Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ

ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ



ವಿಜಯಪುರ,ಜುಲೈ.೧೩ : : ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂ.೨೯ ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಭರದಿಂದ ನಡೆದಿದ್ದು,  ಜು.೧೨ರವರೆಗೆ ಜಿಲ್ಲೆಯ ಪ್ರಗತಿ ವರದಿಯ ಪ್ರಕಾರ ಇಲ್ಲಿಯವರೆಗೆ ೧೮,೮೮,೬೫೭ ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ. ಅವುಗಳಲ್ಲಿ ೬,೪೪,೮೧೦ ಗಣಕೀಕರಣಗೊಂಡ ಗಣತಿ ನಮೂನೆಗಳಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿಯಂತೆ  ಜಿಲ್ಲೆಯಲ್ಲಿ ಒಟ್ಟು ೧೯,೮೨,೧೧೪ ಮತದಾರರು ದಾಖಲಾಗಿದ್ದಾರೆ. ಇವರಿಗೆ ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಿ, ಅಗತ್ಯ  ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ ಎಂದವರು ತಿಳಿಸಿದ್ದಾರೆ.
ಗಣತಿ ನಮೂನೆಗಳ ವಿತರಣೆ ಮತ್ತು ಡಿಜಿಟಲೀಕರಣ ಕಾರ್ಯವು ಜೂನ್.೩೦ ರಿಂದ ಜುಲೈ.೨೯ ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ  ದಾಖಲೆಗಳೊಂದಿಗೆ ನಮೂನೆಗಳನ್ನು ಸಲ್ಲಿಸಬಹುದಾಗಿದೆ.
೧,೬೭೪ ಮತದಾರರು ಆನ್ ಲೈನ್ ಮೂಲಕ ಗಣತಿ ನಮೂನೆಗಳನ್ನು ಸಲ್ಲಿಸಿದ್ದಾರೆ. ೩೫೦೯ ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. ೪,೭೩೮ ಮತದಾರರು ಮೃತಪಟ್ಟಿದ್ದಾರೆ. ೧,೩೬೪ಮತದಾರರು ಈಗಾಗಲೇ ನೋಂದಾಯಿಸಿಕೊಂಡಿರುವುದು ಪರಿಶೀಲನೆಯಲ್ಲಿ ಕಂಡುಬಂದಿದೆ.ಸಂಗ್ರಹಿಸಲಾಗದ ಅಥವಾ ಗೈರುಹಾಜರಾಗಿರುವ ಮತದಾರರು ೮೨ ಹಾಗೂ ೯೫ ಇತರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ