Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

32 ಲಕ್ಷ ಮುಸ್ಲಿಮರಿಗೆ 'ಸೌಗಾತ್-ಎ-ಮೋದಿ' ಕಿಟ್ ವಿತರಣೆ

ನವದೆಹಲಿ: ಈದ್ ಹಬ್ಬಕ್ಕೆ ಮುಂಚಿತವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಲ್ಪಸಂಖ್ಯಾತ ಮೋರ್ಚಾ "ಸೌಗಾತ್-ಎ-ಮೋದಿ" ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಅಭಿಯಾನದ ಅಂಗವಾಗಿ ದೇಶಾದ್ಯಂತದ 32 ಲಕ್ಷ ದೀನದಲಿತ ಮುಸ್ಲಿಮರಿಗೆ ವಿಶೇಷ ಕಿಟ್​ಗಳನ್ನು ಬಿಜೆಪಿ ವಿತರಿಸಲಿದೆ.


ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮಾರ್ಗದರ್ಶನದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್​ನಿಂದ ಅಭಿಯಾನ ಪ್ರಾರಂಭವಾಗಿದೆ. ಬಡ ಮುಸ್ಲಿಂ ಕುಟುಂಬಗಳು ಕೂಡ ಯಾವುದೇ ಸಮಸ್ಯೆ ಇಲ್ಲದೆ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶದಿಂದ ಅವರಿಗೆ ಕಿಟ್​ಗಳನ್ನು ನೀಡಲಾಗುತ್ತಿದೆ. ಅಭಿಯಾನದ ಭಾಗವಾಗಿ, 32,000 ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು ದೇಶಾದ್ಯಂತ 32,000 ಮಸೀದಿಗಳ ಸಹಕಾರದೊಂದಿಗೆ ಕೆಲಸ ಮಾಡಲಿದ್ದಾರೆ.


ಅಭಿಯಾನದ ವಿಶಾಲ ದೃಷ್ಟಿಕೋನವನ್ನು ವಿವರಿಸಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ, "ಪವಿತ್ರ ರಂಜಾನ್ ತಿಂಗಳು ಮತ್ತು ಮುಂಬರುವ ಈದ್, ಗುಡ್ ಫ್ರೈಡೆ, ಈಸ್ಟರ್, ನವರೋಜ್ ಮತ್ತು ಭಾರತೀಯ ಹೊಸ ವರ್ಷದಂಥ ಸಂದರ್ಭಗಳಲ್ಲಿ ಅಲ್ಪಸಂಖ್ಯಾತ ಮೋರ್ಚಾ "ಸೌಗಾತ್-ಎ-ಮೋದಿ" ಅಭಿಯಾನದ ಮೂಲಕ ಅಗತ್ಯವಿರುವ ಜನರಿಗೆ ಸಹಾಯ ಒದಗಿಸಲಿದೆ" ಎಂದು ಹೇಳಿದರು. ಇದಲ್ಲದೆ ಜಿಲ್ಲಾ ಮಟ್ಟದಲ್ಲಿ ಈದ್ ಮಿಲನ್ ಆಚರಣೆಯನ್ನು ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ