Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಪಿಯಲ್ಲಿ ಮಹಿಳಾ ಸುರಕ್ಷತೆ ಮತ್ತು ಭದ್ರತೆ ಕುರಿತು ವಿಶೇಷ ಜಾಗೃತಿ ಅಭಿಯಾನ

ವಿಜಯನಗರ (ಹೊಸಪೇಟೆ) ಮೇ.11: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ಮಹಿಳಾ ಸಬಲೀಕರಣ ಘಟಕ, ಅಕ್ಕ ಪಡೆ ಹಾಗೂ ವಿಜಯ ಮಹಿಳಾ ಸುರಕ್ಷಾ ಪಡೆ ತಂಡಗಳ ಸಂಯುಕ್ತ ಆಶ್ರಯದಲ್ಲಿ ಹಂಪಿ ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಮಹಿಳಾ ಸುರಕ್ಷತೆ ಮತ್ತು ಭದ್ರತೆಯ ಕುರಿತು ಸೋಮವಾರ ವಿಶೇಷ ಜಾಗೃತಿ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತ್ತು.

ವಿಶ್ವ ಪಾರಂಪರಿಕ ತಾಣವಾದ ಹಂಪಿಯ ವಿರೂಪಾಕ್ಷ ದೇವಾಲಯ, ರಥ ಬೀದಿ ಹಾಗೂ ಬಸ್ ನಿಲ್ದಾಣದ ಸುತ್ತಮುತ್ತ ಸಾರ್ವಜನಿಕರು ಮತ್ತು ಪ್ರವಾಸಿ ಮಹಿಳೆಯರಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಮಿಷನ್ ಸಂಯೋಜಕರಾದ ವಿದ್ಯಾ ಹಾಗೂ ಜೆಂಡರ್ ಸ್ಪೆಷಲಿಸ್ಟ್ ಅನ್ನಪೂರ್ಣ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಾದ 'ಮಿಷನ್ ಶಕ್ತಿ', 'ಬೇಟಿ ಬಚಾವೋ ಬೇಟಿ ಪಡವೋ' ಮತ್ತು 'ಸಖಿ ಒನ್ ಸ್ಟಾಪ್ ಸೆಂಟರ್'ಗಳ ಸೌಲಭ್ಯಗಳನ್ನು ಮಹಿಳೆಯರು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ವಿವರಿಸಿದರು. ಸಖಿ ಕೇಂದ್ರದ ನಿರ್ವಾಹಕಿ ಬಶೀರಾ ಬಿ ಅವರು ಸಂಕಷ್ಟದಲ್ಲಿರುವ ಮಹಿಳೆಯರಿಗೆ ಕೇಂದ್ರವು ನೀಡುವ ಆಸರೆಯ ಬಗ್ಗೆ ಮಾಹಿತಿ ನೀಡಿದರು.

ಯಾವುದೇ ಅಹಿತಕರ ಘಟನೆಗಳು ನಡೆದಾಗ ಅಥವಾ ತುರ್ತು ಸಂದರ್ಭದಲ್ಲಿ  ಮಹಿಳಾ ಸಹಾಯವಾಣಿ: 181
ಪೊಲೀಸ್ ತುರ್ತು ಸೇವೆ: 112, ಮಕ್ಕಳ ಸಹಾಯವಾಣಿ: 1098, ಸೈಬರ್ ಕ್ರೈಂ ಸಹಾಯವಾಣಿ: 1930 ಗೆ ಸಂಪರ್ಕಿಸಬಹುದು. ಅಲ್ಲದೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ  ಕುರಿತು ತಂಡದ ಸದಸ್ಯರು ಸಾರ್ವಜನಿಕರಿಗೆ ತಿಳುವಳಿಕೆ ನೀಡಿದರು. ಅಕ್ಕ ಪಡೆ ಮತ್ತು ವಿಜಯ ಮಹಿಳಾ ಸುರಕ್ಷಾ ಪಡೆಯ ಸಿಬ್ಬಂದಿಗಳು ಸ್ಥಳದಲ್ಲಿದ್ದ ಮಹಿಳಾ ಪ್ರವಾಸಿಗರೊಂದಿಗೆ ಸಂವಹನ ನಡೆಸಿ, ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಗಳು, ಅಕ್ಕ ಪಡೆ ಹಾಗೂ ವಿಜಯ ಮಹಿಳಾ ಸುರಕ್ಷಾ ಪಡೆಯ ಸದಸ್ಯರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಗಜೇವಣಿ ಗ್ರಾಮದ ಕೆರೆಗೆ ಅಳವಡಿಸಲಾದ ಪೈಪಲೈನ್ ತೆರವುಗೊಳಿಸುವಂತೆ ಮನವಿ ಸಿದ್ಧಾರ್ಥ ನಗರದ ಜನರ ಸಮಸ್ಯೆ ಆಲಿಸಿ, ಕ್ರಮಕ್ಕೆ ಸೂಚಿಸಿದ ಶಾಸಕ ನಾರಾ ಭರತ್ ರೆಡ್ಡಿಒಂದು ಚಿನ್ನ, ಎರಡು ಬೆಳ್ಳಿ, ಮೂರು ಕಂಚಿನ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ  ಅರ್ಜಿ ಅಹ್ವಾನಉಚಿತ ಬೇಸಿಗೆ ಶಿಬಿರಕ್ಕೆ ಡಿಸಿ ಸಂಗಪ್ಪ ಚಾಲನೆಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಹುಬ್ಬಳ್ಳಿಯಲ್ಲಿ ಮೇ 16, 17 ರಂದು 12ನೇ 'ಮೇ ಸಾಹಿತ್ಯ ಮೇಳ': ಅಲ್ಲಮಪ್ರಭು ಬೆಟ್ಟದೂರುವಿಶ್ವಕರ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಮೇ 31ರಂದು ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಮಾವಿನ ಮೇಳಕ್ಕೆ 10 ವರ್ಷ; ಹಲವು ವಿಶೇಷಪ್ರಧಾನಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ: ಭೂಮರಡ್ಡಿ