Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷ ಚೇತನರು ಬುದ್ದನ ಮಕ್ಕಳು: ಕೆ.ವಿ.ಪ್ರಭಾಕರ್

ಬೆಂಗಳೂರು ಆ22: ಭಿನ್ನ, ವಿಭಿನ್ನ ಸಾಧ್ಯತೆಗಳ ವಿಶೇಷ ಚೇತನರು ಹುಟ್ಟುತ್ತಲೇ ಮನುಷ್ಯ ಜಗತ್ತಿನ‌ ಸಣ್ಣತನಗಳಿಂದ ಮುಕ್ತರಾದವರು. ಹೀಗಾಗಿ ಇವರೆಲ್ಲರೂ
ಬುದ್ದನ ಮಕ್ಕಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು.

ಬಾಲಭವನದಲ್ಲಿ ನಡೆದ "ವಿಶೇಷ ಚೇತನ ಮಕ್ಕಳ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಿನ್ನ ಚೇತನರನ್ನು ಸಮಾಜದ ಅಸಹಜ ರೂಢಿಗತ ಕಣ್ಣುಗಳಿಂದ ನೋಡುವುದಕ್ಕಿಂತ ಮನುಷ್ಯ ಸಹಜ ಒಳಗಣ್ಣುಗಳಿಂದ ಗಮನಿಸಬೇಕಿದೆ.

ಈ ಮಕ್ಕಳು ಜೀವನ ಪರ್ಯಂತ ಮಕ್ಕಳಾಗೇ ಇರುತ್ತಾರೆ. ಅಂದರೆ ಮಗುವಿನ ಸಹಜ ನಿಷ್ಕಲ್ಮಷ ಸ್ವಭಾವ ಜೀವನವಿಡೀ ಇರುತ್ತದೆ.

*ಈ ಮಕ್ಕಳು ಸುಳ್ಳು ಹೇಳುವುದಿಲ್ಲ.
*ಈ ಮಕ್ಕಳು ವಂಚಕರಾಗುವುದಿಲ್ಲ.
*ಈ ಮಕ್ಕಳು ಕಳ್ಳರು, ಕೊಲೆಗಾರರಾಗುವುದಿಲ್ಲ.
*ಈ ಮಕ್ಕಳು ಹೊಟ್ಟೆಕಿಚ್ಚು ಪಡುವುದಿಲ್ಲ.
*ಈ ಮಕ್ಕಳು ದುರಾಸೆ ಪಡುವುದಿಲ್ಲ.
*ಈ ಮಕ್ಕಳು ಜಾತಿವಾದಿಗಳಾಗುವುದಿಲ್ಲ.
*ಈ ಮಕ್ಕಳು ಕೋಮುವಾದಿಗಳಾಗುವುದಿಲ್ಲ.

ಹೀಗಾಗಿ ಇವರೆಲ್ಲರೂ ಹುಟ್ಟುತ್ತಲೇ ಉಳಿದ ಮನುಷ್ಯ ಜಗತ್ತು ಆಚರಿಸುವ ಸಣ್ಣತನಗಳಿಂದ ಮುಕ್ತವಾಗಿ ತೊಳೆದ ನೀತಿನಂಥಾ ವ್ಯಕ್ತಿಗಳಾಗುತ್ತಾರೆ.

ಬುದ್ದ ಜೀವಮಾನವಿಡೀ ಮನುಷ್ಯ ಜಗತ್ತನ್ನು ಸಣ್ಣತನಗಳಿಂದ ಮುಕ್ತಿಗೊಳಿಸಲು ಶ್ರಮಿಸಿದ್ದರು. ಅದಕ್ಕೇ ಇವರೆಲ್ಲರೂ ಬುದ್ದನ ಮಕ್ಕಳು. ಹೀಗಾಗಿ ನನಗೆ ಈ ಮಕ್ಕಳ ಬಗ್ಗೆ ಮಾತನಾಡುವುದು ಏನೂ ಇಲ್ಲ.

ಆದರೆ, ಪೋಷಕರ ಜೊತೆ ನನ್ನ ಕೆಲವೊಂದು ಅನಿಸಿಕೆಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ.

ಇಲ್ಲಿ ಸಂಕಟ ಪಡುತ್ತಿರುವವರು ಮಕ್ಕಳಲ್ಲ. ಮಕ್ಕಳು ತಮ್ಮ ಪಾಡಿಗೆ ತಾವು ಖುಷಿಯಾಗಿದ್ದಾರೆ. ಆದರೆ, ಮಕ್ಕಳ ಬಗ್ಗೆ ಸಂಕಟ ಪಡುತ್ತಾ ಪೋಷಕರು ದುಃಖ ಪಡುತ್ತಿದ್ದಾರೆ. ಈ ದುಃಖಕ್ಕೆ ಮೂಲ ಕಾರಣ ಹೋಲಿಕೆ.

ಇತರೆ ಮಕ್ಕಳಂತೆ ನಮ್ಮ ಮಕ್ಕಳಿಲ್ಲ ಎನ್ನುವ ಹೋಲಿಕೆ. ಈ ಹೋಲಿಕೆಗೆ ಕೊನೆ ಇಲ್ಲ. ಎಲ್ಲಾ ಪೋಷಕರಿಗೂ ತಮ್ಮ ಮಕ್ಕಳನ್ನು ಇತರೆ ಮಕ್ಕಳ ಜೊತೆ ಹೋಲಿಕೆ ಮಾಡುವ ಮಾನಸಿಕ ಸಮಸ್ಯೆ ಇದೆ. ಸಮಾಜದ ರೂಡಿಗತ ಅಭಿಪ್ರಾಯಗಳು ಹೋಲಿಕೆಗೆ ಕಾರಣ. ಹೋಲಿಕೆಗೆ ಬ್ರೇಕ್ ಹಾಕಿದರೆ, ಸಂಕಟಕ್ಕೂ ಬ್ರೇಕ್ ಬೀಳುತ್ತದೆ.

ಹೋಲಿಕೆಯಿಂದ, ಪೋಷಕರು ನರಳಿ, ಇದನ್ನು ನೋಡಿ ಮಕ್ಕಳೂ ನರಳುತ್ತಾರೆ.

ಹೋಲಿಕೆಯಿಂದ ಮೊದಲು ಪೋಷಕರು ಖುಷಿಯಾಗಿರುವ ಸ್ವತಂತ್ರ ಕಳೆದುಕೊಳ್ಳುತ್ತಾರೆ. ಬಳಿಕ , ಮಕ್ಕಳ ಖುಷಿಯ ಸ್ವತಂತ್ರ ಕಿತ್ತುಕೊಳ್ಳುತ್ತಾರೆ ಎಂದರು.

ಭಿನ್ನ ಚೈತನ್ಯದ ಮಕ್ಕಳಿಗೆ ವಿಶೇಷ ಅರ್ಹತೆ ಮತ್ತು ತರಬೇತಿ ಇರುವ ಶಿಕ್ಷಕರು ಬೇಕು ಎನ್ನುವುದೇನೋ ಸರಿ. ಆದರೆ ಸ್ವಾತಂತ್ರ್ಯ ದಿನಾಚರಣೆ, ಸಾಂಸ್ಕೃತಿಕ‌ ಸಡಗರದಂತಹ ಈ ಕಾರ್ಯಕ್ರಮ ಪ್ರತ್ಯೇಕವಾಗಿ ನಡೆಸಬೇಕಿಲ್ಲ. ಉಳಿದ ಮಕ್ಕಳ ಜೊತೆಗೇ, ಉಳಿದ ಪೋಷಕರ ಜೊತೆಗೇ ಆಚರಿಸುವುದು ಅರ್ಥಪೂರ್ಣ ಎಂದುಕೊಳ್ಳುತ್ತೇನೆ.

ಆಗಸ್ಟ್ 15 ರಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಪರೇಡ್ ನಲ್ಲಿ ದೃಷ್ಟಿಹೀನ ಮಕ್ಕಳ ತಂಡವೂ ಉಳಿದ ಮಕ್ಕಳ ತಂಡದಷ್ಟೇ ಯಶಸ್ವಿಯಾಗಿ ಭಾಗವಹಿಸಿತ್ತು.

ದೇಶಕ್ಕೆ ಒಲಂಪಿಕ್ ನಲ್ಲಿ, ಕ್ರೀಡೆಗಳಲ್ಲಿ ಅತಿ ಹೆಚ್ಚು ಪದಕ ತರುತ್ತಿರುವುದು ಭಿನ್ನ ಚೈತನ್ಯದ ಪಟುಗಳೇ ಎನ್ನುವುದನ್ನು ಮರೆಯಬಾರದು.

ಹೀಗಾಗಿ ನಾನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಮುಂದಿನ ಜನವರಿ 26 ಮತ್ತು ಆಗಸ್ಟ್ 15 ರಂದು ವಿಶೇಷ ಚೇತನ‌ ಮಕ್ಕಳ ತಂಡವೂ ಮಾಣಿಕ್ ಷಾ ಪರೇಡ್ ಮೈದಾನದಲ್ಲೇ ಉಳಿದ ಮಕ್ಕಳ ಜೊತೆ ಪ್ರದರ್ಶನ ನೀಡುವಂತಾಗಲಿ ಎಂದು ಬಯಸುತ್ತೇನೆ ಎಂದರು.

ಬಾಲಭವನ ಅಧ್ಯಕ್ಷರಾದ ಬಿ.ಆರ್.ನಾಯ್ಡು, ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ನಟರಾಜ್ ಹಾಗೂ 18 not out ಸರ್ಕಾರೇತರ ಸಂಸ್ಥೆಯ ಮುಖ್ಯಸ್ಥರಾದ ಬಸವರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

300 ಕ್ಕೂ ಹೆಚ್ಚು ಭಿನ್ನ, ವಿಭಿನ್ನ ಚೈತನ್ಯದ ಮಕ್ಕಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ