Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏ.೭ ರಂದು ಮೂಡಲಗಿಗೆ ಶ್ರೀ ಸತ್ಯಸಾಯಿ ಪ್ರೇಮವಾಹಿನಿ ರಥ ಆಗಮನ

ಮೂಡಲಗಿ- ಶ್ರೀ ಸತ್ಯಸಾಯಿ ಬಾಬಾರವರ ಜನ್ಮ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಶ್ರೀ ಸತ್ಯಸಾಯಿ ಪ್ರೇಮವಾಹಿನಿ ರಥವು ಏ. ೭ರಂದು ಮುಂಜಾನೆ ೯ ಗಂಟೆಗೆ ನಾಗನೂರ ಪಟ್ಟಣಕ್ಕೆ ಆಗಮಿಸುವದು ಎಂದು ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರ ಸಂಚಾಲಕ ಹನುಮಂತ ಸೊರಗಾವಿ ಹೇಳಿದರು.
ಅವರು ಲಕ್ಷ್ಮೀನಗರದ ಶ್ರೀಸಾಯಿ ಮಂದಿರದಲ್ಲಿ ಭಾನುವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾಗನೂರದಿಂದ ಸ್ವಾಗತಿಸಿಕೊಂಡು ಮೂಡಲಗಿ ಪಟ್ಟಣದ ಎಸ್.ಎಸ್.ಆರ್. ಶಾಲೆಯ ಮುಂದಿನ ಮಾರ್ಗದಿಂದ ಆರತಿ, ಕುಂಭ ಮೇಳ ಹಾಗೂ ವಿವಿಧ ವಾದ್ಯ ಮೇಳಗಳೊಂದಿಗೆ ಭವ್ಯ ಮೆರವಣಿಗೆ ಮೂಲಕ ಪಟ್ಟಣದ ಕಲ್ಮೇಶ್ವರ ಸರ್ಕಲ್, ಕಿತ್ತೂರ ಚೆನ್ನಮ್ಮಾ ಸರ್ಕಲ್, ಕರೆಮ್ಮಾದೇವಿ ಸರ್ಕಲ್, ಸಂಗಪ್ಪಣ್ಣ ಅಂಗಡಿ ಸರ್ಕಲ್ ಮೂಲಕ ಶ್ರೀ ಸಾಯಿ ಮಂದಿರಕ್ಕೆ ಸಾಗಿಬರುವದು. ಮದ್ಯಾಹ್ನ ೧ಗಂಟೆಗೆ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮ ನಂತರ ಅನ್ನಪ್ರಸಾದ ನಡೆಯಲಿದೆ ಎಂದು ಹೇಳಿದರು.
ಸೇವಾ ಕ್ಷೇತ್ರದ ಸದಸ್ಯ ಕೆ.ಬಿ.ನಾವಳ್ಳಿ ಮಾತನಾಡಿ, ಏ. ೭ರಂದು ಮುಂಜಾನೆ ೧೦ಗಂಟೆಗೆ ಶ್ರೀ ಸತ್ಯಸಾಯಿ ಪ್ರೇಮವಾಹಿನಿ ಶೋಭಾ ರಥಯಾತ್ರೆಯನ್ನು ಪಟ್ಟಣದ ಶ್ರೀ ಶಿವಬೋಧರಂಗ ಮಠದ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು, ಶ್ರೀ ಶ್ರೀಧರಬೋಧ ಸ್ವಾಮಿಗಳು, ಸುಣಧೋಳಿ ಶ್ರೀ ಶಿವಾನಂದ ಸ್ವಾಮಿಗಳು, ಅರಬಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯಾಧ್ಯಕ್ಷ ಪದ್ಮನಾಭ ಪೈ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸೇವಾ ಸಂಯೋಜಕಿ ಪ್ರೀಯಾ ಪಿ. ಪೈ, ಸತ್ಯಸಾಯಿ ಸೇವಾ ಸಂಸ್ಥೆಗಳ ಬೆಳಗಾವಿ ಜಿಲ್ಲಾಧ್ಯಕ್ಷ ವಸಂತ ಬಾಳಿಗಾ ಉದ್ಘಾಟಿಸುವರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿ.ಎಮ್.ನಂದಿ, ಐ.ಏ. ಪಾಟೀಲ, ರವಿ ನಂದಗಾವಿ, ಲಕ್ಷ್ಮಣ ಕಂಕಣವಾಡಿ, ಮಲ್ಲಪ್ಪ ಮುರಗೋಡ, ಮಹೇಶ ಹಿರೇಮಠ, ಪಡದಪ್ಪ ಕೋತಿನ, ಪ್ರಕಾಶ ಕಂಕಣವಾಡಿ

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ