LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು, ಜನವರಿ 18: ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಶುರುವಾಗಲಿದೆ. ಚುನಾವಣೆ ಮೂಲಕ ರಾಜ್ಯ ಬಿಜೆಪಿ  ಘಟಕ ಅಧ್ಯಕ್ಷರ ಆಯ್ಕೆ ಮಾಡುತ್ತೇವೆ. ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನದವರೆಗೂ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​​ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಸೇರಿ ಚರ್ಚಿಸಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರ್ನಾಟಕ ವಿಕಾಸಕ್ಕೆ ಆದ್ಯತೆ ಕೊಡುತ್ತೇವೆ ಎಂದು ಕರ್ನಾಟಕ ಬಿಜೆಪಿ ಚುನಾವಣಾಧಿಕಾರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.

ಇನ್ನು, ಕರ್ನಾಟಕಕ್ಕೆ ಬರಬೇಕಾದ ಅನುದಾನ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಬರುತ್ತಿಲ್ಲ ಎಂಬ ರಾಜ್ಯ ಕಾಂಗ್ರೆಸ್​ ಮುಖಂಡರ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಬಿಡುಗಡೆ ಮಾಡಿರುವ ಅನುದಾನ ಸದ್ಬಳಕೆಯಾಗಲಿ. ಅವರು ಅನುದಾನ ಕೇಳದಿದ್ದರೂ ನಾವೇ ಘೋಷಣೆ ಮಾಡಿದ್ದೇವೆ. ಬಹಳಷ್ಟು ಅನುದಾನ ಕೊಟ್ಟರೂ ಕರ್ನಾಟಕ ಸರ್ಕಾರ ಬಳಕೆ ಮಾಡಿಲ್ಲ ಎಂದು ವಾಗ್ದಾಳಿ ಮಾಡಿದರು.





ಇನ್ನು, ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ಶತಪ್ರಯತ್ನ ನಡೆಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿ ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಅವರ ಹೆಸರು ಕೂಡ ಕೇಳಿಬರುತ್ತಿದೆ.

ಹೊಸ ವರ್ಷದಂದು ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದ್ದ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾತುಕತೆ ನಡೆಸಿದ್ದರು. ಈ ಭೇಟಿಯ ವೇಳೆ ಕರ್ನಾಟಕದ ಭಿನ್ನಮತಕ್ಕೆ‌ ಬ್ರೇಕ್ ಹಾಕುವಂತೆ ಅಮಿತ್ ಶಾ ಅವರಿಗೆ ವಿಜಯೇಂದ್ರ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್