Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭತ್ತದ ಬೆಳೆಯಲ್ಲಿ ದುಂಡಾಣು ಮಚ್ಚೆ ರೋಗ ನಿರ್ವಹಣೆಗೆ ಮುಂಜಾಗ್ರತಾ ಕ್ರಮವಹಿಸಲು ಕೃಷಿ ಉಪನಿರ್ದೇಶಕ ಎಸ್.ಎನ್.ಮಂಜುನಾಥ ಸಲಹೆ


ಬಳ್ಳಾರಿ,ಅ.10: ಜಿಲ್ಲೆಯ ವಿವಿಧೆಡೆ ಭತ್ತದ ಬೆಳೆಯಲ್ಲಿ ದುಂಡಾಣು ಮಚ್ಚೆ ರೋಗ ಕಂಡುಬAದಿದ್ದು, ನಿರ್ವಹಣೆಗೆ ರೈತರು ಸೂಕ್ತ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಕೃಷಿ ಇಲಾಖೆಯ ಉಪನಿರ್ದೇಶಕ ಎಸ್.ಎನ್.ಮಂಜುನಾಥ ಅವರು ಹೇಳಿದರು.

ಇತ್ತೀಚೆಗೆ ಬಳ್ಳಾರಿ ತಾಲೂಕಿನ ಕೊಳಗಲ್ಲು ಗ್ರಾಮದ ಭತ್ತ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮಾತನಾಡಿದ ಅವರು, ಈ ಭಾಗದಲ್ಲಿ ಯಾವುದೇ ರೀತಿಯ ದುಂಡಾಣು ಮಚ್ಚೆ ರೋಗದ ಲಕ್ಷಣಗಳು ಸದ್ಯದ ಮಟ್ಟಿಗೆ ಕಂಡುಬAದಿಲ್ಲವಾದರೂ, ರೈತರು ಈ ರೋಗದ ನಿಯಂತ್ರಣದ ಬಗ್ಗೆ ಅರಿವು ಹೊಂದಬೇಕು ಎಂದು ತಿಳಿಸಿದರು.

ಜಿಲ್ಲೆಯ ಹಲವೆಡೆ ಮುಂಗಾರು ಹಂಗಾಮಿನಲ್ಲಿ ರೈತರು ಭತ್ತವನ್ನು ಹೆಚ್ಚಾಗಿ ಬೆಳೆದಿದ್ದು, ಅಧಿಕ ಇಳುವರಿಯ ಹಂಬಲದಲ್ಲಿದ್ದ ರೈತರಿಗೆ ದುಂಡಾಣು ಮಚ್ಚೆ ರೋಗದ ತೀವ್ರತೆಯು ತಲೆ ನೋವಾಗಿ ಪರಿಣಮಿಸಿದೆ ಎಂದರು.

ದುAಡಾಣು ಮಚ್ಛೆ ರೋಗದ ಚಿಹ್ನೆ ಮುಖ್ಯವಾಗಿ ಪ್ರಾರಂಭಿಕ ಹಂತದಲ್ಲಿ ಎಲೆಗಳ ಮೇಲೆ ತೇವಯುಕ್ತ ಕಂದು ಬಣ್ಣದ ಗೆರೆಗಳು ಕಂಡುಬರುತ್ತವೆ. ಕಾಲಕ್ರಮೇಣ ಎಲೆಗಳ ಗೆರೆಗಳು ಹಳದಿಯಾಗಿ ರೋಗ ತೀವ್ರತೆಯಾದಾಗ ಸಂಪೂರ್ಣವಾಗಿ ಸುಟ್ಟಂತೆ ಕಾಣುತ್ತದೆ. ಈ ರೋಗವು ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆ ಬಿದ್ದಲ್ಲಿ, ರೋಗ ಪಸರಿಸಿ ಬೇರೆ ಹೊಲಗಳಿಗೆ ವ್ಯಾಪಿಸಲಿದೆ ಎಂದು ತಿಳಿಸಿದರು.

ರೈತರು ಮುಂಜಾಗ್ರತೆಯಾಗಿ ಈ ರೋಗ ಹತೋಟಿಯಲ್ಲಿರಿಸಲು ಪ್ರಾರಂಭಿಕ ಹಂತದಲ್ಲಿ ಬ್ಯಾಕ್ಟೀರಿಯ ನಾಶಕ ಲೀ. ಗೆ 0.5 ಗ್ರಾಂ ಜೊತೆಗೆ ತಾಮ್ರದ ಆಕ್ಸಿಕ್ಲೂರೈಡ್ 2.5 ಗ್ರಾಂ/ಲೀ ಮಿಶ್ರಣ ಮಾಡಿ ಜೊತೆಗೆ ಅಂಟು ದ್ರಾಣವನ್ನು ಸೇರಿಸಿ ಸಿಂಪರಣೆ ಮಾಡಬೇಕು ಎಂದು ಸಲಹೆ ನೀಡಿದರು.

ರೋಗ ಹೆಚ್ಚಾದ ಸಂದರ್ಭದಲ್ಲಿ ಸ್ಟೆçÃಪ್ಟೊಸೈಕ್ಲಿನ್ ಸಲ್ಫೇಟ್ 0.5 ಗ್ರಾಂ/ಲೀ ಮತ್ತು ತಾಮ್ರದ ಆಕ್ಸಿಕ್ಯುಲೋರೈಡ್ 2.5 ಗ್ರಾಂ/ಲೀ ದ್ರಾವಣವನ್ನು ತೆನೆ ಒಡೆಯದೆ ಇರುವ ಬೆಳಗೆ ಸಿಂಪಡಣೆ ಮಾಡಬೇಕು ಎಂದು ತಿಳಿಸಿದರು.

ಈಗಾಗಲೇ ತೆನೆ ಬಿಚ್ಚುವ ಅಥವಾ ಹಾಲು ತುಂಬುವ ಹಂತದಲ್ಲಿರುವ ಬೆಳೆಗೆ ಸ್ಟೆçÃಪ್ಟೊಸೈಕ್ಲಿನ್ ಸಲ್ಫೇಟ್ 0.5 ಗ್ರಾಂ/ಲೀ ಮತ್ತು ಕಾರ್ಬೆಂಡಜಿಮ್ 1 ಗ್ರಾಂ/ಲೀ ದ್ರಾವಣವನ್ನು ಬೆರೆಸಿ ಒಂದು ಎಕರೆಗೆ 180 ರಿಂದ 200 ಲೀಟರ್ ಸಿಂಪಡಣೆ ದ್ರಾವಣವನ್ನು ಉಪಯೋಗಿಸಿ ಚೆನ್ನಾಗಿ ತೊಯುವಂತೆ ಸಿಂಪಡಣೆ ಮಾಡಬೇಕು ಎಂದು ವಿವರಿಸಿದರು.

ಸಿಂಪಡಣೆಯಾದ ಎರಡನೇ ದಿನದಲ್ಲಿ ಲಘು ಪೋಷಕಾಂಶ ಮಿಶ್ರಣವನ್ನು ಪ್ರತಿ ಲೀಟರ್ ನೀರಿಗೆ 3 ಗ್ರಾಂ/ಲೀಟರ್ ದ್ರಾವಣವನ್ನು ಬೆರೆಸಿ ಸಿಂಪಡಣೆ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದಲ್ಲದೆ ಈಗಾಗಲೇ ಕುಂಠಿತವಾಗಿರುವ ಬೆಳೆಯನ್ನು ಪುನಶ್ಚೇತನಗೊಳಿಸಲು ಸಹಾಯವಾಗುತ್ತದೆ ಎಂದು ರೈತರಿಗೆ ಮಾಹಿತಿ ನೀಡಿದರು.
ಈ ವೇಳೆ ಬಳ್ಳಾರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ, ಬಳ್ಳಾರಿ ಹೋಬಳಿಯ ಕೃಷಿ ಅಧಿಕಾರಿ ಬಸವರಾಜ ಸಿಂಧಿಗೇರಿ ಸೇರಿದಂತೆ ರೈತರು ಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*