Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣದ ವಿಚಾರದಲ್ಲಿ ಬಿಜೆಪಿ ಬ್ಲ್ಯಾಕ್​ಮೇಲ್ : ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಮುಡಾ ಹಗರಣದ ವಿಚಾರದಲ್ಲಿ ಬಿಜೆಪಿ ಬ್ಲ್ಯಾಕ್​ಮೇಲ್ ತಂತ್ರ ಮಾಡುತ್ತಿದೆ. ಇಲ್ಲದ ಹಗರಣವನ್ನು ಸೃಷ್ಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.


ಇಂದು ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯವರು ಮುಡಾ ವಿಚಾರದಲ್ಲಿ ಬ್ಲ್ಯಾಕ್​ಮೇಲ್ ತಂತ್ರ ಮಾಡುತ್ತಿದ್ದಾರೆ. ಇಲ್ಲದ ಹಗರಣವನ್ನು ಸೃಷ್ಟಿಸುತ್ತಿದ್ದಾರೆ. ಬಿಜೆಪಿಯವರಿಗೆ ಯಾವ ಐಡಿಯಾಲಜಿಗಳೂ ಇಲ್ಲ. ಅವರು ಯಾವತ್ತು ನ್ಯಾಯದ ಪರವಾಗಿಲ್ಲ. ಈಗಾಗಲೇ ಮುಡಾ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ. ಇದಕ್ಕಿಂತ ಇನ್ನೇನು ಬೇಕು ಎಂದರು.


ನ್ಯಾಯಾಂಗ ತನಿಖೆಯನ್ನು ಕೇಂದ್ರ ಸಚಿವರು ಅನುಮಾನದಿಂದ ನೋಡಿದರೆ ಅದರಲ್ಲಿ ಅರ್ಥ ಇದೆಯಾ?. ಬಿಜೆಪಿ ಕಾಲದಲ್ಲಿ ಎಷ್ಟು ಭ್ರಷ್ಟಾಚಾರಗಳು ನಡೆದಿವೆ. ಯಾವುದಾದರೂ ನ್ಯಾಯಾಂಗ ತನಿಖೆಗೆ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ನಮ್ಮ ಅವಧಿಯಲ್ಲಿ 7-8 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇವೆ ಎಂದು ಹೇಳಿದರು.


ಮುಡಾ ಹಗರಣ ವಿಚಾರದಲ್ಲಿ ನನಗೆ ಯಾವ ಬೇಸರವಿಲ್ಲ. ತಪ್ಪೇ ಮಾಡಿಲ್ಲ ಅಂದ್ರೆ ಬೇಸರ ಯಾಕೆ?. 40 ವರ್ಷ ರಾಜಕಾರಣದಲ್ಲಿ ನನ್ನ ಮೇಲೆ ಬಹಳ ಆರೋಪಗಳು ಬಂದಿವೆ. ಇದನ್ನು ರಾಜಕೀಯವಾಗಿ ಎದುರಿಸುತ್ತೇನೆ. ಬಿಜೆಪಿಯವರು ಪಾದಯಾತ್ರೆ ಮಾಡುವುದಾದರೆ ಮಾಡಲಿ. ಅದನ್ನು ರಾಜಕೀಯವಾಗಿ ಎದುರಿಸಲು ನಾವೂ ಸಹ ಪಾದಯಾತ್ರೆ ಮಾಡುತ್ತೇವೆ ಎಂದು ತಿಳಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ