ಬಾಗಲಕೋಟೆ, ಜುಲೈ ೧೬ : ಜಿಲ್ಲಾ ಸ್ವೀಪ್ ಸಮಿತಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಾಂಬೆ ಕಾಲೋನಿಯಲ್ಲಿ ಮ್ಯಾರಾಥಾನ ಮೂಲಕ ಎಸ್.ಐ.ಆರ್ ಜಾಗೃತಿ ಕಾರ್ಯಕ್ರಮ ಜರುಗಿತು.
ಎಸ್.ಐ.ಆರ್ ಜಾಗೃತಿಗಾಗಿ ಇತ್ತೀಚೆಗೆ ಹಮ್ಮಿಕೊಂಡ ಮ್ಯಾರಾಥಾನಗೆ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಚಾಲನೆ ನೀಡಿ ಮಾತನಾಡಿದ ಅವರು ಮತದಾರರ ಪಟ್ಟಿಯಲ್ಲಿರುವ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು,. ಆದ್ದರಿಂದ ತಪ್ಪದೇ SIಖ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಎಂದು ತಿಳಿಸಿದರು.
ಎಸ್.ಐ.ಆರ್ ಕುರಿತುಮ್ಮಿಕೊಂಡ ಮಾರಾಥಾನ ಓಟ ನವನಗರದ ಅಲ್ಪಸಂಖ್ಯಾತರ ವಸತಿ ಶಾಲೆಯ ವಾಂಬೆ ಕಾಲೋನಿದಿಂದ ರಾಜೀವಗಾಂಧಿ ಆಶ್ರಯ ಕಾಲೋನಿ ಸರ್ಕಲ್ ವರೆಗೆ ಜಾಗೃತಿ ಕಾರ್ಯಕ್ರಮ ಮೂಲಕ ಮನೆ ಮನೆಗೆ ಭೇಟಿ ನೀಡಿ ಕರಪತ್ರದ ಮೂಲಕ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಅಗತ್ಯ ದಾಖಲಾತಿಗಳ ಮಾಹಿತಿಯನ್ನು ನೀಡಲಾಯಿತು.
ಬಿ.ಎಲ್.ಓ.ಗಳು ಮನೆ ಬಾಗಿಲಿಗೆ ಬಂದಾಗ ಮತದಾರರು ಸರಿಯಾದ ಮಾಹಿತಿ ನೀಡಿ ಸ್ಪಂದನೆ ನೀಡಬೇಕು. ಪ್ರತಿಯೊಬ್ಬರಿಗೆ ಮತದಾನ ಮಾಡುವ ಹಕ್ಕು ಇದ್ದು ಅದೇ ರೀತಿ ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು ಸರಿಯಾದ ದಾಖಲಾತಿ ನೀಡುವ ಹಕ್ಕು ಕೂಡಾ ಮತದಾರರಾಗಿರುವುದು ಮರೆಯುವಂತಿಲ್ಲ, ಬಾಡಿಗೆ ಮನೆಯಲ್ಲಿರುವರು ಮಾಹಿತಿ ನೀಡಿ ಪರಿಷ್ಕರಣೆಯಲ್ಲಿ ಭಾಗವಹಿಸಬೇಕು.
ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು, ಅಲ್ಪಸಂಖ್ಯಾತರ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತ ಬಾಗಲಕೋಟೆ, ತಾಲೂಕ ಮಟ್ಟದ ಅಧಿಕಾರಿಗಳು ಹಾಗೂ ಸದರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.