Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿ

ಬೆಂಗಳೂರು, ಮೇ.30: ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಸ್ತುತ 2024-25ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ.

ವಾರದಲ್ಲಿ ಒಂದು ದಿನ ಅಂದ್ರೆ ಪ್ರತಿ ಶನಿವಾರದಂದು ವಿದ್ಯಾರ್ಥಿಗಳಿಗೆ 40 ನಿಮಿಷದ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನ ನಡೆಸಲು ಶಿಕ್ಷಣ ಇಲಾಖೆ ಪ್ಲ್ಯಾನ್ ಮಾಡಿದೆ. ಈ ಮೂಲಕ ಸರ್ಕಾರಿ ಶಾಲೆಯ ಮಕ್ಕಳಿಗೆ ಇಂಗ್ಲಿಷ್ ಇನ್ಮುಂದೆ ಕಬ್ಬಿಣದ ಕಡಲೆಯಲ್ಲ. ಪಿಯುಸಿ ಮುಗಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಭಯ ಪಡೋ ಅಗತ್ಯ ಇರಲ್ಲ. ಕನ್ನಡ ಮಾಧ್ಯಮ ಮಕ್ಕಳು ಬದುಕು ಕಟ್ಟಿಕೊಳ್ಳಲು ಇಂಗ್ಲಿಷ್ ಬಾರದೇ ಪರದಾಡುತ್ತಿದ್ದರು ಸದ್ಯ ಈ ಮಹತ್ವದ ಹೆಜ್ಜೆ ವಿದ್ಯಾರ್ಥಿಗಳ ಮುಂದಿನ ಬದುಕಿಗೆ ಸಹಾಯವಾಗಲಿದೆ.

ಸಂಭಾಷಣೆ, ನಾಟಕ, ಪಾತ್ರಾಭಿನಯ, ಕಥೆ ಹೇಳುವುದು, ಪರಿಸ್ಥಿತಿ ವಿವರಣೆ, ಅನುಭವಗಳ ಹಂಚಿಕೆ ಈ ಎಲ್ಲಾ ಚಟುವಟಿಕೆಗಳು ಸ್ಪೋಕನ್ ಇಂಗ್ಲೀಷ್ ತರಗತಿಗಳಲ್ಲಿ ಇರಲಿವೆ. ಸ್ಪೋಕನ್ ಇಂಗ್ಲೀಷ್ ಪ್ರಸ್ತಾವನೆಯನ್ನ ಶಿಕ್ಷಣ ಇಲಾಖೆಯ 2024-25 ರ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಅಳವಡಿಸಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ