LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅನುರಾಗ್ ಹೊಸ ನಿರ್ಮಾಪಕರಿಂದ ಮಹೇಶ್ ಬಾಬು ನಿರ್ದೇಶನದಲ್ಲಿ  ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಚಿತ್ರ

     ಎ ಕ್ಲಾಸ್ ರಿಯಲ್ ಎಟರ್ಸ್ಸ್  ಸಂಸ್ಥಾಪರಾಗಿರುವ ಅನುರಾಗ್ ಆರ್  ಮೂಲತಃ ಬೆಂಗಳೂರಿನವರಾಗಿದ್ದಾರೆ. ಕಲೆ, ಸಿನಿಮಾ ಮೇಲಿನ ಒಲವು ಅವರನ್ನು ಚಿತ್ರರಂಗಕ್ಕೆ ಕರೆದುಕೊಂಡು ಬಂದಿದೆ. ಈ ಮೂಲಕ ಚಿತ್ರರಂಗಕ್ಕೆ ಓರ್ವ ಸದಭಿರುಚಿ ನಿರ್ಮಾಪಕರ ಆಗಮನವಾಗಿದೆ. ಮಹೇಶ್ ಬಾಬುವರಂತಹ ದಿಗ್ಗಜ ನಿರ್ದೇಶಕರ ಜೊತೆ ಅವರೀಗ ಕೈ ಜೋಡಿಸಿದ್ದಾರೆ.


     ಎ ಕ್ಲಾಸ್ ಸಿನಿ ಫಿಲ್ಮಂಸ್ ಹಾಗೂ ಎಂಎಂಎಂ ಪಿಕ್ಚರ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.


ದಕ್ಷಿಣ ಭಾರತ ಪ್ರತಿಷ್ಠಿತ ಸ್ಟ್ಯಾಂಡಿ ಮೇಕರ್ಸ್ಸ್ ಎಂಎಂಎಂ ಗ್ರೂಪ್ಸ್ ನ ಒಡೆಯ ಮಿಥುನ್ ಕೆ ಎಸ್ ಕೂಡ ಅನುರಾಗ್ ಗೆ ಸಾಥ್ ಕೊಡುತ್ತಿದ್ದಾರೆ. ಸಾವಿರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡಿ ಅನುಭವವಿರುವ ಮಿಥುನ್ ಈಗ ಚಿತ್ರ‌ ನಿರ್ಮಾಣಕ್ಕಿಳಿದಿದ್ದಾರೆ.


      ಕಿರುಚಿತ್ರ, ಧಾರಾವಾಹಿ, ರಿಯಾಲಿಟಿ ಶೋನಲ್ಲಿ ಮಿಂಚಿದ್ದ ಸ್ಮೈಲ್ ಗುರು ರಕ್ಷಿತ್ ಈಗ ಸಿನಿಮಾರಂಗಕ್ಕೆ ಕಾಲಿಡುತ್ತಿದ್ದಾರೆ. ಇವರ ಚೊಚ್ಚಲ ಸಿನಿಮಾಗೆ ಆಕಾಶ್, ಅರಸು ಅಂತಹ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಮಹೇಶ್ ಬಾಬು ಆಕ್ಷನ್ ಕಟ್ ಹೇಳುತ್ತಿದ್ದಾರೆ.


ಈ ಚಿತ್ರದ ಮೂಲಕ ವೀರ ಮದಕರಿಯಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದ ಜೆರುಶಾ ನಾಯಕಿಯಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಚೊಚ್ಚಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ರಕ್ಷಿತ್ ಅದಕ್ಕೆ ಬೇಕಾಗಿರೋ ಸಂಪೂರ್ಣ ತಯಾರಿಯನ್ನು ಮಾಡಿಕೊಂಡಿದ್ದಾರೆ.  ಶೀಘ್ರದಲ್ಲೇ ಟೈಟಲ್ ರಿವೀಲ್ ಮಾಡಲಿರುವ ಚಿತ್ರತಂಡ, ಜೂನ್ 15ರಿಂದ ಶೂಟಿಂಗ್ ಶುರು ಮಾಡಲು ಪ್ಲಾನ್ ಹಾಕಿಕೊಂಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್