Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಕ್ತಿ ಭಾವದಿಂದ   ಶ್ರೀ ಕಾಳಿಕಾ ಕಮಟೇಶ್ವರ ಸ್ವಾಮಿ ರಥೋತ್ಸವ 


ಬಳ್ಳಾರಿ. ಏ. 03.: ನಗರದ ಕಾಳಮ್ಮ ಬೀದಿಯಲ್ಲಿ ಇರುವ ಶ್ರೀ ಕಾಳಿಕಾ ಕಮಟೇಶ್ವರ ಸ್ವಾಮಿ  ರಥೋತ್ಸವ ಭಕ್ತಿ ಭಾವದಿಂದ ಸಾವಿರಾರು ಭಕ್ತರ   ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು ಎಂದು ಕಾಳಿಕಾ ಕಮಟೇಶ್ವರ ದೇವಸ್ಥಾನ ಸಮಿತಿಯ ಕಾರ್ಯದರ್ಶಿ ವೆಂಕಟೇಶ್ ತಿಳಿಸಿದರು.

ಇಂದು ಮುಂಜಾನೆ ದೇವಸ್ಥಾನದಲ್ಲಿ ಕಮಟೇಶ್ವರ ಸ್ವಾಮಿಗೆ ವಿವಿಧ ಪೂಜಾ ವಿಧಾನಗಳನ್ನು ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಜರುಗಿಸಲಾಯಿತು. ಭಕ್ತರು ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದು, ದೇವಾಲಯದ ವಾತಾವರಣ ಭಕ್ತಿ ಮಯವಾಗಿದ್ದು ಕಂಡು ಬಂತು.


ನಂತರ ಸಂಜೆ ಐದು ಗಂಟೆಗೆ ಶ್ರದ್ದೆ ಭಕ್ತಿ ಭಾವದಿಂದ ರಥೋತ್ಸವನ್ನು  ಸಾವಿರಾರು ಭಕ್ತರ ಸಮ್ಮುಖದಲ್ಲಿ ತೇರನ್ನು ಎಳೆಯಲಾಯಿತು.


 ರಥೋತ್ಸವದಲ್ಲಿ ಭಾಗವಹಿಸಲು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಸಾವಿರಾರು ಭಕ್ತರು ಆಗಮಿಸಿ  ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತೇರನ್ನು ಹೇಳಿದು ಸ್ವಾಮಿಯ ಕೃಪೆಗೆ ಪಾತ್ರರಾಗಿ ಪುನೀತರಾದರು.

ರಥೋತ್ಸವದ ವೇಳೆ ಶಾಂತಿ ಮತ್ತು ಭದ್ರತೆ ಕಾಪಾಡಲು ಅಗತ್ಯ ವ್ಯವಸ್ಥೆಗಳನ್ನು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿದ್ದವು. ರಥವನ್ನು ಸಾಂಪ್ರದಾಯಿಕವಾಗಿ ಬೀದಿಗಳಲ್ಲಿ ಎಳೆದು ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ