Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ಭುತ ಶಿಲ್ಪ ಕಲಾಕೃತಿಗಳಿಂದ ಜಕಣಾಚಾರಿಯವರು ಅಮರ ಶಿಲ್ಪಿಗಳಾಗಿದ್ದಾರೆ : ಶ್ರೀಶೈಲ ಗುಡುಮೆ

ಮೂಡಲಗಿ: ಜಕಣಾಚಾರಿಯವರು ಶಿಲ್ಪ ಕಲೆಯನ್ನೇ ಜೀವನ್ನಾಗಿಸಿಕೊಂಡಿದ್ದ ಕರಕುಶಲಕರ್ಮಿ, ಅವರ ಅದ್ಭುತ ಶಿಲ್ಪ ಕಲಾಕೃತಿಗಳ ಮೂಲಕ ಅಮರ ಶಿಲ್ಪಿಗಳಾಗಿದ್ದಾರೆ ಎಂದು ಮೂಡಲಗಿ ತಹಶೀಲ್ದಾರರಾದ ಶ್ರೀಶೈಲ ಗುಡುಮೆ ಹೇಳಿದರು.

ಗುರುವಾರದಂದು ಪಟ್ಟಣದ ಮೂಡಲಗಿ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯದ ಸಭಾಭವನದಲ್ಲಿ ಮೂಡಲಗಿ ವಿಶ್ವಕರ್ಮ ಸಮಾಜದ ಸಂಯುಕ್ತಾಶ್ರಯದಲ್ಲಿ ಜರುಗಿದ ಅಮರಶಿಲ್ಪಿ ಜಕಣಾಚಾರಿಯವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಜಕಣಾಚಾರಿಯವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸುವ ಮೂಲಕ ಮಾತನಾಡಿದ ಅವರು, ಜಕಣಾಚಾರ್ಯರಂತೆ ಈಗಿನ ಶಿಲ್ಪಕಾರರ ಕಾಯಕವು ನಿಪುಣತೆಯಿಂದ ಕೂಡಿದ್ದು ಅವರನ್ನು ಗುರುತಿಸಿ ಬೆಳೆಸುವ ಅಗತ್ಯತೆಯಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ಶಿಕ್ಷಕರಾದ ಸದಾಶಿವ ಮಾದರರವರು ಮಾತನಾಡಿ, ಜಗತ್ತಿಗೆ ವಿಶ್ವಕರ್ಮರ ಕೊಡುಗೆ ಅನನ್ಯವಾಗಿದ್ದು, ಅವರ ಕಲೆ ಸಂಸ್ಕೃತಿ ಉತ್ಕೃಷ್ಟವಾಗಿವೆ.
ಜಕಣಾಚಾರಿಯವರು ಹೊಯ್ಸಳರ ದೇವಾಲಯಗಳಾದ ಬೇಲೂರು ಮತ್ತು ಹಳೆಬೀಡುಗಳಲ್ಲಿ ಅದ್ಭುತ ಶಿಲ್ಪಗಳನ್ನು ಕೆತ್ತಿದರು. ಅವರ ಮಗ ಡಕಣಾಚಾರಿ ಕೂಡ ಶ್ರೇಷ್ಠ ಶಿಲ್ಪಕಾರರಾಗಿ ತಂದೆಗೆ ತಕ್ಕ ಮಗ ಅನಿಸಿಕೊಂಡಿದ್ದರು ಎಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಮೂಡಲಗಿಯ ಶಿಲ್ಪಕಾರರಾದ ಈರಪ್ಪ.ಶಂ.ಬಡಿಗೇರ(ವಂದಾಲ) ಅವರನ್ನು ಗೌರವಿಸಿ ಸತ್ಕರಿಸಲಾಯಿತು.



ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ಹಿರೇಮಠ, ತಾಲೂಕಾ ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಫ್.ಸಿ.ಚಿನ್ನನವರ, ಸಿಡಿಪಿಓ ಯಲ್ಲಪ್ಪ ಗದಾಡಿ, ವಿಶ್ವಕರ್ಮ ಸಮಾಜ ಬಾಂಧವರಾದ ಮೌನೇಶ್ ಪತ್ತಾರ್, ಶ್ರೀಕಾಂತ ಪತ್ತಾರ್, ಮಾರುತಿ ಬಡಿಗೇರ, ಭಗವಂತ ಬಡಿಗೇರ, ಈರಪ್ಪ ಬಡಿಗೇರ, ಧರೆಪ್ಪ ಕಂಬಾರ, ಆನಂದ ಪತ್ತಾರ್, ಸಂತೋಷ ಪತ್ತಾರ್, ಚೇತನ್ ಪತ್ತಾರ್, ಶಶಿಕಾಂತ ಪತ್ತಾರ್, ಆತ್ಮಾನಂದ ಬಡಿಗೇರ, ಚಂದ್ರಶೇಖರ್ ಪತ್ತಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಿರಸ್ತೇದಾರರಾದ ಪರಸಪ್ಪ ನಾಯಕ ನಿರೂಪಿಸಿ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ