ಬಳ್ಳಾರಿ. 01. ಶ್ರೀ ಹುಲಿಕುಂಟೆರಾಯ ತೊಗಲುಗೊಂಬೆ ಕಲಾತಂಡವು ಜನಪದ ಕಲೆಗಳಲ್ಲೊಂದಾದ ತೊಗಲಗೊಂಬೆ ಕಲೆಯ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದೆ. ಜಾನಪದ ಕಲೆ ಉಳಿಯಬೇಕಾದರೆ ಈ ತರಹದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಬೇಕೆಂದು ಅಭಿಪ್ರಾಯಪಟ್ಟರು. ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾವುದೇ ಕಾರ್ಯಕ್ರಮಗಳು ನಮ್ಮ ಗುಗ್ಗರಟ್ಟಿಯಲ್ಲಿ ನಡೆಯಲು ನಾವು ಯಾವತ್ತಿಗೂ ಕೂಡ ಸಹಕಾರ ನೀಡುತ್ತೇವೆ ಎಂದು ಗುಗ್ಗರಟ್ಟಿಯ ಹಿರಿಯ ಮುಖಂಡರಾದ ಕೆ. ಹೊನ್ನೂರ ಸ್ವಾಮಿ ರವರು
ಈ ಸಂದರ್ಭದಲ್ಲಿ ತಿಳಿಸಿದರು.
ಅವರು ಶ್ರೀ ಹುಲಿಕುಂಟರಾಯ ತೊಗಲುಗೊಂಬೆ ಕಲಾತಂಡ(ರಿ) ಬಳ್ಳಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ವಿಶೇಷ ಘಟಕ ಯೋಜನೆ ಅಡಿಯಲ್ಲಿ ಗುಗ್ಗರಟ್ಟಿಯ ಈಶ್ವರ ದೇವಸ್ಥಾನ ಆವರಣದಲ್ಲಿ "ಬಸವ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ ನಾಗರಾಜ್ ಮಾತನಾಡಿ, ಕಲೆ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಲಾತಂಡಗಳಿಗೆ ಸಹಾಯವನ್ನು ನೀಡಿ ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ರಾಜಶೇಖರ ಗೌಡ್ರು ಇವತ್ತಿನ ಟಿವಿ ಮತ್ತು ಮೊಬೈಲ್ ಗಳ ಹಾವಳಿಗಳಿಂದ ನಮ್ಮ ಹಳ್ಳಿಯ ಸೊಗಡಿನ ಸಂಸ್ಕೃತಿಯು ಮರೆಯಾಗುತ್ತಿದೆ ಹಾಗಾಗಿ ಈ ತರಹದ ಕಾರ್ಯಕ್ರಮಗಳು ನಡೆಯುವುದರಿಂದ ನಮ್ಮ ನಾಡಿನ ಕಲಾ ಶ್ರೀಮಂತಿಕೆಯನ್ನು ಪೋಷಿಸಿ ಬೆಳೆಸಬಹುದು ಎಂದರು, ವೇದಿಕೆ ಮೇಲೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಜಿಲಾನಿ ಭಾಷಾ ರವರು ಆಲಾಪ ಸಂಗೀತ ಕಲಾ ಟ್ರಸ್ಟ್ ನ ಅಧ್ಯಕ್ಷರಾದ ರಮಣಪ್ಪ ಭಜಂತ್ರಿ ರವರು ಇನ್ನು ಮುಂತಾದವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಶ್ರೀ ಹುಲಿಕುಂಟರಾಯ ತೊಗಲುಗೊಂಬೆ ಕಲಾತಂಡದ ಅಧ್ಯಕ್ಷರಾದ ಕೆ.ಹೊನ್ನೂರ ಸ್ವಾಮಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು, ಗುಗ್ಗರಟ್ಟಿಯ ಸಮಾಜ ಸೇವಕರಾದ ಪುರುಷೋತ್ತಮ್ ರವರು ಸ್ವಾಗತಿಸಿದರು ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮಿದೇವಿ ವಂದಿಸಿದರು. ನಂತರ ಕು. ರಾಜೇಶ್ ಮತ್ತು ತಂಡ ಕಂಪ್ಲಿ ರವರಿಂದ ಜಾನಪದ ನೃತ್ಯ,
ತಾಯಪ್ಪ ಎಮ್ಮಿಗನೂರು ಮತ್ತು ತಂಡದವರಿಂದ ಸುಗಮ ಸಂಗೀತ, ಗಂಗಮ್ಮ ಮತ್ತು ತಂಡ ಲಕ್ಷ್ಮಿ ನಗರ ಕ್ಯಾಂಪ್ ಇವರಿಂದ ಬಸವ ಬೆಳೆ ತೊಗಲುಗೊಂಬೆ ಪ್ರದರ್ಶನ, ಡಿ. ವಿರೂಪಾಕ್ಷಪ್ಪ ಮತ್ತು ತಂಡ ದವರಿಂದ ಬಯಲಾಟ ಪ್ರದರ್ಶನ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾದಿಕಾರಿಗಳು ಹಾಗೂ ಹೆಚ್ಚಿನ ಜನಸಂಖ್ಯೆ ಸೇರಿ ಕಾರ್ಯಕ್ರಮ ಯಶಸ್ವಿಗೊಳಿಸಿದರು ಎಂದು ಶ್ರೀ ಹುಲಿಕುಂಟೆ ರಾಯ ತೊಗಲುಗೊಂಬೆ ಕಲಾ ಟ್ರಸ್ಟ್ ನ ಅಧ್ಯಕ್ಷ ಕೆ ಹೊನ್ನೂರ ಸ್ವಾಮಿ ತಿಳಿಸಿದ್ದಾರೆ.