Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಐಆರ್ ವೇಳಾಪಟ್ಟಿ ಮರುನಿಗದಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ

ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ




ಕೊಪ್ಪಳ ಜುಲೈ 18 : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ವಿಶೇಷ ಸಮಗ್ರ (ಎಸ್‌ಐಆರ್) ಪರಿಷ್ಕರಣೆಯ ವೇಳಾಪಟ್ಟಿಯನ್ನು ಮರುನಿಗದಿಪಡಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ. ಇಟ್ನಾಳ ಅವರು ಹೇಳಿದರು.
 ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಇದುವರೆಗಿನ ಪ್ರಗತಿಯ ಮತ್ತು ವೇಳಾಪಟ್ಟಿ ವಿಸ್ತರಣೆ ಕುರಿತು ಮಾಹಿತಿ ನೀಡಲು ಜಿಲ್ಲಾಡಳಿತ ಭವನದ ಕೆಸ್ವಾನ್-2ರ ಸಭಾಂಗಣದಲ್ಲಿ ಗುರುವಾರ (ಜು. 16ರಂದು) ಕರೆದ ಜಿಲ್ಲೆಯ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
 ಬಿ.ಎಲ್.ಓ.ಗಳಿಂದ ಮನೆ ಮನೆ ಭೇಟಿಯನ್ನು ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ. ಮತಗಟ್ಟೆಗಳ ರ‍್ಯಾಷನಲೈಜೆಷನ್ ಆಗಸ್ಟ್ 8 ರೊಳಗೆ ನಡೆಯಲಿದ್ದು, ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುತ್ತದೆ. ಆಗಸ್ಟ್ 17 ರಿಂದ ಸೆಪ್ಟೆಂಬರ್ 16ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಆಗಸ್ಟ್ 17 ರಿಂದ ಅಕ್ಟೋಬರ್ 15 ರವರೆಗೆ ನೊಟೀಸ್ ಅವಧಿ, ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. 2026ರ ಅಕ್ಟೋಬರ್ 19 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
 ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ ಹಾಗೂ ಕೊಪ್ಪಳ ಸೇರಿದಂತೆ ಐದು ವಿಧಾನಸಭಾ ಕ್ಷೇತ್ರಗಳು ಒಳಗೊಂಡಂತೆ ಕೊಪ್ಪಳ ಜಿಲ್ಲೆಯಲ್ಲಿರು ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರಿಗೆ ಮನೆಮನೆ ಭೇಟಿ ವೇಳೆ ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ. ಜುಲೈ 16ರ ಸಂಜೆವರೆಗೆ 7,69,695 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದ್ದು, ಜಿಲ್ಲೆಯಲ್ಲಿಯಲ್ಲಿ ಶೇ. 64.07 ರಷ್ಟು ಪ್ರಗತಿಯಾಗಿದೆ. ಜಿಲ್ಲೆಯಲ್ಲಿನ ವಿಧಾನಸಭಾ ಕ್ಷೇತ್ರಗಳವಾರು ಗಣತಿ ನಮೂನೆಗಳನ್ನು ಡಿಜಿಟಲೀಕರಣ ಪ್ರಗತಿಯು ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಶೇ. 70.49 ರಷ್ಟು ಆಗಿದೆ. ಯಲಬುರ್ಗಾ ಕ್ಷೇತ್ರದಲ್ಲಿ ಶೇ. 66.03 ರಷ್ಟು, ಗಂಗಾವತಿ ಕ್ಷೇತ್ರದಲ್ಲಿ ಶೇ. 63.06 ರಷ್ಟು, ಕುಷ್ಟಗಿ ಕ್ಷೇತ್ರದಲ್ಲಿ ಶೇ. 61.58 ರಷ್ಟು ಮತ್ತು ಕೊಪ್ಪಳ ಕ್ಷೇತ್ರದಲ್ಲಿ ಶೇ. 59.88 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲೀಕರಣವಾಗಿದೆ ಎಂದು ವಿವರಿಸಿದರು.
 ಪ್ರೊಜಿನಿ ಮ್ಯಾಪಿಂಗ್ ಒಳಗೊಂಡಂತೆ ಮತ್ತು ಆನ್‌ಲೈನ್ ಮೂಲಕ ಬಂದಿರುವ 475 ಅರ್ಜಿಗಳ ಪರಿಶೀಲನೆ ಬಾಕಿಯಿದೆ. ಇದುವರೆಗೂ 1426 ಗೈರು, 13,068 ಖಾಯಂ ಸ್ಥಳಾಂತರ, 9333 ಮೃತರು, 5131 ಡುಪ್ಲಿಕೇಟ್, 42 ಇತರೆ ಎಂಬುದಾಗಿ ಕಂಡು ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಬಿಎಲ್‌ಓ-ಬಿಎಲ್‌ಎ ಸಭೆ ಮಾಡಿದ್ದು, ವಿಧಾನಸಭಾ ಕ್ಷೇತ್ರವಾರು ಸಭೆ ನಡೆಸಲು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
 ಸಭೆಯಲ್ಲಿ ಜಿಲ್ಲಾ ಚುನಾವಣಾ ಶಾಖೆಯ ತಹಶೀಲ್ದಾರ ರವಿ ವಸ್ತ್ರದ್, ಕೊಪ್ಪಳ ಜಿಲ್ಲೆಯ ಮಾನ್ಯತೆ ಪಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಸುನೀಲ್ ಹೆಸರೂರ, ಕೃಷ್ಣ ಇಟ್ಟಂಗಿ, ಸೋಮನಗೌಡ, ಮಹೇಬುಬಪಾಶಾ ಸೇರಿದಂತೆ ಮತ್ತಿತರರು ಚುನಾವಣಾ ಶಾಖೆಯ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ