Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾತಂದರಿಂದ ವಿಘ್ನ : ಸಿದ್ದನಗೌಡರ ಖಂಡನೆ

ಬೈಲಹೊಂಗಲ: ಮದ್ದೂರಿನಲ್ಲಿ ವಿಘ್ನೇಶ್ವರನ ವಿಸರ್ಜನೆಯಲ್ಲಿ ಮಂತಾದರ ತಂದ ವಿಘ್ನವನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಮಾಡಿರುವ ಅಮಾನುಷ ಪೊಲೀಸ್ ಲಾಠಿ ಚಾರ್ಜ ಖಂಡನೀಯ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ ರಾಜ್ಯ ಸರ್ಕಾರದ ಕ್ರಮ ಖಂಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಸಮಯದಲ್ಲಿ ಯಾರು ಕಲ್ಲೆಸೆದರು ಎಂದು ಪೋಲಿಸ್ ಇಲಾಖೆ ತನಿಖೆ ಮಾಡಿ ಹಿಂದೂ ಧಾರ್ಮಿಕ ಭಾವನೆಗೆ ದಕ್ಕೆಯಾಗದಂತೆ ತಡೆಯುವದನ್ನು ಬಿಟ್ಟು ಕಲ್ಲೆಸೆದವರ ರಕ್ಷಣೆಗೆ ಸರ್ಕಾರ ನಿಂತಿರುವದನ್ನು ನೋಡಿದರೆ ಇದೆನು ಪೋಲಿಸ್ ರಾಜ್ಯವೆ? ಅಥವಾ ಪ್ರಜಾಪ್ರಭುತ್ವ ರಾಜ್ಯವೆ ಸಂಶಯವಾಗಿದೆ.
ಕಲ್ಲು ಹೊಡೆಯುವವರಿಗೆ ರಕ್ಷಣೆ ಕೊಡಲಾಗುತ್ತದೆ. ಕಲ್ಲು ಹೊಡೆದುದನ್ನು ಪ್ರಶ್ನೆ ಮಾಡಿದ ಬಾಲಕಿಯ ಮೇಲೆ ಪೋಲಿಸ್ ಪೇದೆಲಾಠಿ ಚಾರ್ಜ್ ಮಾಡಿದ್ದು ಅಕ್ಷ್ಯಮ್ಯ ಅಪರಾಧವಾಗಿದ್ದು ಕಾನೂನು ಸುವ್ಯವಸ್ಥೆ ಏನಾಗಿದೆ ಎಂಬುವದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಪೋಲಿಸರ ಮೇಲೆಯೂ ಕಲ್ಲು ಬಿದ್ದಿವೆ ಅವರು ಪೇಟ್ಟು ತಿಂದಿದ್ದಾರೆ ಆದರು ಇದರ ತನಿಖೆ ಮಾಡದೆ ಪ್ರತಿಭಟನೆ ನಿರತ ಅಮಾಯಕರ ಮೇಲೆ ಲಾಠಿ ಚಾರ್ಜ ಯಾವ ರೀತಿಯ ಮಾನವೀಯತೆ ಇರುವ ಸರಕಾರ ಇದು. ಧಾರ್ಮಿಕ ಆಚರಣೆಯಲ್ಲಿ ಬಂದೋಬಸ್ತ್ ಏರ್ಪಡಿಸಲು ಯೋಗ್ಯತೆ ಇಲ್ಲವೆಂದಾದರೆ ಗೃಹ ಸಚಿವರು ಯಾವ ಮುಖ ಇಟ್ಟುಕೊಂಡು ಅಧಿಕಾರದಲ್ಲಿ ಮುಂದುವರೆಯುತ್ತಾರೆ.
ಈ ಸರಕಾರ ಪೊಲೀಸರ ಕೈಯನ್ನು ಕಟ್ಟಿ ಹಾಕುತ್ತಿದೆ. ಪೊಲೀಸರಿಗೆ ಸರಿಯಾಗಿ ಬಂದೋಬಸ್ತ್ ಕರ್ತವ್ಯ ನಿರ್ವಹಿಸಲು ಈ ಸರಕಾರ ಬಿಡುತ್ತಿಲ್ಲ. ಸ್ವತಂತ್ರವಾಗಿ ತನಿಖೆ ಮಾಡಲು ಈ ಸರಕಾರ ಬಿಡುತ್ತಿದೆಯೇ ಎಂಬ ಸಂಶಯವಿದೆ.
ಪೊಲೀಸ್ ಮ್ಯಾನುವಲ್ ಮೂಲಕ ಬಂದೋಬಸ್ತ್ ಕರ್ತವ್ಯದ ಯೋಜನೆ ಆಗುತ್ತಿಲ್ಲ. ತುಷ್ಟೀಕರಣದ ಪರಾಕಾಷ್ಠೆಗೆ ಹೋಗಿ, ಹಿಂದೂ ಧಾರ್ಮಿಕ ಸಂಸ್ಥೆಗಳು, ಹಿಂದೂ ಧಾರ್ಮಿಕ ಆಚರಣೆಗಳನ್ನು, ಹಿಂದೂ ಭಾವನೆಗಳನ್ನು ಕೆದಕುವ ದುಷ್ಟ ಶಕ್ತಿಗಳಿಗೆ ಪ್ರಚೋದನೆ ನೀಡುತ್ತಿದೆ. ಅದರ ಪರಿಣಾಮವಾಗಿ ಮದ್ದೂರಿನಲ್ಲಿ ಕಲ್ಲು ತೂರಾಟ ನಡೆದಿದೆ. ಇದು ಹಿಂದೂವಿರೋಧಿ ಸರಕಾರ. ಕಾನೂನು ಸುವ್ಯವಸ್ಥೆ ಕುಸಿದು ಹೋಗಿರುವ ಸರಕಾರ, ರಾಜಾರೋಷವಾಗಿ ಕಾನೂನಿನ ದುರ್ಬಳಕೆ ನಡೆಸುವ ಸರಕಾರ ಎಂದು ದೂರಿದರು.
ಪೊಲೀಸರು ತಮ್ಮ ಕರ್ತವ್ಯ ಮಾಡುವುದನ್ನು ಮರೆತು ರಾಜಕೀಯ ಅಣತಿಯಂತೆ ಕುಣಿಯುವ ಅನಿವಾರ್ಯತೆ ರಾಕ್ಯದಲ್ಲಿ ಸೃಷ್ಟಿಯಾಂದತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ