Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಡಗಿನ ಪ್ರವಾಸೋದ್ಯಮಕ್ಕೆ ದಕ್ಷಿಣ ಭಾರತದ ಅತಿ ದೊಡ್ಡ ಮತ್ತೊಂದು ಸ್ಕೈ ವಾಕ್ ಬ್ರಿಡ್ಜ್ ಸೇರ್ಪಡೆ

ಮಡಿಕೇರಿ,01: ಸುಂದರ ಪ್ರಾಕೃತಿಕ ಸೌಂದರ್ಯದ ಮೂಲಕ ಕೊಡಗು  ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶ್ವದ ಗಮನ ಸೆಳೆದಿದೆ. ಸದ್ಯ ಈ ಪ್ರವಾಸೋದ್ಯಮಕ್ಕೆ ಮತ್ತೊಂದು ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್ ಹೊಸ ಸೇರ್ಪಡೆಯಾಗಿದೆ.

ಖಾಸಗಿಯಾಗಿ ಆರಂಭವಾಗಿರುವ ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್ ಇಡೀ ದಕ್ಷಿಣ ಭಾರತದ ಗಮನ ಸೆಳೆಯುತ್ತಿದೆ. ಅಚ್ಚ ಹಸಿರ ಬೆಟ್ಟಗುಡ್ಡ ನಡುವಿರುವ ಆ ಗ್ಲಾಸ್ ಬ್ರಿಡ್ಜ್ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಈ ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್, ಮಡಿಕೇರಿ ಹೊರವಲಯದ ಅಬ್ಬಿಪಾಲ್ಸ್‌ಗೆ ಹೋಗುವ ರಸ್ತೆಯಲ್ಲಿದೆ. ಮಡಿಕೇರಿ ನಗರದಿಂದ ಸುಮಾರು 5 ಕಿಮೀ ಸಂಚಾರ ಮಾಡಿದರೆ ಅಬ್ಬಿಫಾಲ್ಸ್ ಜಂಕ್ಷನ್ ಬಳಿ ಇರುವ ನಂದಿಮೊಟ್ಟೆ ಎಂಬ ಸ್ಥಳದಲ್ಲಿ ಈ ಅತೀ ದೊಡ್ಡ ಗ್ಲಾಸ್ ಬಿಡ್ಜ್ ಸಿಗುತ್ತದೆ. ಈ ಬ್ರಿಡ್ಜ್ 180 ಮೀಟರ್ ಉದ್ದ, 5 ಮೀಟರ್ ಅಗಲ, 250 ಅಡಿ ಎತ್ತರದಲ್ಲಿರುವ ಈ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಎಲ್ಲರ ಗಮನ ಸೆಳೆಯುತ್ತಿದೆ.

ಕೊಡಗಿನ‌ ಈ ಸ್ವಾಭಾವಿಕ ಪ್ರಕೃತಿಯ ಸೌಂದರ್ಯ ಇಡೀ ವಿಶ್ವದ ಗಮನ ಸೆಳೆದಿದೆ. ಅದರಲ್ಲೂ ಇಲ್ಲಿನ ವೀವ್ ಪಾಯಿಂಟ್‌ಗಳಂತೂ ಮನಮೋಹಕವಾಗಿದೆ. ಅದರ ಸಾಲಿಗೆ ಸದ್ಯ ಬೆಟ್ಟದ ಇಕ್ಕೆಲಗಳ‌ ನಡುವೆ ಇದೀಗ ಖಾಸಗಿಯವರಿಂದ ನಿರ್ಮಾಣವಾಗಿರುವ ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್ ಸೇರಿದೆ. ಹಸಿರ ಪ್ರಕೃತಿಯ ನಡುವೆ ಪಾರದರ್ಶಕ ಗಾಜಿನ ಮೇಲೆ ನಡೆಯುವ ರೋಮಾಂಚಕ ಅನುಭವವನ್ನು ಪ್ರವಾಸಿಗರು ಪಡೆದುಕೊಳ್ಳುತ್ತಿದ್ದಾರೆ.

ಸುಮಾರು 15 ಟನ್ ಬಾರ ಹೊರುವ ಸಾಮರ್ಥ್ಯದ ಈ ಬ್ರಿಡ್ಜ್‌ನಲ್ಲಿ ಒಮ್ಮೆಗೆ 30 ರಿಂದ 35 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದಾಗಿದೆ. ಮಳೆಗಾಲ, ಚಳಿಗಾಲದ ಸಮಯದಲ್ಲಿ ಮೋಡಗಳ ಮರೆಯಲ್ಲಿ ಥ್ರಿಲ್ಲಿಂಗ್ ಅನುಭವ ಪ್ರವಾಸಿಗರಿಗೆ ಸಿಗಲಿದೆ.

ಕೇರಳದ ವಯನಾಡಿನಲ್ಲಿ ಖಾಸಗಿಯಾಗಿ ನಿರ್ಮಾಣವಾಗಿದ್ದ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಬಿಟ್ಟರೆ, ದಕ್ಷಿಣ ಭಾರತದ ದೊಡ್ಡ ಗ್ಲಾಸ್ ಬ್ರಿಡ್ಜ್ ಎನ್ನುವ ಖ್ಯಾತಿ ಗಳಿಸಿದೆ. ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಗರಿಮೆಗೂ ಈ ಬಿಡ್ಜ್ ಪಾತ್ರವಾಗಿದೆ. ಇದು ಪ್ರವಾಸಿಗರನ್ನು ಕೊಡಗಿನತ್ತ ಮತ್ತಷ್ಟೂ ಆಕರ್ಷಿಸುತ್ತಿದೆ.

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ