Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆದಿಮಾನವನ ಅಸ್ಥಿಪಂಜರ ಪತ್ತೆ  ಹಿನ್ನೆಲೆ ಸ್ಥಳಕ್ಕೆ ಸಿದ್ದಪ್ಪ ಭೇಟಿ


ಬಳ್ಳಾರಿ,

ಫೆ.10:: ಜಿಲ್ಲೆಯ ತೆಕ್ಕಲಕೋಟೆ ಪಟ್ಟಣದ ಸಮೀಪದ ಗೌಡ್ರ ಮೂಲೆ ಬೆಟ್ಟದಲ್ಲಿ ಸುಮಾರು ೫,೦೦೦ ವರ್ಷಗಳ ಹಿಂದಿನ ಆದಿಮಾನವನ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ ಎಸ್ ಸಿದ್ದಪ್ಪ. ತೆಕ್ಕಲಕೋಟೆ ಭೇಟಿನೀಡಿ, ಈ ಸಂದರ್ಭದಲ್ಲಿ ಮಾತನಾಡಿ, ಈ ಸಂಶೋಧನೆ ಪ್ರಾಚೀನ ಮಾನವ ಜೀವನ ಮತ್ತು ಸಂಸ್ಕೃತಿಯ ಅಧ್ಯಯನಕ್ಕೆ ಮತ್ತು ಸರ್ಕಾರಕ್ಕೆ ಪಠ್ಯಪುಸ್ತಕದಲ್ಲಿ ಮತ್ತು ತೆಕ್ಕಲಕೋಟೆ ಪಟ್ಟಣದಲ್ಲಿ ಮ್ಯೂಸಿಯಂ ಅನ್ನು ನಿರ್ಮಿಸಿ ಈ ಪಳೆಯುಳಿಕೆ ಮತ್ತು ಅಸ್ತಿಪಂಜರವನ್ನು ಶಾಲಾ ವಿದ್ಯಾರ್ಥಿಗಳಿಗೆ ನೋಡಲಿಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಅಮೆರಿಕಾದ ಹಾರ್ಟ್ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಉತ್ಪನನ ತಂಡದ ಸಹ ನಿರ್ದೇಶಕಿ ನಮಿತಾ ಎಸ್. ಸುಗಂಧಿ ಅವರು ಈ ವಿಷಯವನ್ನು ತಿಳಿಸಿದ್ದು,  ಕಳೆದ ಹಲವು ತಿಂಗಳಿAದ ತೆಕ್ಕಲಕೋಟೆ ಸುತ್ತಮುತ್ತಲಿನ ಹಿರೇ ಅರ್ಲ, ಬೂದಿ ದಿಬ್ಬ, ಬಾಳೆ ತೋಟ, ಜಕ್ಕೇರು ಗುಡ್ಡ ಮತ್ತು ಹುಡೇದಗುಡ್ಡ ಪ್ರದೇಶಗಳಲ್ಲಿ ಮೂರು ತಂಡಗಳು ಉತ್ಪನನ ಹಾಗೂ ಸಂಶೋಧನಾ ಕಾರ್ಯದಲ್ಲಿ ತೊಡಗಿಕೊಂಡಿದ್ದವು.


ವಾರದ ಹಿಂದೆ ನಡೆದ ಉತ್ಪನನದ ವೇಳೆ ಮಾನವನ ಮೂಳೆಯೊಂದು ಪತ್ತೆಯಾಗಿದ್ದು, ಮಣ್ಣನ್ನು ಮತ್ತಷ್ಟು ಅಗೆದಾಗ ೫.೫ ಅಡಿ ಉದ್ದದ ಸಂಪೂರ್ಣ ಅಸ್ಥಿಪಂಜರ ಕಂಡುಬAದಿದೆ. ಇಲ್ಲಿ ಮಾನವನ ದೇಹದ ಮೇಲೆ ಕಲ್ಲುಗಳನ್ನು ಇಟ್ಟು ಶವಸಂಸ್ಕಾರ ಮಾಡಿರುವುದು ಕಂಡುಬAದಿದ್ದು, ಇದು ಪ್ರಾಚೀನ ಸಂಸ್ಕೃತಿಯ ಭಾಗವಾಗಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕೆಲವು ಸ್ಥಳಗಳಲ್ಲಿ ಸುಮಾರು ಎರಡೂವರೆ ಅಡಿ ಎತ್ತರದ ಗಡಿಗೆಗಳು, ಅವುಗಳಲ್ಲಿ ಮೊಳೆಗಳು, ಹಾಗೂ ವಿವಿಧ ಗಾತ್ರದ ಮಡಕೆಗಳು ಪತ್ತೆಯಾಗಿದ್ದು, ಅವು ಶವಸಂಸ್ಕಾರಕ್ಕೆ ಬಳಸಿರಬಹುದೆಂದು ಪ್ರಾಧ್ಯಾಪಕಿ ನಮಿತಾ ಎಸ್. ಸುಗಂಧಿ ತಿಳಿಸಿದ್ದಾರೆ ಎಂದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ