Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೌಟುಂಬಿಕ ಕಥೆಯ ಸರಳ ಸುಬ್ಬರಾವ್  ಹಾಡು ಬಿಡುಗಡೆ: ತೆರೆಗೆ ಸಿದ್ದ 



     1971 ರ ಕಾಲಘಟ್ಟದ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ 'ಸರಳ ಸುಬ್ಬರಾವ್'. ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್  ನಂಜುಂಡಯ್ಯ ನಿರ್ಮಿಸಿದ್ದಾರೆ.  ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಟಿಸಿರುವ 'ಸರಳ ಸುಬ್ಬರಾವ್' ಚಿತ್ರದ ಸುಮಧುರ ಹಾಡೊಂದು ಬಿಡುಗಡೆಯಾಗಿದೆ.

      ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡನ್ನು ಕವಿರಾಜ್ ಅವರು ಬರೆದಿದ್ದು, ಸಂಜಿತ್ ಹೆಗ್ಡೆ ಹಾಡಿದ್ದಾರೆ. ಸರಿಗಮ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಲಭ್ಯವಿದೆ. ಪ್ರೇಮಗೀತೆಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ ಚಿತ್ರತಂಡ, ನಂತರ ಚಿತ್ರದ ಕುರಿತು ಮಾತನಾಡಿದರು.

     "ಸರಳ ಸುಬ್ಬರಾವ್' ನಮ್ಮ ಚಿತ್ರದ ನಾಯಕ, ನಾಯಕಿಯ ಹೆಸರು. ಇದು 1971 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ರೆಟ್ರೊ ಶೈಲಿಯ ಕಥೆ ಕೂಡ. ಈ ಕಥೆಯನ್ನು ನಾನು ನಿರ್ಮಾಪಕ ಲೋಹಿತ್ ಅವರ ಮುಂದೆ ಹೇಳಿದಾಗ ಅವರು ಕೇಳಿ ತುಂಬಾ ಮೆಚ್ಚಿಕೊಂಡರು. ಜೊತೆಗೆ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡೋಣ ಎಂದರು. ಹೇಳಿದ ಹಾಗೆ ಚಿತ್ರವನ್ನು ಅದ್ದೂರಿಯಾಗಿ ಮಾಡಿ‌ ಮುಗಿಸಿದ್ದಾರೆ. ಈ ಕಥೆಗೆ ಅಜೇಯ್ ರಾವ್ ಅವರೆ ಸೂಕ್ತ ನಾಯಕ ಎನಿಸಿತು. ಅವರು ಕೂಡ ಒಪ್ಪಿಕೊಂಡರು. ನಮ್ಮ ಚಿತ್ರದ ನಾಯಕಿ ಪಂಜಾಬಿನ ಮಿಶಾ ನಾರಂಗ್ ಕನ್ನಡ ಅರ್ಥಮಾಡಿಕೊಂಡು ನಟಿಸಿದ್ದಾರೆ.  ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ" ಎಂದು ನಿರ್ದೇಶಕ ಮಂಜು ಸ್ವರಾಜ್ ತಿಳಿಸಿದರು.

      "ಈ ಚಿತ್ರದಲ್ಲಿ ನಟಿಸಿರುವುದು ನನ್ನ  ವೈಯ್ಯಕ್ತಿಕ ಹಾಗೂ ವೃತ್ತಿಜೀವನದ ಹೆಮ್ಮೆ. ಅಂತಹ ಒಂದು ಸುಂದರ ಸಾಂಸಾರಿಕ ಚಿತ್ರ 'ಸರಳ ಸುಬ್ಬರಾವ್'.  ಈ ಚಿತ್ರ ಭಾರತೀಯ ಚಿತ್ರರಂಗದ ಸುವರ್ಣ ಯುಗಕ್ಕೆ ಟ್ರಿಬ್ಯುಟ್ ಎಂದರು ತಪ್ಪಾಗಲಾರದು. ನಾನು ಚಿಕ್ಕವಯಸ್ಸಿನಲ್ಲಿ ಸೂಪರ್ ಮ್ಯಾನ್ ಮುಂತಾದ ಚಿತ್ರಗಳನ್ನು ಹೆಚ್ಚು ನೋಡುತ್ತಿದ್ದೆ. ನಾನೇ ಸೂಪರ್ ಹೀರೋ ಅಂದುಕೊಳ್ಳುತ್ತಿದೆ. ಈ ಚಿತ್ರದಲ್ಲೂ ನಾನು ಸೂಪರ್ ಹೀರೊ. ಏಕೆಂದರೆ  ಇದು 50 ವರ್ಷಗಳ ಹಿಂದೆ ನಡೆಯುವ ಕಥೆ. ಈ ಚಿತ್ರದಲ್ಲಿ ರೆಟ್ರೊ ಶೈಲಿಯ ಉಡುಗೆಗಳನ್ನು ಹಾಕಿದಾಗ ನಾನು ನನ್ನ ಪಾತ್ರದಲ್ಲಿ ಡಾ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್, ಅನಂತನಾಗ್ ಅವರನ್ನು ನೋಡಿದ್ದೇನೆ. ಎಷ್ಟು ಜನಕ್ಕೆ ಸಿಗುತ್ತದೆ ಇಂತಹ ಅವಕಾಶ.  ಇಂತಹ ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಧನ್ಯವಾದ" ಎಂದರು ನಾಯಕ ಅಜೇಯ್ ರಾವ್.

     "ಮೊದಲ ಬಾರಿಗೆ ಇಂತಹ ಉತ್ತಮ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ" ಎಂದರು ನಾಯಕಿ ಮಿಶಾ ನಾರಂಗ್‌.

     "ಮಂಜು ಸ್ವರಾಜ್ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಅಜೇಯ್ ರಾವ್ ಅವರ ಸಹಕಾರ ಅಪಾರ. ಇಡೀ ಚಿತ್ರತಂಡ ನನಗೆ ಪ್ರೋತ್ಸಾಹ ನೀಡಿದ್ದಾರೆ. ಅದರಿಂದ ಒಂದೊಳ್ಳೆ ಕೌಟುಂಬಿಕ ಚಿತ್ರ ನಿಮ್ಮ ಮುಂದೆ ಬರುತ್ತಿದೆ" ಎಂದು ನಿರ್ಮಾಪಕ ಲೋಹಿತ್ ನಂಜುಂಡಯ್ಯ ತಿಳಿಸಿದರು.

     'ಚಿತ್ರದಲ್ಲಿ  ಬಿಡುಗಡೆಯಾಗಿರುವ ಈ ಗೀತೆ ಸೇರಿದಂತೆ ಐದು ಹಾಡುಗಳಿದೆ‌. ಒಂದಕ್ಕಿಂತ ಒಂದು ಚೆನ್ನಾಗಿದೆ" ಎಂದರು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್.

     ಚಿತ್ರದಲ್ಲಿ ನಟಿಸಿರುವ ಹಿರಿಯ ನಟ ರಂಗಾಯಣ ರಘು, ನಟ ಶ್ರೀ, ಚಿತ್ಕಲಾ ಬಿರಾದಾರ್ ವಿಜಯ್ ಚಂಡೂರ್, ರಘು ರಾಮನಕೊಪ್ಪ, ಛಾಯಾಗ್ರಾಹಕ ಪ್ರದೀಪ್ ಪದ್ಮಕುಮಾರ್, ಸಂಕಲನಕಾರ ಬಸವರಾಜ ಅರಸ್, ಕಲಾ ನಿರ್ದೇಶಕ ಅಮರ್,‌ ನೃತ್ಯ ನಿರ್ದೇಶಕರಾದ ಮದನ್ ಹರಿಣಿ, ವಸ್ತ್ರವಿನ್ಯಾಸ ಮಾಡಿರುವ ರಂಜಿತ್ ಮುಂತಾದವರು 'ಸರಳ ಸುಬ್ಬರಾವ್' ಚಿತ್ರದ ಕುರಿತು ಮಾತನಾಡಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*