Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಗಿಲ್ ಹುತಾತ್ಮರಿಗೆ ವಿಶೇಷ ಘರ ಸಮ್ಮಾನ ಕಾರ್ಯ ಶ್ಲಾಘನೀಯ : ವಾಯ ಎಲ್ ಶೀಗಿಹಳ್ಳಿ

ನೇಸರಗಿ. 1999 ರಲ್ಲಿ  ಭಾರತ ಪಾಕಿಸ್ತಾನ ಕಾರ್ಗಿಲ್ ಯುದ್ಧದಲ್ಲಿ ನಾವು ಜಯಶಾಲಿ ಆದರೂ ನಮ್ಮ ದೇಶದ ಅನೇಕ ಸೈನಿಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ, ದೇಶ ರಕ್ಷಣೆ ಮಾಡಿ ಹುತಾತ್ಮರಾದರು ಅವರ ನೆನಪಿಗಾಗಿ 26 ಕಾರ್ಗಿಲ್ ವಿಜಯ ಉತ್ಸವ ಪ್ರಯುಕ್ತ  ಹುತಾತ್ಮ ಯೋಧರ ಮನೆ ಮನೆಗೆ ತೆರಳಿ, ಅವರ ಪುತ್ತಳಿಗೆ ಸೇನೆಯ ಅಧಿಕಾರಿಗಳಿಂದ  ವಿಶಿಷ್ಟ ಗೌರವ ಸಲ್ಲಿಸುವ ಭಾರತೀಯ ಸೇನೆಯ ಯೋಜನೆ ಕಾರ್ಯ ಶ್ಲಾಘನೀಯ ಎಂದು ನಿವೃತ್ತ ಸೈನಿಕ ಹಾಗೂ ನಿವೃತ್ತ ಪಿ ಎಸ್ ಐ ವಾಯ್ ಎಲ್ ಶೀಗಿಹಳ್ಳಿ ಹೇಳಿದರು.
     ಅವರು ಸಮೀಪದ ಮೇಕಲಮರಡಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ 26 ನೇ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ  ಹುತಾತ್ಮ ಯೋಧ ದಿ. ಯಶವಂತ ಕೋಲಕಾರ ಅವರ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಿ ಮಾತನಾಡಿದರು.

     ರೈತ ಮುಖಂಡ, ಪತ್ರಕರ್ತ ಮಹಾಂತೇಶ ಹಿರೇಮಠ ಮಾತನಾಡಿ ಕಾರ್ಗಿಲ್ ಹುತಾತ್ಮರಿಗೆ ಗೌರವ ಸಲ್ಲಿಸುವದು ಎಲ್ಲ ಭಾರತೀಯರ ಕರ್ತವ್ಯ ಅಗಿದ್ದು ಮಡಿಕೇರಿಯ ಜನರಲ ಕರಿಯಪ್ಪ ಅವರಂತ ಶ್ರೇಷ್ಠ ಸೇನಾ  ಹೋರಾಟಗಾರರನ್ನು ನೆನೆಸುವ ಕಾರ್ಯ ಭಾರತೀಯ ಸೇನೆ ಮಾಡಿದ್ದು ಹೆಮ್ಮೆಯ ಕಾರ್ಯ ಹಾಗೂ ಹುತಾತ್ಮರಾದ ಕಾರ್ಗಿಲ್ ಯೋಧರ ಕುಟುಂಬದ ಜೊತೆ ಭಾರತೀಯ ಸೇನೆ ಹಾಗೂ ಇಡೀ ಭಾರತ ದೇಶವೇ ಇದ್ದು ಹುತಾತ್ಮ ಕುಟುಂಬದ ನೆರವಿಗೆ ಸದಾ ನಾವೆಲ್ಲರೂ ಕೈಜೋಡಿಸಬೇಕು ಎಂದರು.

    ಈ ಕಾರ್ಗಿಲ್ ವಿಜಯ ಉತ್ಸವದಲ್ಲಿ  ಮಾಜಿ ಜಿ ಪಂ ಸದಸ್ಯ ಹಾಗೂ ನೇಸರಗಿ ಬ್ಲಾಕ್ ಕಾಂಗೇಸ್ ಅಧ್ಯಕ್ಷ ನಿಂಗಪ್ಪ ಅರಿಕೇರಿ ಹಾಗೂ ಹೈದರಾಬಾದ ರಿಜಿಮೆಂಟಿನ ಸೇನೆಯ ಅಧಿಕಾರಿಗಳಾದ ನಾಯಕ ಸುಬೇದಾರ ತಿಲಕ್ ಸಿ ಎಲ್, ಆರ್ ಎಚ್ ಎಮ್ ರಾಜೇಶ, ಹವಾಲ್ದಾರ ಲಕ್ಷ್ಮಣ, ಹವಾಲ್ದಾರ ಸಾಯೋಜ, ಹವಾಲ್ದಾರ ಸಂದೀಪ ಅವರುಗಳು  ಹುತಾತ್ಮ ಯೋಧ ದಿ. ಯಶವಂತ ಕೋಲಕಾರ ಅವರ ಪುತ್ತಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಹುತಾತ್ಮ ಹೋಧರ ಪತ್ನಿ ಶ್ರೀಮತಿ ಸಾವಿತ್ರಿದೇವಿ ಯಶವಂತ ಕೋಲಕಾರ ಅವರನ್ನು ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಗ್ರಾ ಪಂ ಅಧ್ಯಕ್ಷ ಶ್ರೀಮತಿ  ಭಾರತಿ ತಿಗಡಿ, ಉಪಾಧ್ಯಕ್ಷ ಕಾಶಿಮ್ ಜಮಾದಾರ, ನೇಸರಗಿ ಮಾಜಿ  ಸೈನಿಕರ ಸಂಘದ ಅಧ್ಯಕ್ಷ ಈರಪ್ಪ ಸೋಮಣ್ಣವರ, ಮಂಜುನಾಥ ಹುಲಮನಿ, ಬಾಬು ಹೊಸಮನಿ, ಶಂಕರ ಬಡಿಗೇರ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು, ನೇಸರಗಿ, ಇಂಚಲ, ಯರಗಟ್ಟಿ ಸೇರಿದಂತೆ ಅನೇಕ ಮಾಜಿ ಸೈನಿಕರ ಸಂಘದ ಸದಸ್ಯರು, ನಿವೃತ್ತ ಹಾಗೂ ಕಾರ್ಯ ನಿರತ ಸೈನಿಕರು, ಅವರ ಕುಟುಂಬಸ್ಥರು, ಮೇಕಲಮರಡಿ ಗ್ರಾಮದ ಹಿರಿಯರು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ