Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಣಿ ಕ್ರಿಕೆಟ್‌ ಕಪ್ ಪಂದ್ಯಾವಳಿಗೆ ನಿರ್ಣಾಯಕರಾಗಿ ಶ್ರೀಕಾಂತ ಕಾಖಂಡಕಿ ಆಯ್ಕೆ

ಕ್ರಿಕೆಟ್‌ ತಜ್ಞ ಡಾ.ಅಶೋಕಕುಮಾರ ಜಾಧವ ಮಾರ್ಗದರ್ಶನದಲ್ಲಿ ಈ ಮಹೋನ್ನತ ಸಾಧನೆ

ಹಸಿರು ಕ್ರಾಂತಿ ವರದಿ ವಿಜಯಪುರ

ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜುಲೈ 23 ರಿಂದ ಆಗಸ್ಟ್‌ 2 ರವರೆಗೆ ನಡೆಯಲಿರುವ ಮಹಿಳೆಯರ ಮಹಾರಾಣಿ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಪಂದ್ಯಾವಳಿಗೆ ದೇವರಹಿಪ್ಪರಗಿ ಶ್ರೀಕಾಂತ ಕಾಖಂಡಕಿ ಆನ್‌ಫೀಲ್ಡ್ ಅಂಪೈರ್‌ ಆಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಉನ್ನತ ಪಂದ್ಯಾವಳಿಯಲ್ಲಿ ಅಂಪೈರ್‌ ಆಗಿ ಆಯ್ಕೆಯಾದವರಲ್ಲಿ ವಿಜಯಪುರ-ಬಾಗಲಕೋಟೆ ಜಿಲ್ಲೆಯ ಪ್ರಥಮ ನಿರ್ಣಾಯಕರಾಗಿ ಆಯ್ಕೆಯಾಗಿದ್ದಾರೆ. 

ರಾಷ್ಟ್ರೀಯ ಟೆನ್ನಿಸಬಾಲ್‌ ಕ್ರಿಕೆಟ್‌ ಚಾಂಪಿಯನಶಿಪ್‌ ಪಂದ್ಯಾವಳಿಗಳಲ್ಲಿ, ಹಿಮಾಚಲ ಪ್ರದೇಶದ ಕುಲ್ಲು, ಉತ್ತರ ಪ್ರದೇಶದ ವಾರಣಾಸಿ, ಬಿಹಾರ, ಗುಜರಾತ, ಚೆನ್ನೈ, ಗೋವಾದಲ್ಲಿ ಈಗಾಗಲೇ ಅಂಪೈರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ವಿಜಯಪುರದ ಖ್ಯಾತ ಕ್ರಿಕೆಟ್‌ ತಜ್ಞ ಡಾ.ಅಶೋಕಕುಮಾರ ಜಾಧವ ಮಾರ್ಗದರ್ಶನದಲ್ಲಿ ಈ ಮಹೋನ್ನತ ಸಾಧನೆಗೈದಿದ್ದಾರೆ. 

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ವಿಜಯಪುರದ ಸಂಯೋಜಕ ಎನ್‌.ಎಂ.ಹುಟಗಿ, ದೇವರಹಿಪ್ಪರಗಿಯ ಮಾಜಿ ಆಟಗಾರ ಶ್ರೀಧರನಾಡಗೌಡ, ರಮೇಶ ಮಸಬಿನಾಳ, ಪ್ರಕಾಶ ಮಲ್ಲಾರಿ, ಕೆಎಸ್‌ಸಿಎ ಸಂಯೋಜಿತ ಕ್ರಿಕೆಟ್‌ ಕ್ಲಬ್‌ಗಳ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳು, ಹಲವಾರು ಕ್ರಿಕೆಟ್‌ ಆಟಗಾರರು ಶ್ರೀಕಾಂತ ಕಾಖಂಡಕಿಯವರಿಗೆ ಹಾರ್ದಿಕವಾಗಿ ಅಭಿನಂದಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜವಾಬ್ದಾರಿಯುತ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಿವಚನ ಸಾಹಿತ್ಯದ ಉಳಿವಿಗೆ ಫ.ಗು.ಹಳಕಟ್ಟಿ ಕೊಡುಗೆ ಅನನ್ಯಬಾಲ್ಯ ವಿವಾಹ ಸಾಮಾಜಿಕ ಅನಿಷ, ಎಲ್ಲಾ ಇಲಾಖೆ ಸಮುದಾಯದ ಸಹಕಾರದಿಂದ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಿಸಿಬೇಕಾಗಿದೆ: ಮಂಜುನಾಥ ನಾಯಕಶ್ರೀ ಗ್ರಾಮದೇವತೆ(ದ್ಯಾಮವ್ವ)ದೇವಿಯ ಜಾತ್ರೋತ್ಸವಸಂಗೀತದ ಮೂಲಕ ಸಮಾಜವನ್ನು ತಿದ್ದುವ ಕೆಲಸವಾಗಬೇಕು: ಆರ್ ಆರ್ ಕುಲಕರ್ಣಿ ಜುಲೈ ೨೦ರಂದು ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ  ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ಶಿವಯೋಗದ ಮಹಾಪರ್ವತ ಶ್ರೀಮುರುಘೇಂದ್ರ ಶಿವಯೋಗಿಗಳು : ಡಾ.ಶಂಭುಲಿಂಗ ಹೆಗಡಾಳ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ನಿಯೋಗ ಮನವರಿಕೆ: 93 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಕೈಬಿಡಲು ಒಪ್ಪಿದ KHB ಅಧಿಕಾರಿಗಳು ಅಛಲ ನಿರ್ಧಾರ ದೊಂದಿಗೆ ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು : ಸಾಲಿಮಠ