Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಸತೀಶಕುಮಾರ ಹೊಸಮನಿಗೆ ಬಸವ ಪ್ರಶಸ್ತಿ

ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಸಿಎಂ ಸದಾನಂದಗೌಡ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ

ಬೆಂಗಳೂರು:
ಬಸವ ಜಯಂತಿ ಅಂಗವಾಗಿ ನಗರದ ರಮಣ ಮಹರ್ಷಿ ಸಮಾರಂಭ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಅವರಿಗೆ ಬಸವ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಡಾ.ಸತೀಶಕುಮಾರ ಹೊಸಮನಿ ಸಲ್ಲಿಸಿರುವ ವಿಶಿಷ್ಟ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಕೈಗೊಂಡಿರುವ ನವೀನ ಯೋಜನೆಗಳು ಹಾಗೂ ಸಮಗ್ರ ಶಿಕ್ಷಣ ಬಲವರ್ಧನೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದ್ದು, ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಶಾಸಕ ವೈ.ಎ.ನಾರಾಯಣಸ್ವಾಮಿ, ಮಾಜಿ ಸಿಎಂ ಸದಾನಂದಗೌಡ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತುಮಕೂರಿನ ಸಿದ್ದರಬೆಟ್ಟ ಮಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

Advertisement

ಕಾರ್ಯಕ್ರಮದಲ್ಲಿ ಬಸವಣ್ಣನವರ ತತ್ವಗಳನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತವಾಯಿತು. ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಅಕ್ಕನ ಬಳಗದ ತಂಡದಿಂದ ವಚನ ಗಾಯನ ಕಾರ್ಯಕ್ರಮ ಗಮನ ಸೆಳೆಯಿತು. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಬಸವ ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಸಮಾರಂಭಕ್ಕೆ ವಿಶೇಷ ಮೆರುಗು ತಂದರು.

 

ಬಸವಣ್ಣನವರ ಸಮಾನತೆ, ಕಾಯಕ ಮತ್ತು ದಾಸೋಹದ ಆದರ್ಶಗಳು ಇಂದಿನ ಸಮಾಜಕ್ಕೆ ದಿಕ್ಕು ತೋರುವ ಶಕ್ತಿಯಾಗಿದೆ. ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆ ಸಾಧ್ಯ ಎಂಬುವುದನ್ನು ಡಾ.ಹೊಸಮನಿ ಅವರ ಕಾರ್ಯಗಳು ಸಾಬೀತುಪಡಿಸುತ್ತವೆ.
-ಭೈರತಿ ಸುರೇಶ್, ನಗರಾಭಿವೃದ್ಧಿ ಸಚಿವರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧಾಮಣೆಯಲ್ಲಿ   ಕೆರೆ ಹೂಳೆತ್ತುವ  ಕಾಮಗಾರಿಗೆ ಚಾಲನೆಸ್ವಚ್ಛತೆ, ಪರಿಸರ, ಶಿಕ್ಷಣ, ರಕ್ಷಣೆ ಕುರಿತು ನಾಟಕ ಪ್ರದರ್ಶನ.ತಾಲೂಕು ಮಟ್ಟದ ಭೀಮೋತ್ಸವದಲ್ಲಿ ಮಾಜಿ ಸಂಸದ ರಮೇಶ ಕತ್ತಿ ಅಭಿಪ್ರಾಯಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೂನ್ ೧ ರಿಂದ ಶಾಲಾ ಪ್ರಾರಂಭೋತ್ಸವ, ದಾಖಲಾತಿ ಆಂದೋಲನಆಂಧ್ರದ ಹೊರನಾಡ ಕನ್ನಡ ಮಕ್ಕಳಿಗೆ ಶಿಕ್ಷಣ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ಮನವಿಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾಂತ್ರಿಕ ತೊಡಕಗಳು ಅಡ್ಡಿಯಾಗದಿರಲಿ: ರೆಡ್ಡಿ ಶ್ರೀನಿವಾಸಎಲ್ಲ ಮುಗಿದ ಮೇಲೆ ಎಚ್ಚೆತ್ತುಕೊಂಡರೆ ಪ್ರಯೋಜನವಾಗದು: ಪತ್ರಕರ್ತ ಗೌರೀಶ ಮಳೆಗಾಲದಲ್ಲಿ ಪ್ರಾಣಹಾನಿ ತಡೆಗೆ ಮುನ್ನಚ್ಚರಿಕೆ ವಹಿಸಲು ಶಾಸಕರ ಸೂಚನೆಎಚ್ ಕೆ ಪಾಟೀಲ ರ ಬೇಟಿ