ದಿನಾಂಕ 21-04- 2026 ರಿಂದ 22-04-2026ರವರೆಗೆ ಸುಮಾರು ಎರಡು ದಿನಗಳ ಕಾಲ ಮನಸೋಲ್ಲಾಸ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು
ಅದ್ಧೂರಿಯಾಗಿ ಆಚರಿಸಲಾಯಿತು.
ನಗರದ ಪ್ರತಿಷ್ಠಿತ ಎಸ್.ಕೆ.ಇ. ಶಿಕ್ಷಣ ಸಂಸ್ಥೆಯ ಆರ್.ಪಿ.ಡಿ.ಮಹಾವಿದ್ಯಾಲಯದಲ್ಲಿ ದಿನಾಂಕ 21-04-2026 ರಂದು ಮುಂಜಾನೆ
10-00ಗಂಟೆಗೆ "ಮಾನಸೋಲ್ಲಾಸ" ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮವನ್ನು ಮಹಾವಿದ್ಯಾಲಯದ
ಪ್ರಾಚಾರ್ಯರಾದ ಡಾ. ಅಭಯ ಪಾಟೀಲ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಸ ಪ್ರಶ್ನೆ, ಗಾಯನ, ನೃತ್ಯ ಮೊದಲಾದ
ಸ್ಪರ್ಧೆಗಳನ್ನು ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಯಿತು. ರಸಪ್ರಶ್ನೆ ಸ್ಪರ್ಧೆಯಲ್ಲಿ "ಮನೆ ಮನೆಗೆ, ಮನ ಮನಕೆ ಬಾಬಾ ಸಾಹೇಬರು" ಎಂಬ
ಅಭಿಯಾನದ ನಿಮಿತ್ಯ ಬಾಬಾ ಸಾಹೇಬರ ಮೇಲೆ ಪ್ರಶ್ನಾವಳಿಯನ್ನು ರಚಿಸಲಾಗಿತ್ತು. ದಿನಾಂಕ 22-04-2026ರಂದು ಸಂಜೆ ಸಮಾರೋಪ
ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಸಂಸ್ಥೆಯ ಉಪಾಧ್ಯಕ್ಷರಾದ ಡಾ.ಎಸ್.ವಾಯ್. ಪ್ರಭು ಅವರು ಮುಖ್ಯ
ಅತಿಥಿಗಳಾಗಿ ಆಗಮಿಸಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಮಹತ್ವವನ್ನು ತಿಳಿಸಿದರು.ಈ ಸಂದರ್ಭದಲ್ಲಿ ಸ್ಪರ್ಧೆಯಲ್ಲಿ
ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಪ್ರೊ.
ಸಾಯಿಶೀಲಾ ಜಡೆ ಹಾಗೂ ಮಹಾವಿದ್ಯಾಲಯದ ಎಲ್ಲ ಶಿಕ್ಷಕ-ಶಕ್ಷಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಾಚಾರ್ಯರು
ಆರ್.ಪಿ.ಡಿ. ಮಹಾವಿದ್ಯಾಲಯ, ಬೆಳಗಾವಿ