬೨೫ ಅಂಕಗಳಿಗೆ ೬೧೬ ಅಂಕಗಳನ್ನು ಪಡೆದು ಶೇಕಡಾ ೯೮.೫೬% ರಷ್ಟು ಅಂಕಗಳನ್ನು ಪಡೆಯುವ ಮೂಲಕ ಗ್ರಾಮೀಣ ಭಾಗದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. 
ಪ್ರತಿಭಾನ್ವಿತ ವಿದ್ಯಾರ್ಥಿನಿ ಮೂಲತಹ ಕೃಷಿ ಮನೆತನದಲ್ಲಿ ಜನಿಸಿದ ಶಗುಫ್ತಾ ಶಫಿಕ್ ಪಟೇಲ್ ಮಸಳಿ ಅವರು ಒಟ್ಟು ೬೨೫ ಅಂಕಗಳಿಗೆ ೬೧೬ ಅಂಕಗಳನ್ನು ಗಳಿಸಿರುವ ಶಗುಫ್ತಾ ಕನ್ನಡ ಮತ್ತು ಹಿಂದಿ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆಯುವ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ. ಇವರ ಈ ಯಶಸ್ಸಿನಿಂದ ಇಡೀ ಇಂಗಳಗಿ ಗ್ರಾಮದಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ.
ಮಗಳ ಈ ಅತ್ಯುನ್ನತ ಸಾಧನೆಯ ಬಗ್ಗೆ ಹೆಮ್ಮೆಯಿಂದ ಮಾತನಾಡಿರುವ ಶಗುಫ್ತಾ ಅವರ ತಂದೆ ಶಫಿಕ್ ಪಟೇಲ್ ಅವರು, "ನನ್ನ ಮಗಳ ಈ ಸಾಧನೆ ನಮಗೆ ಅತೀವ ಸಂತೋಷ ತಂದಿದೆ. ಅವಳು ಮೊದಲಿನಿಂದಲೂ ಓದಿನಲ್ಲಿ ಬಹಳ ಆಸಕ್ತಿ ಹೊಂದಿದ್ದಳು. ಸಮಯದ ವ್ಯರ್ಥ ಮಾಡದೆ ಶಿಸ್ತಿನಿಂದ ಅಭ್ಯಾಸ ಮಾಡುತ್ತಿದ್ದಳು. ಗ್ರಾಮೀಣ ಭಾಗದಲ್ಲಿ ಸೌಲಭ್ಯಗಳು ಕಡಿಮೆ ಇದ್ದರೂ, ಅವಳು ತೋರಿದ ದೃಢ ನಿರ್ಧಾರ ಇಂದು ಅವಳಿಗೆ ಈ ಮಟ್ಟದ ಯಶಸ್ಸನ್ನು ತಂದುಕೊಟ್ಟಿದೆ. ಅವಳು ಮುಂದೆ ಏನಾಗಬೇಕೆಂದು ಬಯಸುತ್ತಾಳೆಯೋ, ಅದಕ್ಕೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ. ಒಬ್ಬ ತಂದೆಯಾಗಿ ಅವಳ ಶೈಕ್ಷಣಿಕ ಪ್ರಗತಿಯನ್ನು ನೋಡುವುದೇ ನನಗೆ ದೊಡ್ಡ ಹೆಮ್ಮೆ ಎಂದರು. ಅವರ ಮುಂದಿನ ಉನ್ನತ ವ್ಯಾಸಂಗಕ್ಕೆ ಇಡೀ ಗ್ರಾಮವೇ ಶುಭ ಹಾರೈಸಿದೆ.
ಈ ಸಂದರ್ಭದಲ್ಲಿ ಆನಂದ ಪವಾರ, ಹಸನ ಮುಜಾವರ, ಶಕೀಲ ಮಣ್ಣೂರ, ರಸುಪಟೇಲ ಮಸಳಿ, ಆಶೀಮ ಮುಲ್ಲಾ, ಪಾಂಡುರಂಗ ಜಾದವ, ಬಾಬು ಪಟೇಲ, ಬುಡ್ಡು ಮಣ್ಣುರ, ರಫೀಕಪಟೇಲ ಮಸಳಿ, ಬಾಬುಪಟೇಲ ಮಸಳಿ ಸೇರಿದಂತೆ ಇತರರು ಇದ್ದರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ