Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶರಣರ ಚಿಂತನೆ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಶ್ರೀ ಸಿದ್ದರಾಮ ಸ್ವಾಮಿ  



ಬಳ್ಳಾರಿ :08. ಬಸವಾದಿ ಶರಣರ ತಾತ್ವಿಕ ಚಿಂತನೆಗಳು ಸರ್ವಕಾಲಿಕವಾದ ಜೀವನ ಮೌಲ್ಯಗಳನ್ನು ಹೊಂದಿರುವುದರಿಂದ ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ನಿಟ್ಟಿನಲ್ಲಿ ಬಸವ ಸಂಸ್ಕೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗದಗ ತೋಂಟದಾರ್ಯ ಮಠದ ಜಗದ್ಗುರು  ಶ್ರೀ ಸಿದ್ಧರಾಮ ಸ್ವಾಮಿಗಳು ತಿಳಿಸಿದರು.


 ಅವರು ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಬಳ್ಳಾರಿಯ ಬಸವ ಭವನದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜಮುಖಿ ಆದರ್ಶ ಬದುಕನ್ನು ನಡೆಸಿದಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಸಿದ್ಧರಾಮ ಸ್ವಾಮಿಗಳು ತಿಳಿಸಿದರು.


 ಪ್ರೇಮಕ್ಕ ಅಂಗಡಿ ಶರಣ ಪಥದ ನಿಜಾಚಾರಣೆಗಳ ಕುರಿತಾಗಿ ಉಪನ್ಯಾಸ ನೀಡಿದರು. ಶೇಗುಣಸಿಯ ಬಸವಪ್ರಭು ಸ್ವಾಮೀಜಿ ವಿಶೇಷ ಉಪನ್ಯಾಸ ನೀಡುತ್ತಾ  ಕನ್ನಡ ಸಾಹಿತ್ಯದ ಜೀವಸತ್ವ ವಚನ ಸಾಹಿತ್ಯವೇ ಆಗಿದೆ ಎಂದರು.


ಶಾಸಕರಾದ ನಾರಾ ಭರತರೆಡ್ಡಿ ಸಭೆಯನ್ನುದ್ದೇಶಿಸಿ ಮಾತನಾಡಿ ಮುಂದಿನ ವರ್ಷ ಬಳ್ಳಾರಿಯಲ್ಲಿ 2 ಕೋಟಿ ವೆಚ್ಚದಲ್ಲಿ ಅಶ್ವಾರೂಢ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಲಾಗುವುದು ಎಂದರು.

ದಿವ್ಯ ಸಾನಿಧ್ಯ ವಹಿಸಿದ್ದ ಭಾಲ್ಕಿಯ ಸಂಸ್ಥಾನ ಹಿರೇಮಠದ ಬಸವಲಿಂಗ ಪಟ್ಟದ್ದೇವರು ಮಾತಾನಾಡುತ್ತಾ   ಬಸವಾದಿ ಶರಣರು ಕಟ್ಟ ಬಯಸಿದ್ದ  ಸರ್ವರೀತಿಯ  ಶೋಷಣಾಮುಕ್ತ ಸಮಾನತೆಯ ಸಮ ಸಮಾಜದ ನಿರ್ಮಾಣ ಕನಸನ್ನು ನನಸು ಮಾಡುವ ಮುನ್ನಡೆಯೇ ಈ ಬಸವ ಸಂಸ್ಕೃತಿ ಅಭಿಯಾನದ ಉದ್ದೇಶವಾಗಿದೆ ಎಂದರು.


ವೇದಿಕೆಯಲ್ಲಿ ಉರುವಕೊಂಡ ಜಗದ್ಗುರು ಕರಿಬಸವರಾಜೇಂದ್ರ ಸ್ವಾಮಿಗಳು, ಸಂಡೂರಿನ ವಿರಕ್ತಮಠದ ಪ್ರಭುಸ್ವಾಮಿಗಳು, ಹಂದಿಗುಂದದ ಶಿವಾನಂದ ಸ್ವಾಮೀಜಿ, ಭಾಲ್ಕಿಯ ಗುರು ಬಸವ ಪಟ್ಟದ್ದೇವರು, ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ಮಾಜಿ ಶಾಸಕ ಜಿ. ಸೋಮಶೇಖರ್ ರೆಡ್ಡಿ, ರಾಮಚಂದ್ರ ರೆಡ್ಡಿ, ಮಾಜಿ ಬೂಡಾ ಅಧ್ಯಕ್ಷ ಡಾ ಮಹಿಪಾಲ, ಜಾಗತೀಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಎನ್.ಜಿ. ಬಸವರಾಜಪ್ಪ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಣೇಕಲ್ಲು ಮಹಾಂತೇಶ, ಕೆ.ವಿ. ರವಿಶಂಕರ ಸೇರಿದಂತೆ ಇತರರಿದ್ದರು. ಲೆಕ್ಕಪರಿಶೋಧಕಸಿರಿಗೇರಿ ಪನ್ನಾರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.


ಕಾರ್ಯಕ್ರಮದ ನಂತರ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಜಂಗಮದೆಡೆಗೆ ಎನ್ನುವ ನಾಟಕ ಪ್ರದರ್ಶನವನ್ನು ಪ್ರದರ್ಶಿಶಿಸಲಾಯಿತು.ಸಂಜೆ ಬಸವ ಜ್ಯೋತಿ ರಥ ಯಾತ್ರೆಯನ್ನು ಭವ್ಯವಾಗಿ ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ಯಶಸ್ವಿಯಾಗಿ ನಡೆಸಿಕೊಟ್ಟರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ